Home / ಲೇಖನ / ಇತರೆ / ಶ್ರಾವಣ

ಶ್ರಾವಣ

‘ಶ್ರಾವಣ’ ತಿಂಗಳು ಬಂತೆಂದರೆ ಎಲ್ಲೆಲ್ಲೂ ಸಂತಸ ಪುಟಿದೇಳುತ್ತದೆ. ವರ್ಷ ಋತುವಿನ ಮಡಿಲಲ್ಲಿದ್ದ ಶ್ರಾವಣ ಮಾಸ ಮಳೆಯ ನೆನಪಾಗಿಸುತ್ತದೆ. ಹಚ್ಚು ಹಸಿರಾದ ಗಿಡ-ಮರಗಳು, ಬಾವಿ, ಕೆರೆ, ನದಿಗಳು ನೀರಿನಿಂದ ತುಂಬಿಕೊಂಡು ಸಂಭ್ರಮದಿಂದ ಉಸಿರಾಡುವಾಗ ಇಳೆ ಸುಂದರವಾಗಿ ಕಾಣುತ್ತಾಳೆ.

ಶ್ರಾವಣ ಎಂದರೆ ಕೇಳುವಿಕೆಗೆ ಸಂಬಂಧಿಸಿದಂತೆ ಈ ಮಾಸದಲ್ಲಿ ಎಲ್ಲಿ ನೋಡಿದರಲ್ಲಿ ಪೂಜೆ, ಪಠಣ, ಪ್ರವಚನ, ಪುರಾಣ ವಾಚನಗಳು ನಡೆದು ವಸುಂಧರೆಯು ಪೂಜ್ಯನೀಯ ಭಾವದಲ್ಲಿ ಮಡಿವಂತಿಕೆಯಲ್ಲಿ ಕಂಗೊಳಿಸುತ್ತಾಳೆ.

ರೈತರು ಹೊಲಗಳಿಗೆ ಬೆಳೆಗಳಿಗೆ ದರ್ಶಿಸಲು ಉತ್ಸಾಹದಿಂದ ತೆರಳುವಾಗ ಪುಟ್ಟ ಪುಟ್ಟ ಮಕ್ಕಳು ಮೋಡಕ್ಕೆ ರಂದ್ರ ಬಿದ್ದ ಹಾಗೆ ಸುರಿಯುತ್ತಿರುವ ಮಳೆಯಲ್ಲಿ ತೋಯ್ದಿಕೊಂಡು ಅಲೆದಾಡುವುದು ಕಂಡರೆ ಹಬ್ಬದ ವಾತಾವರಣ ಎನಿಸುತ್ತಿದೆ.

ಮಳೆರಾಯ ಮೋಡಗಳ ಮೇಲೆ ಸವಾರಿ ಮಾಡಿ ಎಲ್ಲೆಂದರಲ್ಲಿ ಸುರಿದು ತಂಪನ್ನು ಎಸಗಿ ಗಿಡ-ಮರಗಳಿಗೆ ಜೀವಾಮೃತವಾಗುವಂತೆ ಮೆರೆಯುವನು. ಶ್ರಾವಣ ಸೋಮವಾರ, ಶುಕ್ರವಾರ, ಶನಿವಾರಗಳು ಹಿಂದು ಜನರಿಗೆ ಪವಿತ್ರ ದಿನಗಳಾಗಿ ದೇವರ ದರುಶನಕ್ಕಾಗಿ ಜನರು ಮಂದಿರಗಳಲ್ಲಿ ಸಾಲು ಸಾಲಾಗಿ ಧಾವಿಸುತ್ತಾರೆ.

ಈ ಮಾಸದಲ್ಲಿ ಬರುವ ನಾರಿಯರ ದೊಡ್ಡ ಹಬ್ಬ ನಾಗರ ಪಂಚಮಿಯಂತೂ ಮಹಿಳೆಯರಿಗೆ ಖುಷಿ ಕೊಡುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಹೊಸ ಹೊಸ ಸೀರೆ ಅಂಬರಗಳನ್ನು ತೊಟ್ಟು ಹೂ ಮುಡಿದುಕೊಂಡು ಗುಂಪಾಗಿ ನಾರಿಯರು ನಾಗದೇವನ ಪೂಜೆಗೆ ತೆರಳುವುದಾಗಲಿ, ಮಹಾಲಕ್ಷ್ಮಿಯ ಪೂಜೆ ಮಾಡುವುದಾಗಲಿ, ದೇವ ಮಂದಿರಗಳಲ್ಲಿ ವಿಜೃಂಭಣೆಯಿಂದ ಭಜಿಸುವುದಾಗಲಿ ಲವಲವಿಕೆಗೆ ಪಾತ್ರವಾಗುತ್ತದೆ. ಇದೇ ಮಾಸದಲ್ಲಿ ಬರುವ ರಕ್ಷಾ ಬಂಧನ ಪೂರ್ಣಿಮೆ ಅಣ್ಣ-ತಂಗಿಯರ ಪ್ರೀತಿಗೆ ಹೊಸ ಇತಿಹಾಸ ಬರೆಯುತ್ತದೆ. ಎಲ್ಲಿ ನೋಡಿದರಲ್ಲಿ ಹಚ್ಚ ಹಸಿರ ಸೀರೆಯುಟ್ಟ ವಸುಂಧರೆ ಕಂಗೊಳಿಸುವಾಗ ರೈತರು, ಮಕ್ಕಳು, ಸಂತರು, ಭಕ್ತರು, ಸಾಮಾನ್ಯ ಜನರು ಶ್ರಾವಣ ಮಾಸ ಮೈ ಮನಗಳಲ್ಲಿ ತುಂಬಿಕೊಂಡು ರಮರಮಿಸುತ್ತಾರೆ. ಅಂತಲೆ ಅನೇಕ ಕವಿಗಳು ಶ್ರಾವಣದ ಧಾವಂತವನ್ನು ಎದೆ ತುಂಬಿ ಹಾಡಿದ್ದಾರೆ. ಕವಿ ರಾಮಮೂರ್ತಿಯವರು ಇಂಥ ಶ್ರಾವಣದ ನಿಸರ್ಗ ಕಂಡು

ಚನ್ನಿಗರು ಚಲುವೆಯರು ಕಿಲಕಿಲನೆ ನಗುವ ಬೀರಿ
ತಾವರೆಯ ಮೊಗವರಳಿ ಗೆಯ ಸಿರಿಕಂಪ ಬೀರಿ
ನಾ ಮುಂದು ತಾ ಮುಂದು ಎಂದೆಲ್ಲ ಹಿಗ್ಗಿ ಬರಲು
ಕಾವ್ಯಗಳ ಕಟ್ಟೊಡೆದು ಕನ್ನಡ ಸಾಹಿತ್ಯ ಬೆಳಗಲು…

ಎಂದು ಎದೆ ತುಂಬಿ ಹಾಡಿರುವುದು ನಿಜಕ್ಕೂ ಶ್ರಾವಣದ ಐಸಿರಿ ನಿಸರ್ಗದ ಅಚ್ಚರಿ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...