Home / ಲೇಖನ / ಇತರೆ / ನೋವಿನಿಂದಲೇ ಜ್ಞಾನ

ನೋವಿನಿಂದಲೇ ಜ್ಞಾನ

ಗಾಣದಲ್ಲಿ ಸಿಲುಕಿದ ಎಳ್ಳು
ನೋಯದೆ ಎಣ್ಣೆಯ ಬಿಡುವುದೆ
ಕಾಯದಲ್ಲಿ ಸಿಲುಕಿದ ಜೀವ
ನೋಯದ ಕರಣಂಗಳ ಬಿಡುವನೆ
ಭಾವದಲ್ಲಿ ಸಿಲುಕಿದ ಭ್ರಮೆ
ನೋಯದೆ ವಿಕಾರವ ಬಿಡುವುದೆ
ಇಂತಿವನರಿದಲ್ಲದೆ ಜ್ಞಾನಲೇಪವಿಲ್ಲ
ನಿಃಕಳಂಕ ಮಲ್ಲಿಕಾರ್ಜುನಾ

ವೇದ ಎಂದರೆ ಜ್ಞಾನವಂತೆ. ವೇದನೆ ಎಂದರೆ ನೋವು. ನೋಯದೆ ಜ್ಞಾನವಿಲ್ಲ. ವೇದನೆ ಇಲ್ಲದೆ ವೇದವಿಲ್ಲ. ಜೀವ ಮತ್ತು ದೇಹ ಬೇರೆ ಎಂದುಕೊಳ್ಳುವುದಾದರೆ ಎಳ್ಳಿನೊಳಗಿರುವ ಎಣ್ಣೆಯಂತೆ. ಗಾಣಕ್ಕೆ ಸಿಕ್ಕಿ ನೋಯದೆ ಎಣ್ಣೆ ಬಾರದು. ದೇಹ ನೋವಿಗೀಡಾಗದೆ ಜ್ಞಾನ ಸಿಗದು. ಮನಸ್ಸು, ಮಾತು, ದೇಹ ಇವು ಕರಣಗಳು. ಇವುಗಳ ಮಿತಿ ತಿಳಿಯುವುದು ನೋವಿನಿಂದಲೇ.

ಭಾವಗಳು ಭ್ರಮೆಗೆ ಕಾರಣ. ನಮಗೆ ಇಷ್ಟವಾದದ್ದು, ಪ್ರಿಯವಾದದ್ದು, ಅವು ಮಾತ್ರವೇ ಒಳ್ಳೆಯದು ಎಂದು ತಿಳಿಯುವುದು, ಅವನ್ನೇ ಆಶಿಸುವುದು, ಹೊಂದಲು ಬಯಸುವುದು ಇವೆಲ್ಲ ಸಹಜವೆಂದು ತೋರಿದರೂ ನಿಜವಾಗಿ ಭ್ರಮೆಗಳೇ. ಭ್ರಮೆಗಳು ಹುಟ್ಟುವುದೇ ಇಷ್ಟ, ಇಷ್ಟವಿಲ್ಲ, ಬೇಕು, ಬೇಡ, ಇತ್ಯಾದಿ ಭಾವಗಳಿಂದ. ನೋವಿನಿಂದ ಮಾತ್ರವೇ ಇಂಥ ಭ್ರಮೆ ಇಲ್ಲವಾಗುವುದು. ನೋವನ್ನು ತಿಳಿಯದಿದ್ದರೆ ಜ್ಞಾನದ ಲೇಪ ಇಲ್ಲ. ಲೇಪ ಅಂದರೆ ಮುಲಾಮು ಕೂಡ ಹೌದು. ನೋವಿಗೆ ಔಷಧ ತಿಳಿವಳಿಕೆಯೊಂದೇ.

`ನನಗೇ ಯಾಕೆ ಈ ಕಷ್ಟ, ಈ ನೋವು?’ ಎಂದು ಸಾವಿರ ಸಲ ಅಂದುಕೊಂಡಿರುತ್ತೇವೆ. ಅಂದುಕೊಂಡಿರುತ್ತೇವೆ, ಅಷ್ಟೆ. ಆ ನೋವನ್ನೇ ತಿಳಿವಳಿಕೆಯ ಲೇಪಮಾಡಿಕೊಳ್ಳುವುದು ಅಗತ್ಯ ಎಂದು ಮೋಳಿಗೆ ಮಾರಯ್ಯನ ಈ ವಚನ ಹೇಳುತ್ತದೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...