Home / ಲೇಖನ / ಇತರೆ / ನೋವಿನಿಂದಲೇ ಜ್ಞಾನ

ನೋವಿನಿಂದಲೇ ಜ್ಞಾನ

ಗಾಣದಲ್ಲಿ ಸಿಲುಕಿದ ಎಳ್ಳು
ನೋಯದೆ ಎಣ್ಣೆಯ ಬಿಡುವುದೆ
ಕಾಯದಲ್ಲಿ ಸಿಲುಕಿದ ಜೀವ
ನೋಯದ ಕರಣಂಗಳ ಬಿಡುವನೆ
ಭಾವದಲ್ಲಿ ಸಿಲುಕಿದ ಭ್ರಮೆ
ನೋಯದೆ ವಿಕಾರವ ಬಿಡುವುದೆ
ಇಂತಿವನರಿದಲ್ಲದೆ ಜ್ಞಾನಲೇಪವಿಲ್ಲ
ನಿಃಕಳಂಕ ಮಲ್ಲಿಕಾರ್ಜುನಾ

ವೇದ ಎಂದರೆ ಜ್ಞಾನವಂತೆ. ವೇದನೆ ಎಂದರೆ ನೋವು. ನೋಯದೆ ಜ್ಞಾನವಿಲ್ಲ. ವೇದನೆ ಇಲ್ಲದೆ ವೇದವಿಲ್ಲ. ಜೀವ ಮತ್ತು ದೇಹ ಬೇರೆ ಎಂದುಕೊಳ್ಳುವುದಾದರೆ ಎಳ್ಳಿನೊಳಗಿರುವ ಎಣ್ಣೆಯಂತೆ. ಗಾಣಕ್ಕೆ ಸಿಕ್ಕಿ ನೋಯದೆ ಎಣ್ಣೆ ಬಾರದು. ದೇಹ ನೋವಿಗೀಡಾಗದೆ ಜ್ಞಾನ ಸಿಗದು. ಮನಸ್ಸು, ಮಾತು, ದೇಹ ಇವು ಕರಣಗಳು. ಇವುಗಳ ಮಿತಿ ತಿಳಿಯುವುದು ನೋವಿನಿಂದಲೇ.

ಭಾವಗಳು ಭ್ರಮೆಗೆ ಕಾರಣ. ನಮಗೆ ಇಷ್ಟವಾದದ್ದು, ಪ್ರಿಯವಾದದ್ದು, ಅವು ಮಾತ್ರವೇ ಒಳ್ಳೆಯದು ಎಂದು ತಿಳಿಯುವುದು, ಅವನ್ನೇ ಆಶಿಸುವುದು, ಹೊಂದಲು ಬಯಸುವುದು ಇವೆಲ್ಲ ಸಹಜವೆಂದು ತೋರಿದರೂ ನಿಜವಾಗಿ ಭ್ರಮೆಗಳೇ. ಭ್ರಮೆಗಳು ಹುಟ್ಟುವುದೇ ಇಷ್ಟ, ಇಷ್ಟವಿಲ್ಲ, ಬೇಕು, ಬೇಡ, ಇತ್ಯಾದಿ ಭಾವಗಳಿಂದ. ನೋವಿನಿಂದ ಮಾತ್ರವೇ ಇಂಥ ಭ್ರಮೆ ಇಲ್ಲವಾಗುವುದು. ನೋವನ್ನು ತಿಳಿಯದಿದ್ದರೆ ಜ್ಞಾನದ ಲೇಪ ಇಲ್ಲ. ಲೇಪ ಅಂದರೆ ಮುಲಾಮು ಕೂಡ ಹೌದು. ನೋವಿಗೆ ಔಷಧ ತಿಳಿವಳಿಕೆಯೊಂದೇ.

`ನನಗೇ ಯಾಕೆ ಈ ಕಷ್ಟ, ಈ ನೋವು?’ ಎಂದು ಸಾವಿರ ಸಲ ಅಂದುಕೊಂಡಿರುತ್ತೇವೆ. ಅಂದುಕೊಂಡಿರುತ್ತೇವೆ, ಅಷ್ಟೆ. ಆ ನೋವನ್ನೇ ತಿಳಿವಳಿಕೆಯ ಲೇಪಮಾಡಿಕೊಳ್ಳುವುದು ಅಗತ್ಯ ಎಂದು ಮೋಳಿಗೆ ಮಾರಯ್ಯನ ಈ ವಚನ ಹೇಳುತ್ತದೆ.
*****

Tagged:

Leave a Reply

Your email address will not be published. Required fields are marked *

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...

ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...