Home / ಕವನ / ಕವಿತೆ / ಅನನ್ಯ ಹೇಮೆ

ಅನನ್ಯ ಹೇಮೆ

ಮುಚ್ಚಿಕೊಂಡ ಕದಗಳ
ಆಹ್ವಾನವಿಲ್ಲದ ಅಂತಃಪುರದೊಳಗೂ
ಹೇಗೋ ನುಗ್ಗಿಬಿಡುತ್ತಾಳೆ
ಗೊತ್ತೇ ಆಗದಂತೆ
ಮೆಲ್ಲ ಮೆಲ್ಲಗೆ ಗೂಡುಕಟ್ಟಿ
ಕನಸಿನ ಮೊಟ್ಟೆ ಇಟ್ಟುಬಿಡುತ್ತಾಳೆ
ಇವಳದೇ ಜೀವಭಾವ
ಮೈಮನಗಳ ತುಂಬಿಕೊಂಡು
ಮೊಟ್ಟೆಯೊಡೆದು ಹುಟ್ಟಿಬಂದ
ಕನಸಿನ ಕಂದನಿಗೆ
ವರ್ಣನೆಗೆ ಸಿಲುಕದ
ಅದೆಷ್ಟು ವರ್ಣಗಳು!
ಒಳಗೆಲ್ಲಾ ಹೋಲಿ
ಎರಚಿದ ರಂಗುಗಳು!

ಬಣ್ಣದ ಅಂತಃಪುರಕೆಲ್ಲ
ಜೀವ ಬಂದಿದೆ ಈಗ
ಇವಳು ಕಚಗುಳಿ ಇರಿಸಿ
ಕುಣಿಸಿದಂತೆಲ್ಲಾ
ತಕಥೈ ಕುಣಿಯುತ್ತಾ
ಅಪೂರ್ಣ ಕಥೆಗಳೇ
ಇತಿಹಾಸವಾಗಿಬಿಡುವ
ಈ ನಾಡಿನಲ್ಲಿ
ಮಾನುಷ ಬಣ್ಣಗಳು
ಇವಳ ಆವ್ಹಾಯಿಸಿಕೊಂಡೂ
ಅರ್ಥವಿಲ್ಲದ ಕಥೆಗಳಾಗಿಬಿಡುತ್ತವೆ.

ಜೀವ ಸೆಲೆಯುಕ್ಕಿಸುವ
ಇವಳು ಮಾತ್ರ
ಏನೂ ಗೊತ್ತಿಲ್ಲದಂತೆ ಒಳಗೇ
ಎಂದೆಂದಿಗೂ ಮುಗಿಯದ
ಜೀವಂತ ಕವಿತೆಯಾಗಿ ಉಕ್ಕುತ್ತಾ
ಹರಿಯುತ್ತಲೇ ಇರುತ್ತಾಳೆ
ಎಲ್ಲೆಡೆಗೆ ಹಬ್ಬಿ
ಎಲ್ಲರನೂ ತಬ್ಬಿ
ಪ್ರೇಮಸಂದೇಶ ಸಾರುತ್ತಲೇ ಉಳಿಯುತ್ತಾಳೆ
ಈ ಅನನ್ಯ ಹೇಮೆ!
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...