Home / ಕವನ / ಕವಿತೆ / ಹಸುಮಗಳಽ ನೀಲಮ್ಮ

ಹಸುಮಗಳಽ ನೀಲಮ್ಮ

ಹಸುಮಗಳ ನೀಲಮ್ಮ ಬಸವಗ ಶರಣೆನ್ನ|
ನಸಲಿ ಮಾರಗದ ವಡಿಯಾಗ| ಈ ಶರಣವು ಮಾಡಿ|
ಹಸಿಗಿ ಬಾಗನ್ನಿ ಗರುಡಽವ ||೧||

ಹಕ್ಕಿ ಹಸಿಗೊಯ್ಯ ಕೋಗಿಲ ಪತ್ತಽಲೊಯ್ಯ|
ಅಕ್ಕ ನಾಗಮ್ಮ ಕತೀ ನಡಿಸ| ಈ ಸೋಬಾನಾ|
ಸಾಗನೂರವರ ಮನಿಯಾಗ ||೨||

ಆರಸರ ಹೆಂಡಽರ್‍ಯಾ ಅರವತ್ತಿನ ರಾಣ್ಯರ್‍ಯಾ|
ನೀಲವಽರಣ ಬಳಿಯವರ್‍ಯಾ| ನಮ್ಮವ್ವಗಳಿರ್‍ಯಾ|
ಬೇಗ ಸೋಬನಕ ಬರಽಬೇಕ ||೩||

ಗೌಡರ ಹೆಂಡರ್‍ಯಾ ಅರವತ್ತಿನ ರಾಣ್ಯಾರ್‍ಯಾ|
ನೀಲವಽರಣದ ಬಳಿಯವರ್‍ಯಾ| ನಮ್ಮವ್ವಗಳಿರ್‍ಯಾ|
ಬೇಗ ಸೋಬನಕ ಬರಽಬೇಕ ||೪||

ಹೆಂದಽರ ಮ್ಯಾಲಲ್ಲಿ ಜೋಡೆಡ್ಡು ಗಿಣಿ ಕೂತು|
ಪಂಕನಲ್ಲಾಡಿ ನಗತಾವ| ಅವು ಮಾತಾಡ್ಯಾವ|
ಅಕ್ಕ ಭಾವಾಗ ವರನಂದ ||೫||

ಕುಂಬೀಯನೆ ಮ್ಯಾಲ ಜೋಡೆಡ್ಡ ಗಿಣಿ ಕೂತು|
ಕಂಗನಲ್ಲಾಡಿ ನಗತಾವ| ಅವು ಮಾತಾಡ್ಯಾವ|
ತಂಗಿ ಮೈದುನಗ ವರನಂದ ||೬||

ಇಟ್ಟು ಹಾಡನೆಲ್ಲ ಒತ್ತಿ ಭರಣವ ತುಂಬಿ|
ವಜ್ಜರದ ಕೀಲಿ ಜಡಽದೇವ| ಈ ನಮ್ಮಽ ಹಾಡ|
ಸೋಬನಿದ್ದಲ್ಲಿ ತಗಽದೇವ ||೭||
*****

ಫಲಶೋಭನದ ಸಂಭ್ರಮವು ಇದರಲ್ಲಿ ವರ್ಣಿಸಲ್ಪಟ್ಟಿದೆ.

ಛಂದಸ್ಸು:- ತ್ರಿಪದಿ.

ಶಬ್ದ ಪ್ರಯೋಗಗಳು:- ನಸಲಿಮಾರಗ=ನೊಸಲಮಾರ್ಗ(?) ಅರವತ್ತಿನ ರಾಣ್ಯರ್‍ಯಾ=ದೊಡ್ಡ ಮನೆತನದ ಮೂಲಕ ಮನೆಗೆಲಸವು ಮುಗಿಯುವುದಕ್ಕೆ ತಡೆವಾಗುವುದರಿಂದ ಅರವೊತ್ತಿಗೆ ಸರವೊತ್ತಿಗೆ ಊಟ ಮಾಡುವರು. ಎಡ್ಡು=ಎರಡು. ಪಂಕನಲ್ಲಾಡಿ-ಪಕ್ಕಗಳನ್ನು ಅಲುಗಿಸಿ. ಕಂಗದಲ್ಲಾಡಿ=ಗರಿಗಳನ್ನು ಅದುರಿಸಿ. ವರ=ತಕ್ಕ. ಹೆಕ್ಕಿ ಹಸಿಗೊಯ್ಯ=ಹಕ್ಕಿಗಳಿರಾ ಸೇಸೆ ಎರೆಯಿರಿ. ಕತೀ ನಡಿಸು=ಕಾರ್ಯವನ್ನು ಸಾಗಿಸು.

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...