Home / ಲೇಖನ / ಇತರೆ / ಶ್ರಾವಣ

ಶ್ರಾವಣ

‘ಶ್ರಾವಣ’ ತಿಂಗಳು ಬಂತೆಂದರೆ ಎಲ್ಲೆಲ್ಲೂ ಸಂತಸ ಪುಟಿದೇಳುತ್ತದೆ. ವರ್ಷ ಋತುವಿನ ಮಡಿಲಲ್ಲಿದ್ದ ಶ್ರಾವಣ ಮಾಸ ಮಳೆಯ ನೆನಪಾಗಿಸುತ್ತದೆ. ಹಚ್ಚು ಹಸಿರಾದ ಗಿಡ-ಮರಗಳು, ಬಾವಿ, ಕೆರೆ, ನದಿಗಳು ನೀರಿನಿಂದ ತುಂಬಿಕೊಂಡು ಸಂಭ್ರಮದಿಂದ ಉಸಿರಾಡುವಾಗ ಇಳೆ ಸುಂದರವಾಗಿ ಕಾಣುತ್ತಾಳೆ.

ಶ್ರಾವಣ ಎಂದರೆ ಕೇಳುವಿಕೆಗೆ ಸಂಬಂಧಿಸಿದಂತೆ ಈ ಮಾಸದಲ್ಲಿ ಎಲ್ಲಿ ನೋಡಿದರಲ್ಲಿ ಪೂಜೆ, ಪಠಣ, ಪ್ರವಚನ, ಪುರಾಣ ವಾಚನಗಳು ನಡೆದು ವಸುಂಧರೆಯು ಪೂಜ್ಯನೀಯ ಭಾವದಲ್ಲಿ ಮಡಿವಂತಿಕೆಯಲ್ಲಿ ಕಂಗೊಳಿಸುತ್ತಾಳೆ.

ರೈತರು ಹೊಲಗಳಿಗೆ ಬೆಳೆಗಳಿಗೆ ದರ್ಶಿಸಲು ಉತ್ಸಾಹದಿಂದ ತೆರಳುವಾಗ ಪುಟ್ಟ ಪುಟ್ಟ ಮಕ್ಕಳು ಮೋಡಕ್ಕೆ ರಂದ್ರ ಬಿದ್ದ ಹಾಗೆ ಸುರಿಯುತ್ತಿರುವ ಮಳೆಯಲ್ಲಿ ತೋಯ್ದಿಕೊಂಡು ಅಲೆದಾಡುವುದು ಕಂಡರೆ ಹಬ್ಬದ ವಾತಾವರಣ ಎನಿಸುತ್ತಿದೆ.

ಮಳೆರಾಯ ಮೋಡಗಳ ಮೇಲೆ ಸವಾರಿ ಮಾಡಿ ಎಲ್ಲೆಂದರಲ್ಲಿ ಸುರಿದು ತಂಪನ್ನು ಎಸಗಿ ಗಿಡ-ಮರಗಳಿಗೆ ಜೀವಾಮೃತವಾಗುವಂತೆ ಮೆರೆಯುವನು. ಶ್ರಾವಣ ಸೋಮವಾರ, ಶುಕ್ರವಾರ, ಶನಿವಾರಗಳು ಹಿಂದು ಜನರಿಗೆ ಪವಿತ್ರ ದಿನಗಳಾಗಿ ದೇವರ ದರುಶನಕ್ಕಾಗಿ ಜನರು ಮಂದಿರಗಳಲ್ಲಿ ಸಾಲು ಸಾಲಾಗಿ ಧಾವಿಸುತ್ತಾರೆ.

ಈ ಮಾಸದಲ್ಲಿ ಬರುವ ನಾರಿಯರ ದೊಡ್ಡ ಹಬ್ಬ ನಾಗರ ಪಂಚಮಿಯಂತೂ ಮಹಿಳೆಯರಿಗೆ ಖುಷಿ ಕೊಡುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಹೊಸ ಹೊಸ ಸೀರೆ ಅಂಬರಗಳನ್ನು ತೊಟ್ಟು ಹೂ ಮುಡಿದುಕೊಂಡು ಗುಂಪಾಗಿ ನಾರಿಯರು ನಾಗದೇವನ ಪೂಜೆಗೆ ತೆರಳುವುದಾಗಲಿ, ಮಹಾಲಕ್ಷ್ಮಿಯ ಪೂಜೆ ಮಾಡುವುದಾಗಲಿ, ದೇವ ಮಂದಿರಗಳಲ್ಲಿ ವಿಜೃಂಭಣೆಯಿಂದ ಭಜಿಸುವುದಾಗಲಿ ಲವಲವಿಕೆಗೆ ಪಾತ್ರವಾಗುತ್ತದೆ. ಇದೇ ಮಾಸದಲ್ಲಿ ಬರುವ ರಕ್ಷಾ ಬಂಧನ ಪೂರ್ಣಿಮೆ ಅಣ್ಣ-ತಂಗಿಯರ ಪ್ರೀತಿಗೆ ಹೊಸ ಇತಿಹಾಸ ಬರೆಯುತ್ತದೆ. ಎಲ್ಲಿ ನೋಡಿದರಲ್ಲಿ ಹಚ್ಚ ಹಸಿರ ಸೀರೆಯುಟ್ಟ ವಸುಂಧರೆ ಕಂಗೊಳಿಸುವಾಗ ರೈತರು, ಮಕ್ಕಳು, ಸಂತರು, ಭಕ್ತರು, ಸಾಮಾನ್ಯ ಜನರು ಶ್ರಾವಣ ಮಾಸ ಮೈ ಮನಗಳಲ್ಲಿ ತುಂಬಿಕೊಂಡು ರಮರಮಿಸುತ್ತಾರೆ. ಅಂತಲೆ ಅನೇಕ ಕವಿಗಳು ಶ್ರಾವಣದ ಧಾವಂತವನ್ನು ಎದೆ ತುಂಬಿ ಹಾಡಿದ್ದಾರೆ. ಕವಿ ರಾಮಮೂರ್ತಿಯವರು ಇಂಥ ಶ್ರಾವಣದ ನಿಸರ್ಗ ಕಂಡು

ಚನ್ನಿಗರು ಚಲುವೆಯರು ಕಿಲಕಿಲನೆ ನಗುವ ಬೀರಿ
ತಾವರೆಯ ಮೊಗವರಳಿ ಗೆಯ ಸಿರಿಕಂಪ ಬೀರಿ
ನಾ ಮುಂದು ತಾ ಮುಂದು ಎಂದೆಲ್ಲ ಹಿಗ್ಗಿ ಬರಲು
ಕಾವ್ಯಗಳ ಕಟ್ಟೊಡೆದು ಕನ್ನಡ ಸಾಹಿತ್ಯ ಬೆಳಗಲು…

ಎಂದು ಎದೆ ತುಂಬಿ ಹಾಡಿರುವುದು ನಿಜಕ್ಕೂ ಶ್ರಾವಣದ ಐಸಿರಿ ನಿಸರ್ಗದ ಅಚ್ಚರಿ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...