Home / ಲೇಖನ / ಕೃಷಿ / ಭೂತಾಯಿ ರಕ್ಷಣೆ

ಭೂತಾಯಿ ರಕ್ಷಣೆ

ಬೆಳಗಾಗಿ ನಾನೆದ್ದು ಯಾರಾರ ನೆನೆಯಲಿ
ಎಳ್ಳು ಜೀರಿಗೆ ಬೆಳಿಯೋಳ-ಭೂಮಿ ತಾಯಿಯ
ಎದ್ದೊಂದ ಗಳಿಗೆ ನೆನೆದೇನ.

ಹಳ್ಳಿಯ ಮಹಿಳೆಯೊಬ್ಬಳು ಈ ಜಾನಪದ ಹಾಡಿನ ಮೂಲಕ ಭೂಮಿತಾಯಿಯ ಬಗ್ಗೆ ಅಭಿಮಾನದಿಂದ ನೆನೆದು ಹಾಡುತ್ತಾಳೆ. ಭಾರತ ಹಳ್ಳಿಗಳ ದೇಶವಾಗಿದೆ. ರೈತನೆ ಅನ್ನದಾತ. ನಮ್ಮೆಲ್ಲರನ್ನು ಸಲಹುವಳೆ ಭೂಮಿತಾಯಿ. ಅಂತಲೇ ಭುದೇವಿಯ ನೆನೆಯದೇ ವಿಧಿಯಿಲ್ಲ. ಬದುಕಿನುದ್ದಕ್ಕೂ ಭೂಮಿಯನ್ನೇ ನಂಬಿಕೊಂಡು ಬಾಳಿರುವ ರೈತ ಅವನ ಬೆವರಿನ ಫಲವೇ ನಮ್ಮ ಕೈಯೊಳಗಿನ ತುತ್ತು. ಆದರೆ ಇಂದು ಕಾಲ ಬದಲಾಗಿದೆ. ನಮ್ಮ ರಕ್ತದ ಕಣ ಕಣದಲ್ಲೂ ಭೂದೇವಿಯು ನೀಡಿದ ಆಹಾರದಂಶವಿದ್ದರೂ ಜಾಗತೀಕರಣದ ಅವಸರದಲ್ಲಿ ಭೂಮಿಯ ಫಲವತತ್ತೆ ಮತ್ತು ಅದರ ಮಹತ್ವ ನಾವು ಮರೆಯುತ್ತಿದ್ದೇವೆ.

ಇವತ್ತು ಹಳ್ಳಿ ಹಳ್ಳಿಗಳಲ್ಲೂ ಜಾಗತೀಕರಣದ ಬಿಸಿ ತಟ್ಟಿದೆ. ಎಲ್ಲರಿಗೂ ಹಣ ಸಂಪಾದನೆಯೇ ಗುರಿಯಾಗಿದೆ. ಟಿವಿಗಳು ನಮ್ಮ ಮನೆಗೆ ಲಗ್ಗೆ ಹಾಕಿದ ಮೇಲೆ ದುಡಿಮೆ, ಪರಿಶ್ರಮಗಳಿಗೆ ಗ್ರಹಣ ಹಿಡಿಯಿತ್ತಿದೆಯೋ ಎನಿಸದೆ ಇರದು. ಅಂತಲೇ ಸರ್‍ವಜ್ಞ ತನ್ನ ತ್ರಿಪದಿಗಳಲ್ಲಿ ಬೇಸಾಯಕ್ಕೆ ಮಹತ್ವ ಕೊಡುತ್ತಾನೆ.

ಕೋಟಿ ವಿದ್ಯೆಗಳಲ್ಲಿ ಮೇಟಿ ವಿದ್ಯೆಯ ಮೇಲು
ಮೇಟಿಯಿಂ ರಾಟಿ ನಡೆದುದಲ್ಲದೆ ದೇಶ
ದಾಟವೇ ಕೆಡಗು ಸರ್‍ವಜ್ಞ

