Home / ಲೇಖನ / ಇತರೆ / ಕುರುಹು

ಕುರುಹು

ಗಿಣಿಯಿಲ್ಲದ ಪಂಜರ ಹಲವು ಮಾತನಾಡಬಲ್ಲುದೆ
ದೇವರಿಲ್ಲದ ದೇಗುಲಕ್ಕೆ ಮಂತ್ರ ಅಭಿಷೇಕವುಂಟೆ
ಅರಿವು ನಷ್ಟವಾಗಿ
ಕುರುವಿನ ಹಾವಚೆಯ ನಾನರಿಯೆನೆಂದನಂಬಿಗ ಚವುಡಯ್ಯ

ಮಾತನಾಡುವುದು ಗಿಣಿ ಮಾತ್ರ, ಪಂಜರವಲ್ಲ. ಅಭಿಷೇಕ ದೇವರಿಗೇ ಹೊರತು ದೇಗುಲಕ್ಕಲ್ಲ. ಪಂಜರ, ದೇಗುಲ ಇವು ಕೇವಲ ಕುರುಹುಗಳು. ಅರಿವಿಲ್ಲದ ಕುರುಹು ಕೇವಲ ಹಾವಸೆ, ಅಥವಾ ಪಾಚಿ, ಅದರ ಹಂಗು ಬೇಡ ಅನ್ನುತ್ತಾನೆ ಅಂಬಿಗ ಚವುಡಯ್ಯ.

ಇದೇ ಮಾತನ್ನು ಮುಂದುವರೆಸಿದರೆ ಕವಿತೆ ಮುಖ್ಯವಾಗಬೇಕಲ್ಲದೆ ಕವಿಯಲ್ಲ, ಕಾರ್ಯ ಮುಖ್ಯವಾಗಬೇಕಲ್ಲದೆ ಕರ್ತೃವಲ್ಲ, ಅಡುಗೆ ಮುಖ್ಯವಾಗಬೇಕಲ್ಲದೆ ಅಡುಗೆಯವರಲ್ಲ, ತಜ್ಞತೆ ಮುಖ್ಯವಾಗಬೇಕಲ್ಲದೆ ತಜ್ಞರು ಅಲ್ಲ ಎಂದು ಎಷ್ಟು ಬೇಕಾದರೂ ಹೇಳಬಹುದು.

ಹಾಗೆ ಎರಡನ್ನೂ ಬಿಡಿಸಿ ಬಿಡಿಸಿ ನೋಡಲು ಆಗುವುದೇ? ಕವಿತೆಯನ್ನು ನಿಂದಿಸಿದರೆ ಕವಿ ನೋಯುವುದಿಲ್ಲವೇ? ಮಾಡಿದ ಕೆಲಸ ಅಸಮರ್ಪಕ ಎಂದರೆ ಮಾಡಿದವರಿಗೆ ಬೇಸರವಾಗದೇ? ತಜ್ಞತೆಯನ್ನು ಪ್ರಶ್ನಿಸಿದರೆ ತಜ್ಞರು ಕೆರಳರೇ? ಬಿಡಿಸಿ ನೋಡುವ, ಒಟ್ಟಾಗಿ ಅರಿವ ಹದ ತಿಳಿಯಬೇಕೆನ್ನುವುದೇ ವಚನಗಳ ಮುಖ್ಯ ಉದ್ದೇಶಗಳಲ್ಲಿ ಒಂದು. ಕಷ್ಟ, ಆದರೆ ಅಸಾಧ್ಯವೇ? ವ್ಯಕ್ತಿಯನ್ನು ಟೀಕಿಸದೆ ವ್ಯಕ್ತಿಯ ಕಾರ್ಯವನ್ನು ಮಾತ್ರ ಟೀಕಿಸುವ ಪ್ರೀತಿ ಸಾಧ್ಯವಾದರೆ ಎಷ್ಟು ಚೆನ್ನ!
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...