Home / ಕವನ / ಕವಿತೆ / ನಂಬಿಕೆ

ನಂಬಿಕೆ

ತೆನೆ – ೧

ಗಂಟೆಯ ಮುಳ್ಳು ನಿಂತಿದೆ
ನಿಮಿಷದ ಮುಳ್ಳಿಗೋ ಗರಬಡಿದಿದೆ
ಕ್ಷಣದ ಮುಳ್ಳು ಹೆಜ್ಜೆ ಕಿತ್ತಿಡಲಾರದೇ
ಮೂಗುಬ್ಬಸದಿಂದ ತೆವಳುತಿದೆ
ಸೋರುತ್ತಿದೆ ಗಳಿಗೆ ಬಟ್ಟಲು
ಇನ್ನಾದರೂ ಹೊಸತಿಗೆ
ತೆರೆಯಬಾರದೇ ಬಾಗಿಲು?
ಪಿಸುಗುಟ್ಟುವ ಚಂದಿರ
ಏರಿಸುತ್ತಾನೆ ಅಮಲು !

ಹೊತ್ತಲ್ಲದ ಹೊತ್ತಲ್ಲಿ
ಎದ್ದು ಬಂದಿದ್ದಾನೆ
ನಿದ್ದೆಗಣ್ಣಿನಲ್ಲೇ ಚಂದಿರ
ಹಾಡು ಮುಗಿಯುತ್ತದೆ
ಜಾವ ಹೊರಳುತ್ತದೆ
ಗಡಿಯಾರ ನಿಂತರೇನು
ಕಾಲ ಸರಿಯುತ್ತದೆ
ಇನ್ನಾದರೂ ಹೊಸತಿಗೆ
ತೆರೆಯಬಾರದೇ ಬಾಗಿಲು?
ಗೊಣಗುತ್ತಲೇ ಮೂಡಿಸುತ್ತಾನೆ ದಿಗಿಲು!

ತೆನೆ-೨
ಒಳಗಿದ್ದದೂ ಹೊರಗುಳಿಯುವ
ಹಠಕ್ಕೆ ಬಿದ್ದು
ಎಲ್ಲಾ ಒದ್ದು
ಬೆಳಕಿಗೇ ಬೆನ್ನು ತಿರುಗಿಸಿ
ಆಕಾಶಕ್ಕೆ ಏಣಿ ಒರಗಿಸಿ
ಎತ್ತರಕ್ಕೇರಿ ಕುಳಿತ ಚಂದಿರನಿಗೆ
ಆಳಗಳು ಆರ್ಥವಾಗುವುದೆಲ್ಲಿ ?

ಹೊಸತಿಗೆ ತೆರೆದುಕೊಳ್ಳುವುದೇನೂ
ಕಷ್ಟವಲ್ಲ
ಬಾಗಿಲು ತೆರೆದುಬಿಡಬಹುದು
ಬೇಕೆನಿಸಿದ ಹೊಸತನ್ನೆಲ್ಲಾ
ಒಳಗೆ ಕರೆದುಬಿಡಬಹುದು
ಎದೆ ನೋವು ನದಿಯಾಗಿ ಹರಿದು
ಎಲ್ಲಾ ಕೊಚ್ಚಿ ಹೋಗುವ ಮೊದಲು
ಕಾಲನ ತಡೆದುಬಿಡಬಹುದು
ಆದರೆ…
ತೆರೆದ ಬಾಗಿಲಿನೊಂದಿಗೇ
ಧೂಳು ಕಸಕಡ್ಡಿಗಳೂ ಬಂದೆರಗಿದರೆ
ಹೇಗೆ ತಡೆಯುವುದು?
ಎಂದೆಲ್ಲಾ ಗೊಂದಲ!

ಆ ಮನವ
ಬೊಗಸೆಯಲಿ ಹಿಡಿದ ಚಂದಿರ
ಕಣ್ಣುಗಳ ಕೂಡಿಸಿ
ನೂರು ಮುತ್ತುಗಳ
ಪ್ರಮಾಣದ ಭರವಸೆಯನ್ನೊತ್ತಿ
ಹೊಸತೆಲ್ಲವೂ ಒಳಿತೆಂದು ಒಪ್ಪಿಸಿದ್ದಾನೆ
ಬಾಗಿಲು ತೆರೆಸಿದ್ದಾನೆ
ಹೊಸ ಬೆಳಕಿಗೆ ಕಣ್ಣು ಮೂಡಿಸಿದ್ದಾನೆ!
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಎಮ್ ಎನ್ ಎಸ್ ರಾವ್