Home / ಲೇಖನ / ಇತರೆ / ದುರ್ಗಗಳೇ!

ದುರ್ಗಗಳೇ!

ನಿಮ್ಮನ್ನು ನೋಡಿ ಕನಿಕರ ಬರುತ್ತದೆ. ಮುನ್ನೂರು ವರ್ಷಗಳಾಚೆಗೆ ಯಾರಾದರೂ ಬಂದು ಮುಂದೆ ನಿಮ್ಮ ಅವಸ್ಥೆ ಹೀಗಾಗುವದೆಂದು ಹೇಳಿದ್ದರೆ ನೀವು ನಂಬುತ್ತಿದ್ದಿರೋ? ನೀವೇ ಏಕೆ ಈ ಭವಿಷ್ಯವನ್ನು ಆ ಕಾಲದ ಮಹಾ ಮಹಾ ಮೇಧಾವಿಗಳು ಸಹ ನಂಬುತ್ತಿದ್ದಿಲ್ಲ.

ನಿಮ್ಮ ಸುತ್ತಲಿನ ಯಾವ ಕೊಳ್ಳಗಳಲ್ಲಿ ಜೀವದ ಪರಿವೆಯಿಲ್ಲದೆ ಹೋರಾಡುವ ವೀರರ ರಣಘೋಷವು ಒಂದು ಕಾಲಕ್ಕೆ ತುಂಬುತ್ತಿತ್ತೋ ಅದೇ ಕೊಳ್ಳಗಳಲ್ಲಿ ವನ್ಯಪಶುಗಳ ಚೀರಾಟದ ಹೊರ್ತು ಮತ್ತೇನೂ ಕೇಳಿಸುವದಿಲ್ಲ. ಯಾವ ಹಾದಿಗಳಲ್ಲಿ ಕುದುರೆ ಆನೆ ಪಲ್ಲಕ್ಕಿಗಳ ಸಾಲು ಹತ್ತುತ್ತಿತ್ತೋ ಆ ಹಾದಿಗಳ ಮೇಲೆ ಈಗ ಹುಲ್ಲು ಬೆಳೆದು ಅವು ನಾಮಶೇಷ ಆಗಿರುವವು. ಗುಡ್ಡದೋರೆಯಲ್ಲಿಯ ಹಳ್ಳಿಗಳಂತೂ ನೋಡಲಿಕ್ಕೇ ಬೇಡ. ಯಾವ ಹಳ್ಳಿಗಳಲ್ಲಿಯ ಪ್ರತಿಯೊಬ್ಬ ತರುಣನು ತಾನು ಸೂರ್ಯಾಜೀ ತಾನಾಜೀ ಅಥವಾ ಪ್ರತ್ಯಕ್ಷ ಶಿವಾಜಿಯಂತೆ ಶೂರನಾಗಿ ಮೆರೆಯಬಹುದೆಂದು ಆಕಾಂಕ್ಷೆ ಪಡುತ್ತಿದ್ದನೋ ಆದೇ ಹಳ್ಳಿಗಳಲ್ಲಿ ಹ್ಯಾಗಾದರೂ ದಿವಸ ಹಾಕುತ್ತ ಮರಣದ ಮಾರ್ಗ ಪ್ರತೀಕ್ಷೆ ಮಾಡುವ ಒಕ್ಕಲಿಗರನ್ನು ಕಾಣಬಹುದು.

ಗೋಡೆಗಳು; ಇವುಗಳಿಗೆ ಕೋಟೆಯ ಗೋಡೆಗಳೆಂದು ಯಾರನ್ನಬೇಕು ಸಿಕ್ಕ ಸಿಕ್ಕ ಗಿಡಗಳು ಹತ್ತಿ ಅವುಗಳ ಬೇರು ಮತ್ತು ಶಾಖೆಗಳು ಮುದಿಕೆಯ ಮೈ ಮೇಲಿನ ನರಗಳಂತೆ ಎಲ್ಲ ಕಡೆಗೂ ಹಬ್ಬಿದ್ದರಿಂದ ಗೋಡೆಗಳ ಅಂದವು ಕೆಟ್ಟು ಹೋಗಿದೆ. ಹಲವು ಸ್ಥಳಗಳಲ್ಲಿ ಗೋಡೆ ಬಿದ್ದದ್ದರಿಂದ ಆ ನಿಟ್ಟಿಗೆ ಹಲ್ಲು ಬಿದ್ದ ಬಾಯಿಯ ವಿಕೃತ ಸ್ವರೂಪ ಬಂದಿರುವದು. ಯಾವ ಗೋಡೆಗಳ ಮೇಲೆ ಎಲ್ಲ್ಯಾದರೊಂದು ಹುಲ್ಲಿನ ಕಡ್ಡಿ ಕಂಡರೆ ದುರ್ಗರಕ್ಷಕರು ಕಠಿಣ ಶಿಕ್ಷೆಗೆ ಗುರಿಯಾಗುತ್ತಿದ್ದರೋ ಅವೇ ಗೋಡೆಗಳ ಮೇಲೆ ಹಬ್ಬಿದೆ ಗಿಡಗಂಟಿಗಳಲ್ಲಿ ನಿಶ್ಯಂಕವಾಗಿ ಓಡಾಡುವವು.

