Home / ಕವನ / ಕವಿತೆ / ನಂಬಿಕೆ

ನಂಬಿಕೆ

ತೆನೆ – ೧

ಗಂಟೆಯ ಮುಳ್ಳು ನಿಂತಿದೆ
ನಿಮಿಷದ ಮುಳ್ಳಿಗೋ ಗರಬಡಿದಿದೆ
ಕ್ಷಣದ ಮುಳ್ಳು ಹೆಜ್ಜೆ ಕಿತ್ತಿಡಲಾರದೇ
ಮೂಗುಬ್ಬಸದಿಂದ ತೆವಳುತಿದೆ
ಸೋರುತ್ತಿದೆ ಗಳಿಗೆ ಬಟ್ಟಲು
ಇನ್ನಾದರೂ ಹೊಸತಿಗೆ
ತೆರೆಯಬಾರದೇ ಬಾಗಿಲು?
ಪಿಸುಗುಟ್ಟುವ ಚಂದಿರ
ಏರಿಸುತ್ತಾನೆ ಅಮಲು !

ಹೊತ್ತಲ್ಲದ ಹೊತ್ತಲ್ಲಿ
ಎದ್ದು ಬಂದಿದ್ದಾನೆ
ನಿದ್ದೆಗಣ್ಣಿನಲ್ಲೇ ಚಂದಿರ
ಹಾಡು ಮುಗಿಯುತ್ತದೆ
ಜಾವ ಹೊರಳುತ್ತದೆ
ಗಡಿಯಾರ ನಿಂತರೇನು
ಕಾಲ ಸರಿಯುತ್ತದೆ
ಇನ್ನಾದರೂ ಹೊಸತಿಗೆ
ತೆರೆಯಬಾರದೇ ಬಾಗಿಲು?
ಗೊಣಗುತ್ತಲೇ ಮೂಡಿಸುತ್ತಾನೆ ದಿಗಿಲು!

ತೆನೆ-೨
ಒಳಗಿದ್ದದೂ ಹೊರಗುಳಿಯುವ
ಹಠಕ್ಕೆ ಬಿದ್ದು
ಎಲ್ಲಾ ಒದ್ದು
ಬೆಳಕಿಗೇ ಬೆನ್ನು ತಿರುಗಿಸಿ
ಆಕಾಶಕ್ಕೆ ಏಣಿ ಒರಗಿಸಿ
ಎತ್ತರಕ್ಕೇರಿ ಕುಳಿತ ಚಂದಿರನಿಗೆ
ಆಳಗಳು ಆರ್ಥವಾಗುವುದೆಲ್ಲಿ ?

ಹೊಸತಿಗೆ ತೆರೆದುಕೊಳ್ಳುವುದೇನೂ
ಕಷ್ಟವಲ್ಲ
ಬಾಗಿಲು ತೆರೆದುಬಿಡಬಹುದು
ಬೇಕೆನಿಸಿದ ಹೊಸತನ್ನೆಲ್ಲಾ
ಒಳಗೆ ಕರೆದುಬಿಡಬಹುದು
ಎದೆ ನೋವು ನದಿಯಾಗಿ ಹರಿದು
ಎಲ್ಲಾ ಕೊಚ್ಚಿ ಹೋಗುವ ಮೊದಲು
ಕಾಲನ ತಡೆದುಬಿಡಬಹುದು
ಆದರೆ…
ತೆರೆದ ಬಾಗಿಲಿನೊಂದಿಗೇ
ಧೂಳು ಕಸಕಡ್ಡಿಗಳೂ ಬಂದೆರಗಿದರೆ
ಹೇಗೆ ತಡೆಯುವುದು?
ಎಂದೆಲ್ಲಾ ಗೊಂದಲ!

ಆ ಮನವ
ಬೊಗಸೆಯಲಿ ಹಿಡಿದ ಚಂದಿರ
ಕಣ್ಣುಗಳ ಕೂಡಿಸಿ
ನೂರು ಮುತ್ತುಗಳ
ಪ್ರಮಾಣದ ಭರವಸೆಯನ್ನೊತ್ತಿ
ಹೊಸತೆಲ್ಲವೂ ಒಳಿತೆಂದು ಒಪ್ಪಿಸಿದ್ದಾನೆ
ಬಾಗಿಲು ತೆರೆಸಿದ್ದಾನೆ
ಹೊಸ ಬೆಳಕಿಗೆ ಕಣ್ಣು ಮೂಡಿಸಿದ್ದಾನೆ!
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...