ಅನೇಕ ವಿದ್ಯೆಗಳಲ್ಲಿ ವ್ಯವಸಾಯವೇ ಶ್ರೇಷ್ಠ, ಅದು ಮೇಟಿ ವಿದ್ಯೆ. ಅದರಿಂದ ರಾಟಿ ನಡೆದು ದೇಶವೇ ಬೆಳಗುವುದು. ಇಲ್ಲದಿದ್ದರೆ ಇನ್ನಾವ ಆಟವೂ ಕೆಡಗು ಎನ್ನುವ ಕವಿಯ ಭಾವ ನಿಜಕ್ಕೂ ಮೆಚ್ಚುವಂಥದ್ದು. ಆದರೆ ಇಂದು ಬೇಸಾಯಕ್ಕೆ ಜನರು ನಿರ್‍ಲಕ್ಷ್ಯ ಮಾಡುತ್ತಿರುವುದು ದುರ್‍ದೈವದ ಸಂಗತಿ. ಇಂದಿನ ದಿನಗಳಲ್ಲಿ ರೈತನು ವ್ಯವಸಾಯ ಮಾಡಿ ಹೆಚ್ಚಿನ ಇಳುವರಿ ತೆಗೆಯುವ ನಿಟ್ಟಿನಲ್ಲಿ ರಾಸಾಯನಿಕ ಗೊಬ್ಬರ, ವಿಷಯುಕ್ತ ಔಷಧಗಳನ್ನು ಬೆಳೆಗಳಿಗೆ ನೀಡಿ ಹೆಚ್ಚಿನ ಬೆಳೆ ರಾಶಿಯ ನಿರೀಕ್ಷೆಯಲ್ಲಿ ಭೂಮಿಯನ್ನು ಬಂಜರುಗೊಳಿಸುತ್ತಿದ್ದಾನೆ. ಇದರಿಂದಾಗಿ ವಾತಾವರಣ ಕಲುಷಿತಗೊಳ್ಳುವುದಷ್ಟೇ ಅಲ್ಲದೆ ಬೆಳೆಗಳಲ್ಲಿ ವಿಷದಂಶವು ತುಂಬಿ ಜನರು ರೋಗ-ರುಜಿನಗಳಿಗೆ ತುತ್ತಾಗುತ್ತಿದ್ದಾರೆ. ಆದ್ದರಿಂದ ಇಂದು ಇಂಥ ರಾಸಾಯನಿಕ ಪದಾರ್‍ಥಗಳಿಂದ ಮುಕ್ತಗೊಳ್ಳಲು ನಾವು ಸಾವಯವ ಕೃಷಿ ಮಾಡಬೇಕಿದೆ. ಈಗೀಗ ಜಗತ್ತಿನಲ್ಲಿ ಯಂತ್ರ, ವಾಹನಗಳ ಸಂಖ್ಯೆ ಜಾಸ್ತಿಯಾಗಿ ಇಂಧನ ಉಪಯೋಗದಿಂದ ವಾತಾವರಣ ಕೆಡುತಿದ್ದು ಜೈವಿಕ ಇಂಧನಕ್ಕೆ ಸಂಬಂಧಿಸಿದ ಗಿಡ-ಮರಗಳನ್ನು ನೆಟ್ಟು ದೇಶದ ಆರೋಗ್ಯ ಕಾಪಾಡಬೇಕಿದೆ.

ರೈತನು ದೇಶದ ಬೆನ್ನೆಲುಬು, ಅನ್ನದಾತನೆಂದು ಹೊಗಳಿದರೂ ಇಂದು ರೈತನಿಗೆ ಉಳಿಗಾಲವಿಲ್ಲವಾಗಿದೆ. ಬಿತ್ತಿದ ಬೀಜ ಮೊಳಕೆಯೊಡೆಯದಿದ್ದಾಗ ಮೊಳಕೆಯೊಡೆದರೂ ಬೆಳೆ ಬೆಳೆಯದಿದ್ದಾಗ ಬೆಳೆ ಬೆಳೆದರೂ ಧಾನ್ಯಕ್ಕೆ ಕೈತುಂಬ ಹಣ ಬರದೇ ಇದ್ದಾಗ ಅವನ ಬದುಕು ನಿತ್ಯ ಸಾಯುತ್ತಿದೆ. ಬದುಕನ್ನು ಎದುರಿಸಲಾರದೆ ಆತ್ಮಹತ್ಯೆಗೆ ಶರಣಾಗುತ್ತಿದ್ದಾನೆ. ಅಂತಲೇ ಇಂದು ಭೂಮಿತಾಯಿ ಅವನ ಮೇಲೆ ಮುನಿದಿದ್ದಾಳೆ, ಹೆಜ್ಜೆ ಹೆಜ್ಜೆಗೂ ರಕ್ಷಿಸುವ ಭೂತಾಯಿ ಫಲವತತ್ತೆ ಕಾಪಾಡುವುದು ನಮ್ಮೆಲ್ಲರ ಕರ್‍ತವ್ಯವಾಗಿದೆ. ಅಂತಲೇ ಇಂದು ಸರ್‍ಕಾರ ಮತ್ತು ಸಮಾಜ ಭೂತಾಯಿಯತ್ತ ವಾಲುತ್ತಿದೆ. ರೈತನಿಗೆ ಭೂಮಿಯ ಮಣ್ಣಿನ ಬಗ್ಗೆ ತಿಳುವಳಿಕೆ, ಬೀಜ, ಗೊಬ್ಬರ, ಸಾವಯವ ಕೃಷಿ ಸೊನ್ನೆ ಬಂಡವಾಳದಲ್ಲಿ ಭೂಮಿಯಲ್ಲಿ ಬೆಳೆ ಇಳುವರಿಗಳತ್ತ ನಾವು ದಾಪುಗಾಲು ಆರೋಗ್ಯಕರ ಲಕ್ಷಣವಾಗಿದೆ. ಹಾಕುತ್ತಿರುವುದು ಆರೋಗ್ಯಕರ ಲಕ್ಷಣವಾಗಿದೆ.

ಸ್ವಚ್ಛವಾದ ಪರಿಸರ, ನಿರಾಂತರವಾದ ಬಾಳಾಗಬೇಕಾದರೆ ಪರಿಸರ ಮಾಲಿನ್ಯ ತಡೆಗಟ್ಟಬೇಕಾದರೆ ಸಾವಯವ ಕೃಷಿ ಮಾಡಬೇಕಿದೆ. ಜೀವನ ಸಾರ್‍ಥಕಗೊಳಿಸಬೇಕಿದೆ. ಭೂಮಿಯ ರಕ್ಷಣೆ ನಮ್ಮೆಲ್ಲರ ಕರ್‍ತವ್ಯವಾಗಬೇಕು.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...