ದುರ್ಗದ ಒಳಭಾಗದಲ್ಲಿ ಎಲ್ಲಿ ನೋಡಿದರೂ ಬಿದ್ದಮನೆಗಳ, ಹಾಳು ದಿಬ್ಬಗಳ ಹೊರ್ತಾಗಿ ಏನೂ ಕಾಣುವದಿಲ್ಲ. ಯಾವ ಪ್ರಾಸಾದದಲ್ಲಿ ಭೂತ ಕಾಲದ ಇತಿಹಾಸ ಬರೆಯಲ್ಪಟ್ಟಿತ್ತೊ ಯಾವ ಅರಮನೆಗಳಲ್ಲಿ ನಡೆದ ಕಾರಸ್ಥಾನಗಳಿಂದ ದೊಡ್ಡ ದೊಡ್ಡ ಸಾಮ್ರಾಜ್ಯಗಳು ಹುಟ್ಟಿದವೋ ಮತ್ತು ನಾಶ ಹೊಂದಿದವೋ ಆ ಪ್ರಸಾದದ ಕುರುಹು ಈಗ ಒಂದು ದೊಡ್ಡ ದಿಬ್ಬದ ರೂಪ ದಿಂದ ಮಾತ್ರ ಕಾಣುವದು. ತಮ್ಮ ಖುರಪುಟದ ಖಡಖಡಾಟದಿಂದ ಎಲ್ಲ ದೇಶವನ್ನು ಗದಗಮಿಸಿದ ಜಾತಿಯ ಕುದುರೆಗಳ ಲಾಯದ ಮೇಲೆ ಈಗಿನ ಕಾಲಕ್ಕೆ ಡಬಗಳ್ಳಿಯು ಬೆಳೆದಿರುತ್ತದೆ. ಗುಪ್ತ ಮಾರ್ಗಗಳೂ ಮದ್ದಿನ ಮನೆಗಳೂ ಶಸ್ತ್ರಾಗಾರಗವೂ ಕೋಶಾಗಾರವೂ ಮುಂತಾದವು ಹೇಳಹೆಸರಿಲ್ಲದೆ ಮಾಯವಾಗಿರುವವು.

ಹೆಬ್ಬಾಗಿಲಗಳ ಗತಿಯಂತೂ ಕೇಳಲಿಕ್ಕೆ ಬೇಡ. ಆನೆಗಳಿಗೆ ಸಹ ಜೋರಿನಿಂದ ಹಾಯ್ದು ಕೆಡವಲಿಕ್ಕೆ ಬರಬಾರದೆಂದು ಮಳೆಗಳಿಂದ ತುಂಬಿದ ಬಾಗಿಲಗಳನ್ನು ಒಡೆದು ಅವುಗಳ ಕಟ್ಟಿಗೆಯಿಂದ ಕೈ ಕಾಯ್ಸಿ ಕೊಂಬ ಪುಣ್ಯಾತ್ಮರಿಗೇನು ಕಡಿಮೆ? ಯಾವ ದಾರಿಗಳು ನೂರಾರು ಯುದ್ಧದ ಸಮರಾಂಗಣ ಆಗಿರಬಹುದೋ, ಎಲ್ಲಿಯ ಹಾಸುಗಲ್ಲುಗಳು ಅಸಂಖ್ಯ ಸಲ ವೀರರ ಮಾಂಸ ರಕ್ತಗಳಿಂದ ಮುಚ್ಚಿರಬಹುದು ಅವೆಲ್ಲವುಗಳು ಈಗ ಸ್ಮಶಾನ ಶಾಂತತೆಗೆ ಎಡೆಯಾಗಿರುವವು. ಒಟ್ಟಾರೆ ಈ ದುರ್ಗಗಳನ್ನು ನೋಡಿ ಚಮತ್ಕಾರ ನಿಕೇತ (Museum)ದಲ್ಲಿಯ ತಿಮಿಂಗಲ ಮೀನದ ಎಲವಿನ ಹಂದರವು ನೆನಪಾಗುವದು.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...