Home / ಲೇಖನ / ಇತರೆ / ಶಾಲೆಗೆ ಬಂದ ಚಿರತೆ

ಶಾಲೆಗೆ ಬಂದ ಚಿರತೆ

ಜುಲೈ ೨೦೧೫ ರಂದು ಗುರುವಾರ ದಿನದಂದು ಚಿಕ್ಕ ಮಗಳೂರಿನಲ್ಲಿ ಜರುಗಿದ ಕತೆಯಿದು. ಚಿಕ್ಕ ಮಗಳೂರಿನ ಹೃದಯ ಭಾಗದಲ್ಲಿರುವ ಟೌನ್ ಮಹಿಳಾ ಸಮಾಜ ಶಾಲೆಗೆ (ಟಿ‌ಎಂಎಸ್) ಚಿರತೆಯೊಂದು ಬಂದೇ ಬಿಟ್ಟಿತು!

ಅಲ್ಲಿದ್ದ ಮಕ್ಕಳು ಶಿಕ್ಷಕರೆಲ್ಲ ಗಾಬರಿ ಬಿದ್ದು ಓಡಿದರು. ಈ ಚಿರತೆ ಶಾಲೆಗೆ ಬರುವ ಮುನ್ನ- ಕೋರ್ಟು ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಪಟ್ಟಾಭಿರಾಮೇಗೌಡ ಎಂಬುವವರ ಮೇಲೆ ಎರಗಿ ಗಾಯ ಮಾಡಿದೆ!

ಶಾಲೆಗೆ ಬಂದ ಚಿರತೆಯನ್ನು ಕೊಠಡಿಯಲ್ಲಿ ಬಂದಿಯನ್ನಾಗಿಸಿ ಉಪಾಯವಾಗಿ ಮೆಲ್ಲಗೆ ಕಿಟಕಿ ಹಾಕುವಾಗ ಅದು ಅರಣ್ಯ ಇಲಾಖೆಯ ಚಾಲಕ ಗಣೇಶ್ ಎಂಬುವರ ಬಲಗೈಯ ನಾಲ್ಕು ಬೆರಳುಗಳನ್ನು ಕಚ್ಚಿದೆ! ಇವರನ್ನು ಮಂಗಳೂರಿಗೆ ಹೆಚ್ಚಿನ ಚಿಕಿತ್ಸೆಗಾಗಿ ಕಳಿಸಿದ್ದಾರೆ! ಶಾಲೆ ಪಕ್ಕದ ಕಡೂರು ಕ್ಲಬ್ ಕಡೆಯಿಂದ ಮರದ ಮೇಲಿಂದ ರಸ್ತೆಗೆ ಚಿರತೆ ಜಿಗಿದಿದೆ. ಅಲ್ಲಿಂದ ಶಾಲೆಗೆ ಬಂದಿದೆ. ಅದನ್ನು ಕಂಡು ಎಲ್ಲರೂ ಹೌಹಾರಿದ್ದಾರೆ. ಅಲ್ಲೇ ಇದ್ದ ನೆರಳಚ್ಚು ಯಂತ್ರದ ಕೊಠಡಿ ಸೇರಿಕೊಂಡಿದೆ.

ತದ ನಂತರ ಸ್ಥಳಕ್ಕೆ ಬಂದ ಅರಣ್ಯ ಸಿಬ್ಬಂದಿ ಸತತವಾಗಿ ಐದಾರು ತಾಸು ಕಾರ್ಯಚರಣೆಯ ಮೂಲಕ ಸುರಕ್ಷಿತವಾಗಿ ಚಿರತೆಯನ್ನು ಸೆರೆ ಹಿಡಿದರು.

ಶಿವಮೊಗ್ಗದ ಪಶು ವೈದ್ಯಕೀಯ ಕಾಲೇಜಿನ ಡಾ. ವಿನಯ್‌ ಅವರು ಅರಿವಳಿಕೆಯ ಚುಚ್ಚುಮದ್ದನ್ನು ಅಲ್ಲಿದ್ದ ಚಿರತೆಗೆ ಯಶಸ್ವಿಯಾಗಿ ಸಿಡಿಸಿ ಅಲ್ಲಿದ್ದ ಜನರಿಂದ ಮೆಚ್ಚುಗೆ ಗಳಿಸಿದರು.

ಈ ಅರಿವಳಿಕೆಯ ಚುಚ್ಚುಮದ್ದನ್ನು ಸಿಡಿಸುವ ಪರಿಣಿತ ಪಶು ವೈದ್ಯರು ಇಡೀ ಚಿಕ್ಕಮಗಳೂರು ಜಿಲ್ಲೆಯಲ್ಲೇ ಇಲ್ಲದಿರುವುದರಿಂದ ಈ ಒಂದು ಚಿರತೆಯ ಕಾರ್‍ಯಚರಣೆಯು ತುಂಬಾ ತಡವಾಯಿತು.

ತದನಂತರ ಈ ಚಿರತೆಯನ್ನು ಸುರಕ್ಷಿತವಾಗಿ ಅರಣ್ಯ ಸಿಬ್ಬಂದಿ ಹಿಡಿದರು. ಸಕಲ ಬಂದೋಬಸ್ತೋವಿನ ನಡುವಿನ ಮಧ್ಯೆ ಭದ್ರಾ ಅಭಯಾರಣ್ಯಕ್ಕೆ ಕ್ಷೇಮವಾಗಿ ಬಿಟ್ಟು ಟಾಟಾ ಮಾಡಿ ಬಂದರು.

ಚಿಕ್ಕಮಂಗಳೂರಿನ ತುಂಬೆಲ್ಲ ಎರಡು ಮೂರು ದಿನ ಚಿರತೆ ಶಾಲೆಗೆ ಬಂದ ಸುದ್ದಿನೇ ಚರ್‍ಚೆಗೆ ಗ್ರಾಸವಾಯಿತು.

ಈಗೀಗ ಕಾಡಿನ ಪ್ರಾಣಿಗಳು ಆಹಾರ, ನೀರು, ಹರಸುತ್ತಾ ನಾಡಿಗೆ ಬರುತ್ತಿವೆ. ನಾಡಿನ ಜನ ಕಾಡನ್ನು ಉಳಿಸಿದರೆ ಮಾತ್ರ ನಾಡು ಉಳಿದೀತೂ ಇಲ್ಲವಾದರೆ ವಿಪತ್ತು ತಪ್ಪಿದ್ದಲ್ಲ! ಗಂಡಾಂತರ ಕಟ್ಟಿಟ್ಟ ಬುತ್ತಿ…
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಕಿಶೋರ್ ಚಂದ್ರ