Home / ಲೇಖನ / ಇತರೆ / ನೋವಿನಿಂದಲೇ ಜ್ಞಾನ

ನೋವಿನಿಂದಲೇ ಜ್ಞಾನ

ಗಾಣದಲ್ಲಿ ಸಿಲುಕಿದ ಎಳ್ಳು
ನೋಯದೆ ಎಣ್ಣೆಯ ಬಿಡುವುದೆ
ಕಾಯದಲ್ಲಿ ಸಿಲುಕಿದ ಜೀವ
ನೋಯದ ಕರಣಂಗಳ ಬಿಡುವನೆ
ಭಾವದಲ್ಲಿ ಸಿಲುಕಿದ ಭ್ರಮೆ
ನೋಯದೆ ವಿಕಾರವ ಬಿಡುವುದೆ
ಇಂತಿವನರಿದಲ್ಲದೆ ಜ್ಞಾನಲೇಪವಿಲ್ಲ
ನಿಃಕಳಂಕ ಮಲ್ಲಿಕಾರ್ಜುನಾ

ವೇದ ಎಂದರೆ ಜ್ಞಾನವಂತೆ. ವೇದನೆ ಎಂದರೆ ನೋವು. ನೋಯದೆ ಜ್ಞಾನವಿಲ್ಲ. ವೇದನೆ ಇಲ್ಲದೆ ವೇದವಿಲ್ಲ. ಜೀವ ಮತ್ತು ದೇಹ ಬೇರೆ ಎಂದುಕೊಳ್ಳುವುದಾದರೆ ಎಳ್ಳಿನೊಳಗಿರುವ ಎಣ್ಣೆಯಂತೆ. ಗಾಣಕ್ಕೆ ಸಿಕ್ಕಿ ನೋಯದೆ ಎಣ್ಣೆ ಬಾರದು. ದೇಹ ನೋವಿಗೀಡಾಗದೆ ಜ್ಞಾನ ಸಿಗದು. ಮನಸ್ಸು, ಮಾತು, ದೇಹ ಇವು ಕರಣಗಳು. ಇವುಗಳ ಮಿತಿ ತಿಳಿಯುವುದು ನೋವಿನಿಂದಲೇ.

ಭಾವಗಳು ಭ್ರಮೆಗೆ ಕಾರಣ. ನಮಗೆ ಇಷ್ಟವಾದದ್ದು, ಪ್ರಿಯವಾದದ್ದು, ಅವು ಮಾತ್ರವೇ ಒಳ್ಳೆಯದು ಎಂದು ತಿಳಿಯುವುದು, ಅವನ್ನೇ ಆಶಿಸುವುದು, ಹೊಂದಲು ಬಯಸುವುದು ಇವೆಲ್ಲ ಸಹಜವೆಂದು ತೋರಿದರೂ ನಿಜವಾಗಿ ಭ್ರಮೆಗಳೇ. ಭ್ರಮೆಗಳು ಹುಟ್ಟುವುದೇ ಇಷ್ಟ, ಇಷ್ಟವಿಲ್ಲ, ಬೇಕು, ಬೇಡ, ಇತ್ಯಾದಿ ಭಾವಗಳಿಂದ. ನೋವಿನಿಂದ ಮಾತ್ರವೇ ಇಂಥ ಭ್ರಮೆ ಇಲ್ಲವಾಗುವುದು. ನೋವನ್ನು ತಿಳಿಯದಿದ್ದರೆ ಜ್ಞಾನದ ಲೇಪ ಇಲ್ಲ. ಲೇಪ ಅಂದರೆ ಮುಲಾಮು ಕೂಡ ಹೌದು. ನೋವಿಗೆ ಔಷಧ ತಿಳಿವಳಿಕೆಯೊಂದೇ.

`ನನಗೇ ಯಾಕೆ ಈ ಕಷ್ಟ, ಈ ನೋವು?’ ಎಂದು ಸಾವಿರ ಸಲ ಅಂದುಕೊಂಡಿರುತ್ತೇವೆ. ಅಂದುಕೊಂಡಿರುತ್ತೇವೆ, ಅಷ್ಟೆ. ಆ ನೋವನ್ನೇ ತಿಳಿವಳಿಕೆಯ ಲೇಪಮಾಡಿಕೊಳ್ಳುವುದು ಅಗತ್ಯ ಎಂದು ಮೋಳಿಗೆ ಮಾರಯ್ಯನ ಈ ವಚನ ಹೇಳುತ್ತದೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...