Home / ಲೇಖನ / ಇತರೆ / ಹಳೆಯ ಪ್ರಶಸ್ತಿ ಗೊತ್ತೇ?

ಹಳೆಯ ಪ್ರಶಸ್ತಿ ಗೊತ್ತೇ?

ಇಂದಿನ ಮಕ್ಕಳೆ ಮುಂದಿನ ಪ್ರಜೆಗಳು. ಆದ್ದರಿಂದ ಇಂದಿನ ಮಕ್ಕಳೆಲ್ಲ ವಿಜ್ಞಾನದತ್ತ ಒಲವು ತೋರಿಸಬೇಕು. ಅದರಲ್ಲೂ ಭೌತವಿಜ್ಞಾನವನ್ನು ಅಭ್ಯಸಿಸಬೇಕು. ಜ್ಞಾನ ವಿಜ್ಞಾನದ ಮುನ್ನಡೆ ದೇಶದ ಮುನ್ನೆಡೆಯಾಗಿದೆ.

ಪ್ರತಿವರ್‍ಷ ಲಂಡನ್‌ನ ರಾಯಲ್ ಸೊಸೈಟಿ ನೀಡುವ ವಿಶ್ವದ ತೀರಾ ಹಳೆಯದಾದ ವಿಜ್ಞಾನ ಪ್ರಶಸ್ತಿಯಾದ ‘ಕೋಪ್ಲೆ ಮೆಡಲ್’ ಗೆ ಭೌತವಿಜ್ಞಾನಿ ಪೀಟರ್ ಹಿಗ್ಸ್ ಅವರು ಇತ್ತೀಚೆಗೆ ಆಯ್ಕೆಯಾಗಿರುವರು. ಅವರ ‘ದೇವಕಣ’ ಶೋಧನೆಗಾಗಿ ಈ ಪ್ರಶಸ್ತಿ ನೀಡಿದೆ.

ಪೀಟರ್ ಹಿಗ್ಸ್ ದೇವಕಣ ಕುರಿತು ೧೯೬೪ ರಲ್ಲೇ ತಮ್ಮ ಸಿದ್ಧಾಂತವನ್ನು ಮಂಡಿಸಿದ್ದರು. ಇದೇ ವೇಳೆಯಲ್ಲೇ ಫ್ರಾಂಸ್ವಾ ಎನ್‌ಗ್ಲೆರ್‍ಟ್ ಇದೇ ಸಿದ್ಧಾಂತದ ಮೇಲೆ ಕೆಲಸ ಮಾಡಿದ್ದರು!

ಹೀಗಾಗಿ ಹಲವು ಪ್ರಯೋಗಗಳ ನಂತರ ೨೦೧೨ ರಲ್ಲಿ ಹಿಗ್ಸ್ ಅವರ ಸಿದ್ಧಾಂತಕ್ಕೆ ಮಾನ್ಯತೆ ನೀಡಿದೆ ಎಂದು ವರದಿಯಾಗಿದೆ. ಈ ಮಹತ್ವದ ಸಾಧನೆಗಾಗಿ ಪೀಟರ್ ಹೀಗ್ಸ್- ಎನ್‌ಗ್ಲೆರ್‍ಟ್ ಫ್ರಾಂಸ್ವಾ ಅವರಿಗೆ ೨೦೧೩ ರಲ್ಲಿ ಜೋಡಿಯಾಗಿ ೨೦೧೩ ರಲ್ಲಿ ನೊಬೆಲ್ ಬಹುಮಾನ ನೀಡಿ ಗೌರವಿಸಲಾಗಿತ್ತು!

ಜ್ಞಾನ ವಿಜ್ಞಾನ ಕಾರ್‍ಯಕ್ಷೇತ್ರದಲ್ಲಿನ ತೀರಾ ಮಹತ್ವದ ಸಾಧನೆ ಮಾಡಿದವರಿಗಾಗಿ ರಾಯಲ್ ಸೊಸೈಟಿಯು ಈ ಪುರಸ್ಕಾರವನ್ನು ನೀಡಿ ಗೌರವಿಸುವುದು.

ಈಗಾಗಲೇ ಸ್ಟೀಫನ್ ಹಾಂಕಿಂಗ್, ಅಲೆಸ್ ಜೆಫ್ರಿ, ಆಂಡ್ರೆ ಜೆಮ್ ಮೊದಲಾದ ವಿಜ್ಞಾನಿಗಳಿಗೆ ಈ ಗೌರವ ಸಂದಿರುವುದು.

ವಿಜ್ಞಾನ ಕ್ಷೇತ್ರದಲ್ಲಿ ತೀರಾ ಹಳೆಯ ಪ್ರಶಸ್ತಿಯಾದ ಕೋಪ್ಲೆ ಮೆಡಲ್ ಪಡೆದ ಚಾರ್ಲ್ಸ್ ಡಾರ್ವಿನ್- ಅಲ್ಬರ್ಟ್ ಐನ್‌ಸ್ಟೀನ್ ಅವರ ಸಾಲಿಗೆ ಪೀಟರ್ ಹೀಗ್ಸ್ ವಯಸ್ಸು ೮೬ ವರ್ಷ ಇವರೂ ಈಗ ಸೇರ್‍ಪಡೆಯಾಗಿರುವರು.

ಮೊತ್ತ ಮೊದಲ ನೊಬೆಲ್ ಬಹುಮಾನ ನೀಡುವುದಕ್ಕಿಂತ ಸುಮಾರು ೧೭೦ ವರ್ಷಗಳಿಗೆ ಮೊದಲು ಅಂದರೆ ೧೭೩೧ ರಲ್ಲಿ ರಾಯಲ್ ಸೊಸೈಟಿಯು ಕೋಪ್ಲೆ ಮೆಡಲ್ ಪ್ರಶಸ್ತಿ ನೀಡಲು ಮೊದಲಾಯಿತು. ಹೀಗಾಗಿ ಇದು ವಿಜ್ಞಾನ ಕ್ಷೇತ್ರದ ಹಳೆಯ ಪ್ರಶಸ್ತಿ ಎಂಬ ಹಿರಿಮೆಯನ್ನು ಹೊಂದಿದೆ.

ವಿಜ್ಞಾನ ಕ್ಷೇತ್ರದಲ್ಲಿ ಸಾಧಿಸಿದ ಸಾಧಕರಿಗೆ ಹೀಗೆ ಪ್ರಶಸ್ತಿಗಳ ಸುರಿಮಳೆ ವಿಶ್ವದಾದ್ಯಂತ ಇದೆಯೆಂಬುದನ್ನು ನಾವು ನೀವು ಮನಗಾಣಬೇಕಾಗಿದೆ.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...