Home / ಕವನ / ಕವಿತೆ / ರಾಷ್ಟ್ರೀಯ ಶಿಕ್ಷಣದ ಸಪ್ತಾಹದ ಕರೆ

ರಾಷ್ಟ್ರೀಯ ಶಿಕ್ಷಣದ ಸಪ್ತಾಹದ ಕರೆ

ದಾಯಿ ಹಾಲನೆ ನಂಬಿ ಬಾಯಾರಿ ಬಸವಳಿದು
ತಾಯೆ ಎಂದರಚಲುಂ ಮಿಸುಕದಿರೆ ರಸನೆ,
ನೀನೆಮ್ಮನರಸುತಯ್ತಂದು ತೊಡೆಯಲಿ ತಳೆದು
ಮೊಲೆಯಿನಿಂತೆಮ್ಮ ಬಾಯ್ದುಂಬಿಸಲು ಸಸಿನೆ, ೪

ಧನ್ಯರಾವೆಮ! ದಾಯಿಯೂಡಿಸಿದ ಮಗು ಮುಂದು
ತನ್ನ ತಾನರಿತೆದ್ದು ನಿಡುನಿಲ್ಲಲಹುದೇ?
ರವಿ ಚಿತ್ರಿಪಂತೆ ಚಿತ್ರಿಪನೆ ಪುಷ್ಪಮನಿಂದು?
ನೀನೀನ ಜೀವ ದಾಯಿಯಿನೆಮಗೆ ಬಹುದೇ? ೮

ತಾಯೆ ನಿನ್ನಯ ಪುಣ್ಯಪೀಯೂಷಸ್ತನ್ಯಂ
ಸೂಸುತಿದೆ, ರಾಷ್ಟ್ರೀಯ ಶಿಕ್ಷಣಮನನ್ಯಂ ?
ನವಜೀವನದ ಬುಗ್ಗೆಯಿದನೊಂದನೆಮ್ಮ
ಹೃದಯದ ನಿದಾಘದಿಂ ಬತ್ತಿಸದಿರಮ್ಮ! ೧೨

ಕತ್ತಲೆ ಕವಿದ ನಮ್ಮ ಕಂಗಳಿಗೆ ಪರೆ ನೆರೆಯೆ,
ನಮ್ಮ ನಾವ್ಮರೆತು ನಮ್ಮವರ ಮರೆವನ್ನಂ,
ಚೆದರಿ ನಮ್ಮೊಳಗೆ ಜಗಳಾಡಲೇನಚ್ಚರಿಯೆ?
ಸಾಕಿನಿತು! ರಾಷ್ಟ್ರೀಯ ಶಿಕ್ಷಣಮೆ ನಿನ್ನ ೧೬

ದೀಧಿತಿಯಿನೆಮ್ಮಯ ಮನೋನಯನಮಂ ತೆರೆದು,
ಭೇದಗಳ ಬಿರುವರೆಯ ಹೆರೆಯಿಸುವುದಲ್ಲಿ!
ನಾನೆ ನಾ ನೀನೆ ನೀನಿದನೆಮ್ಮೆದೆಯಿನರೆದು
ನಾವು ನಾವೆಂಬ ಭಾಷೆಯ ಕೆತ್ತಿಸಲ್ಲಿ! ೨೦

ಕ್ರೈಸ್ತ ಪಾರಸಿ ಜೈನ ಮುಸಲಮಾನ್‌ ಹಿಂದು
ವೆಮಗೆಲ್ಲರಿಗೆ ನಮ್ಮ ಭಾರತಮಿದೊಂದು
ತವರು ಗಡ! ರಾಷ್ಟ್ರೀಯ ಶಿಕ್ಷಣಮೆ ಬಂದು
ಒಟ್ಟಿನ ತವರ್‍ತನವನೆಸಗಿನ್ನು ಮುಂದು! ೨೪

ಎದ್ದೇಳಿರೈ ಬಂಧುಗಳಿರ! ಕೆಲವರಿಯುತಿದೆ
ರಾಷ್ಟ್ರೀಯ ಶಿಕ್ಷಣದ ಸಪ್ತಾಹಮಿಂದು!
ತಂತನೂಳಿಗವ ಗೆಯ್ಯಿರಿಮೆಂದು ಕರೆಯುತಿದೆ,
ಬಂಗಾರಮಪ್ಪುದು ಭವಿಷ್ಯ ವಲಮೆಂದು! ೨೮

ತನ್ನ ತಾಯ್ನುಡಿಯಿಂದ ದುಡಿದ ಬಿಜ್ಜೆಯೆ ಬಿಜ್ಜೆ!
ಹೆರರ ನಾಲಗೆಯೆಂಜಲೆನ್ನೆಗಂ ಸವಿಯೊ?
ತನ್ನ ಮುಂಗತಿ ತೋರೆ ತನ್ನ ಹಿರಿಯರ ಹೆಜ್ಜೆ!
ಹೆರರ ಬೆಳಕೊಳೆ ಕಾಂಬ ತನ್ನವರ ೧ ಕವಿಯೊ? ೩೨

ಅವರವರ ನುಡಿಗಳಿಂದವರವರ ಜಾಣಿ
ಕೆಯನೆಚ್ಚರಿಸುವ ನುಡಿಗಳ ತಾಯೆ ವಾಣಿ!
ನಿರವಶೇಷ ಜ್ಞಾನದರ್‍ಜನವನೆಮ್ಮ
ನುಡಿಯಿನೆಮಗಿತ್ತು ಭಾರತವ ಸಲಹಮ್ಮ! ೩೬
*****
ದ್ರುಷ್ಟಾರ (seer)

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...