Home / ಲೇಖನ / ಇತರೆ / ಶ್ರಾವಣ

ಶ್ರಾವಣ

‘ಶ್ರಾವಣ’ ತಿಂಗಳು ಬಂತೆಂದರೆ ಎಲ್ಲೆಲ್ಲೂ ಸಂತಸ ಪುಟಿದೇಳುತ್ತದೆ. ವರ್ಷ ಋತುವಿನ ಮಡಿಲಲ್ಲಿದ್ದ ಶ್ರಾವಣ ಮಾಸ ಮಳೆಯ ನೆನಪಾಗಿಸುತ್ತದೆ. ಹಚ್ಚು ಹಸಿರಾದ ಗಿಡ-ಮರಗಳು, ಬಾವಿ, ಕೆರೆ, ನದಿಗಳು ನೀರಿನಿಂದ ತುಂಬಿಕೊಂಡು ಸಂಭ್ರಮದಿಂದ ಉಸಿರಾಡುವಾಗ ಇಳೆ ಸುಂದರವಾಗಿ ಕಾಣುತ್ತಾಳೆ.

ಶ್ರಾವಣ ಎಂದರೆ ಕೇಳುವಿಕೆಗೆ ಸಂಬಂಧಿಸಿದಂತೆ ಈ ಮಾಸದಲ್ಲಿ ಎಲ್ಲಿ ನೋಡಿದರಲ್ಲಿ ಪೂಜೆ, ಪಠಣ, ಪ್ರವಚನ, ಪುರಾಣ ವಾಚನಗಳು ನಡೆದು ವಸುಂಧರೆಯು ಪೂಜ್ಯನೀಯ ಭಾವದಲ್ಲಿ ಮಡಿವಂತಿಕೆಯಲ್ಲಿ ಕಂಗೊಳಿಸುತ್ತಾಳೆ.

ರೈತರು ಹೊಲಗಳಿಗೆ ಬೆಳೆಗಳಿಗೆ ದರ್ಶಿಸಲು ಉತ್ಸಾಹದಿಂದ ತೆರಳುವಾಗ ಪುಟ್ಟ ಪುಟ್ಟ ಮಕ್ಕಳು ಮೋಡಕ್ಕೆ ರಂದ್ರ ಬಿದ್ದ ಹಾಗೆ ಸುರಿಯುತ್ತಿರುವ ಮಳೆಯಲ್ಲಿ ತೋಯ್ದಿಕೊಂಡು ಅಲೆದಾಡುವುದು ಕಂಡರೆ ಹಬ್ಬದ ವಾತಾವರಣ ಎನಿಸುತ್ತಿದೆ.

ಮಳೆರಾಯ ಮೋಡಗಳ ಮೇಲೆ ಸವಾರಿ ಮಾಡಿ ಎಲ್ಲೆಂದರಲ್ಲಿ ಸುರಿದು ತಂಪನ್ನು ಎಸಗಿ ಗಿಡ-ಮರಗಳಿಗೆ ಜೀವಾಮೃತವಾಗುವಂತೆ ಮೆರೆಯುವನು. ಶ್ರಾವಣ ಸೋಮವಾರ, ಶುಕ್ರವಾರ, ಶನಿವಾರಗಳು ಹಿಂದು ಜನರಿಗೆ ಪವಿತ್ರ ದಿನಗಳಾಗಿ ದೇವರ ದರುಶನಕ್ಕಾಗಿ ಜನರು ಮಂದಿರಗಳಲ್ಲಿ ಸಾಲು ಸಾಲಾಗಿ ಧಾವಿಸುತ್ತಾರೆ.

ಈ ಮಾಸದಲ್ಲಿ ಬರುವ ನಾರಿಯರ ದೊಡ್ಡ ಹಬ್ಬ ನಾಗರ ಪಂಚಮಿಯಂತೂ ಮಹಿಳೆಯರಿಗೆ ಖುಷಿ ಕೊಡುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಹೊಸ ಹೊಸ ಸೀರೆ ಅಂಬರಗಳನ್ನು ತೊಟ್ಟು ಹೂ ಮುಡಿದುಕೊಂಡು ಗುಂಪಾಗಿ ನಾರಿಯರು ನಾಗದೇವನ ಪೂಜೆಗೆ ತೆರಳುವುದಾಗಲಿ, ಮಹಾಲಕ್ಷ್ಮಿಯ ಪೂಜೆ ಮಾಡುವುದಾಗಲಿ, ದೇವ ಮಂದಿರಗಳಲ್ಲಿ ವಿಜೃಂಭಣೆಯಿಂದ ಭಜಿಸುವುದಾಗಲಿ ಲವಲವಿಕೆಗೆ ಪಾತ್ರವಾಗುತ್ತದೆ. ಇದೇ ಮಾಸದಲ್ಲಿ ಬರುವ ರಕ್ಷಾ ಬಂಧನ ಪೂರ್ಣಿಮೆ ಅಣ್ಣ-ತಂಗಿಯರ ಪ್ರೀತಿಗೆ ಹೊಸ ಇತಿಹಾಸ ಬರೆಯುತ್ತದೆ. ಎಲ್ಲಿ ನೋಡಿದರಲ್ಲಿ ಹಚ್ಚ ಹಸಿರ ಸೀರೆಯುಟ್ಟ ವಸುಂಧರೆ ಕಂಗೊಳಿಸುವಾಗ ರೈತರು, ಮಕ್ಕಳು, ಸಂತರು, ಭಕ್ತರು, ಸಾಮಾನ್ಯ ಜನರು ಶ್ರಾವಣ ಮಾಸ ಮೈ ಮನಗಳಲ್ಲಿ ತುಂಬಿಕೊಂಡು ರಮರಮಿಸುತ್ತಾರೆ. ಅಂತಲೆ ಅನೇಕ ಕವಿಗಳು ಶ್ರಾವಣದ ಧಾವಂತವನ್ನು ಎದೆ ತುಂಬಿ ಹಾಡಿದ್ದಾರೆ. ಕವಿ ರಾಮಮೂರ್ತಿಯವರು ಇಂಥ ಶ್ರಾವಣದ ನಿಸರ್ಗ ಕಂಡು

ಚನ್ನಿಗರು ಚಲುವೆಯರು ಕಿಲಕಿಲನೆ ನಗುವ ಬೀರಿ
ತಾವರೆಯ ಮೊಗವರಳಿ ಗೆಯ ಸಿರಿಕಂಪ ಬೀರಿ
ನಾ ಮುಂದು ತಾ ಮುಂದು ಎಂದೆಲ್ಲ ಹಿಗ್ಗಿ ಬರಲು
ಕಾವ್ಯಗಳ ಕಟ್ಟೊಡೆದು ಕನ್ನಡ ಸಾಹಿತ್ಯ ಬೆಳಗಲು…

ಎಂದು ಎದೆ ತುಂಬಿ ಹಾಡಿರುವುದು ನಿಜಕ್ಕೂ ಶ್ರಾವಣದ ಐಸಿರಿ ನಿಸರ್ಗದ ಅಚ್ಚರಿ.
*****

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...