Home / ಕವನ / ಕವಿತೆ / ರಾಷ್ಟ್ರೀಯ ಶಿಕ್ಷಣದ ಸಪ್ತಾಹದ ಕರೆ

ರಾಷ್ಟ್ರೀಯ ಶಿಕ್ಷಣದ ಸಪ್ತಾಹದ ಕರೆ

ದಾಯಿ ಹಾಲನೆ ನಂಬಿ ಬಾಯಾರಿ ಬಸವಳಿದು
ತಾಯೆ ಎಂದರಚಲುಂ ಮಿಸುಕದಿರೆ ರಸನೆ,
ನೀನೆಮ್ಮನರಸುತಯ್ತಂದು ತೊಡೆಯಲಿ ತಳೆದು
ಮೊಲೆಯಿನಿಂತೆಮ್ಮ ಬಾಯ್ದುಂಬಿಸಲು ಸಸಿನೆ, ೪

ಧನ್ಯರಾವೆಮ! ದಾಯಿಯೂಡಿಸಿದ ಮಗು ಮುಂದು
ತನ್ನ ತಾನರಿತೆದ್ದು ನಿಡುನಿಲ್ಲಲಹುದೇ?
ರವಿ ಚಿತ್ರಿಪಂತೆ ಚಿತ್ರಿಪನೆ ಪುಷ್ಪಮನಿಂದು?
ನೀನೀನ ಜೀವ ದಾಯಿಯಿನೆಮಗೆ ಬಹುದೇ? ೮

ತಾಯೆ ನಿನ್ನಯ ಪುಣ್ಯಪೀಯೂಷಸ್ತನ್ಯಂ
ಸೂಸುತಿದೆ, ರಾಷ್ಟ್ರೀಯ ಶಿಕ್ಷಣಮನನ್ಯಂ ?
ನವಜೀವನದ ಬುಗ್ಗೆಯಿದನೊಂದನೆಮ್ಮ
ಹೃದಯದ ನಿದಾಘದಿಂ ಬತ್ತಿಸದಿರಮ್ಮ! ೧೨

ಕತ್ತಲೆ ಕವಿದ ನಮ್ಮ ಕಂಗಳಿಗೆ ಪರೆ ನೆರೆಯೆ,
ನಮ್ಮ ನಾವ್ಮರೆತು ನಮ್ಮವರ ಮರೆವನ್ನಂ,
ಚೆದರಿ ನಮ್ಮೊಳಗೆ ಜಗಳಾಡಲೇನಚ್ಚರಿಯೆ?
ಸಾಕಿನಿತು! ರಾಷ್ಟ್ರೀಯ ಶಿಕ್ಷಣಮೆ ನಿನ್ನ ೧೬

ದೀಧಿತಿಯಿನೆಮ್ಮಯ ಮನೋನಯನಮಂ ತೆರೆದು,
ಭೇದಗಳ ಬಿರುವರೆಯ ಹೆರೆಯಿಸುವುದಲ್ಲಿ!
ನಾನೆ ನಾ ನೀನೆ ನೀನಿದನೆಮ್ಮೆದೆಯಿನರೆದು
ನಾವು ನಾವೆಂಬ ಭಾಷೆಯ ಕೆತ್ತಿಸಲ್ಲಿ! ೨೦

ಕ್ರೈಸ್ತ ಪಾರಸಿ ಜೈನ ಮುಸಲಮಾನ್‌ ಹಿಂದು
ವೆಮಗೆಲ್ಲರಿಗೆ ನಮ್ಮ ಭಾರತಮಿದೊಂದು
ತವರು ಗಡ! ರಾಷ್ಟ್ರೀಯ ಶಿಕ್ಷಣಮೆ ಬಂದು
ಒಟ್ಟಿನ ತವರ್‍ತನವನೆಸಗಿನ್ನು ಮುಂದು! ೨೪

ಎದ್ದೇಳಿರೈ ಬಂಧುಗಳಿರ! ಕೆಲವರಿಯುತಿದೆ
ರಾಷ್ಟ್ರೀಯ ಶಿಕ್ಷಣದ ಸಪ್ತಾಹಮಿಂದು!
ತಂತನೂಳಿಗವ ಗೆಯ್ಯಿರಿಮೆಂದು ಕರೆಯುತಿದೆ,
ಬಂಗಾರಮಪ್ಪುದು ಭವಿಷ್ಯ ವಲಮೆಂದು! ೨೮

ತನ್ನ ತಾಯ್ನುಡಿಯಿಂದ ದುಡಿದ ಬಿಜ್ಜೆಯೆ ಬಿಜ್ಜೆ!
ಹೆರರ ನಾಲಗೆಯೆಂಜಲೆನ್ನೆಗಂ ಸವಿಯೊ?
ತನ್ನ ಮುಂಗತಿ ತೋರೆ ತನ್ನ ಹಿರಿಯರ ಹೆಜ್ಜೆ!
ಹೆರರ ಬೆಳಕೊಳೆ ಕಾಂಬ ತನ್ನವರ ೧ ಕವಿಯೊ? ೩೨

ಅವರವರ ನುಡಿಗಳಿಂದವರವರ ಜಾಣಿ
ಕೆಯನೆಚ್ಚರಿಸುವ ನುಡಿಗಳ ತಾಯೆ ವಾಣಿ!
ನಿರವಶೇಷ ಜ್ಞಾನದರ್‍ಜನವನೆಮ್ಮ
ನುಡಿಯಿನೆಮಗಿತ್ತು ಭಾರತವ ಸಲಹಮ್ಮ! ೩೬
*****
ದ್ರುಷ್ಟಾರ (seer)

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...