Home / ಕವನ / ಕವಿತೆ / ಗಿಳಿವಿಂಡು

ಗಿಳಿವಿಂಡು

ಒಂದರಳೆ ಮರದಲ್ಲಿ
ಸಂಜೆಯಾಗಿರುವಲ್ಲಿ
ಒಂದೊಂದೆ ಮರಳುವವು ಸಾಲುಗೊಂಡು :
ಒಂದೊಂದೆ ಮರಳುವವು
ಗಿಳಿಯೆಲ್ಲ ತೆರಳುವವು
ಗೂಡುಗೊಂಡಿಹ ಮರವನಿದಿರುಗೊಂಡು.

ಸಂಧ್ಯೆಯಿಂದೀಚೆಗೆನೆ
ಸ್ಮರನೆಚ್ಚ ಶರಗಳೆನೆ
ತಾಗುತಿದೆ ಗಿಳಿಹಿಂಡು ಬಂದು ಮರಕೆ.
ಕೊಂಬೆಮೇಲೆಳೆಮರಿಯು
ನಂಬಿ ತಾಯಿಯನರಿಯು-
ತಿರೆ ಮಿಡಿಯಿತೆನ್ನೆದೆಯು ದೀನ ಸ್ವರಕೆ.

ಮರ, ಸ್ಮರನ ಬೀಡೆಂದು-
ಗಿಳಿಗಾವಲಿಹುದೆಂದು-
ಗಳಹುತಿದ್ದನು ಹಳೆಯ ದಿನದ ಕವಿಯು :
ಅಂದಿನಾ ಬಾಳಿನಾ
ಇಂದಿನಾ ಹಾಳಿನಾ
ಗತಿ ಬೇರೆ ಶ್ರುತಿ ಬೇರೆ,-ಕಹಿಯು ಸವಿಯು,

ನೂರಾರು ಗಿಳಿಯ ಮನೆ-
ಯೊಳಗೊಂಡ ಮರದ ಕೊನೆ-
ಯೆಲೆಗಳಲಿ ತೂರಾಡಿ ಚೀರಾಡುತ
ಒಂದು ಗಿಳಿಯಿನ್ನೊಂದ-
ನಲ್ಲಿ ಭೀ ಥೂ ಎಂದು,
ತನ್ನದಿದು ತನಗೆಂದು ಹೋರಾಡುತ

ಬರೆ, ಕೇಳಿ ಚೀರ್‍ದನಿಯ,
ನೋಡಿಲ್ಲಿ! ಹೂಗಣೆಯ
ಹಬ್ಬ ವಿಹುದೆನಬಹುದೆ ಕಣ್ಣು ಮುಚ್ಚಿ?
ಒಂದು ಗಿಳಿಯಿನ್ನೊಂದ-
ನೆದುರಿಸಲು ಕಡುನೊಂದು
ಕದನವೆಸಗುತ ಕೂಕ್ಕೆ ಚುಚ್ಚಿ ಚುಚ್ಚಿ?

ಒಂದೊಂದು ಗಿಳಿಗೊಂದು
ಮನೆಯಿಹುದು ಇದ್ದರೂ
ಗಿಳಿಯ ಗೊಂದಣನಿಂತು ಹಾರ್‍ವುದೇಕೆ?
ಬೇರೊಂದು ಗಿಳಿಯ ಮನೆ-
ಯನ್ನು ಸೇರುತ ಕಲಹ-
ವೆಸಗಿ ತಿಳಿವಿಲ್ಲದಲೆ ಸಾರ್‍ವುದೇಕೆ?

ಎಲ್ಲರಿಗೆ ಸವಿಗನಸು,
ಎಲ್ಲರಿಗೆ ಸವಿತಿನಸು,
ಎಲ್ಲರಿಗದೆಲ್ಲವನು ಕೊಡುವಳಿಳೆಯು.
ಕಲ್ಲೆದೆಯವರು ಕೆಲರು
ಮೆಲ್ಲುವರದೆಲ್ಲವನು
ಇಲ್ಲಿಹುದು ನೋಡು ಅನ್ಯಾಯದೆಳೆಯು!

ಬಳಿಗೆ ಸುಳಿವಳು ರಾತ್ರಿ
ಇವಳೆ ಎಲ್ಲರ ಧಾತ್ರಿ!
ತಲೆಗೊಂದು ಮಂಚವನು ಮಲಗಲಿತ್ತು
ಹಗಲೆಲ್ಲ ಹಿರಿ ವಯಣ,
ಮುಗಿಲುದ್ದ ಕುಡ್ಯಾಣ-
ಕಣಿಗೊಳಿಸುವಳು ಗಿಳಿಯ, ಕ್ರಾಂತಿವೆತ್ತು.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...