Home / ಕವನ / ಅನುವಾದ / ಇನ್ನಿಸ್ ಫ್ರೀ ದ್ವೀಪ

ಇನ್ನಿಸ್ ಫ್ರೀ ದ್ವೀಪ

ಇದೋ ಎದ್ದೆ ನಾನೀಗಲೆ ಹೋಗುವೆ ಇನ್ನಿಸ್ ಫ್ರೀ ದ್ವೀಪಕ್ಕೆ
ಕಟ್ಟುವೆನಲ್ಲಿ ಮಣ್ಣಿನದೊಂದು ಪುಟ್ಟ ಮನೆಯನ್ನು ವಾಸಕ್ಕೆ;
ಚಪ್ಪರದವರೆಯ ಬಳ್ಳಿಮಾಡಗಳ, ಜೇನುಗೂಡಗಳ ಹಬ್ಬಿಸುವೆ
ತುಂಬಿಯ ಗುಂಜಾರವದಲಿ ತುಂಬಿದ ಬಯಲಲ್ಲೊಬ್ಬನೆ ವಾಸಿಸುವೆ.

ಶಾಂತಿ ಸಿಕ್ಕುವುದು ಅಂಥಲ್ಲೇ, ಅದು ತುಂತುರು ಹನಿಯುವ ಬಾಳಿನಲೇ
ನಸುಕನು ಕವಿದ ಮುಸುಕಿನಿಂದ ಜೀರುಂಡೆಯ ಜಿರ್ರನೆ ದನಿವರೆಗೆ;
ಮಬ್ಬು ಮಿನುಗುವುದು ನಟ್ಟಿರುಳು ಮಧ್ಯಾಹ್ನಕೆ ನೇರಳೆ ಹೊಳಪಲ್ಲಿ
ತುಂಬಿ ನಿಲ್ಲುವುವು ಸಂಜೆಗಳು ಕೋಗಿಲೆಗಳ ರೆಕ್ಕೆಯ ಬಡಿತದಲಿ.

ಹೋಗುವೆನೀಗಲೆ ಅಲ್ಲಿಗೆಂದು, ಯಾಕೆಂದರೆ ಹಗಲಿರುಳೂ ಅಲ್ಲಿ
ಸರೋವರದ ತೆರೆ ಗುಣುಗುಣಿಸುವುವು ಸವರುತ ದಡವನು ಅಂಚಿನಲಿ;
ನಿಲ್ಲುವೆ ದಾರಿಯ ನಡುವೆಯೆ, ಇಲ್ಲವೆ ಪಾದಚಾರಿಗಳ ಹಾದಿಯಲಿ,
ಹೃದಯದಿಂದಲೇ ಎದ್ದು ಬರುವ ಆ ಸದ್ದನು ಆಲಿಸಿ ಕೇಳುತಲಿ.
*****
ಮೂಲ: ವಿಲಿಯಂ ಬಟ್ಲರ್ ಏಟ್ಸ್

ಟಿಪ್ಪಣಿ:
ಏಟ್ಸ್ ತನ್ನ ಕಾವ್ಯಜೀವನದ ಆರಂಭದ ದಿನಗಳಲ್ಲಿ ಬರೆದ ಭಾವಗೀತಾತ್ಮಕವಾದ ಕವಿತೆ. ರೊಮ್ಯಾಂಟಿಕ್ ಮನೋಧರ್‍ಮವನ್ನು ಬಿಂಬಿಸುವ ಈ ಕವನ ಏಟ್ಸ್ ಮುಂದೆ ಬರೆದ ಪ್ರಸಿದ್ಧ ಕವನಗಳ ಶೈಲಿ ರುಚಿಗಳಿಗೆ ಹೊರತಾದದ್ದು. ಆದರೂ ಕವಿಗೆ ಮುಜುಗರ ತರುವಷ್ಟು ಜನಪ್ರಿಯವಾದದ್ದು. ‘ನನ್ನದೇ ಆದ ಗೀತಲಯ ಕೊಂಚವಾದರೂ ಇರುವ ನನ್ನ ಮೊದಲ ಭಾವಗೀತೆ’ ಎಂದು ಏಟ್ಸ್ ಅದರ ಬಗ್ಗೆ ಹೇಳುತ್ತಾನೆ. ಕವಿಯ ಸ್ವಂತ ಪದ್ಯಗಳ ವಾಚನದ ಧ್ವನಿಸುರುಳಿಯೊಂದರಲ್ಲಿ ಈ ಪದ್ಯವೂ ಸೇರಿದೆ.

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...