Home / ಲೇಖನ / ಇತರೆ / ಜನಸಂಖ್ಯೆ ಕತೆ

ಜನಸಂಖ್ಯೆ ಕತೆ

ಭವ್ಯ ಭಾರತದ ಜನಸಂಖ್ಯೆಯೂ ಯಾರ ನಿಯಂತ್ರಣದಲ್ಲಿಲ್ಲ. ಬರೀ ಕಾಗದ ಪತ್ರ ಘೋಷಣೆಗಳನ್ನು ಬಿಟ್ಟರೆ, ಯಾವುದೇ ಒತ್ತಡ ಅರಿವು ಜಾಗ್ರತೆ ಮೂಡಿಸುವ ನಿಟ್ಟಿನಲ್ಲಿ ನಮ್ಮಲ್ಲಿ ಇಲ್ಲ.

ಕ್ರಿಸ್ತ ಶಕ ದಿನಾಂಕ ೩೦-೧೨-೨೦೨೨ರ ವೇಳೆಗೆ ಭವ್ಯ ಭಾರತದ ಸಂಖ್ಯೆಯು ಚೀನಾ ದೇಶವನ್ನು ಹಿಂದಿಕ್ಕಿ ಭಾರೀ ಮೇಲುಗೈ ಸಾಧಿಸಲಿದೆಯೆಂದು ಇತ್ತೀಚೆಗೆ ೨೦೧೫ರ ಆಗಸ್ಟ್‌ನಲ್ಲಿ ಬಿಡುಗಡೆ ಮಾಡಿದ ವಿಶ್ವಸಂಸ್ಥೆಯ “ವಿಶ್ವ ಜನಸಂಖ್ಯೆ ನಿರೀಕ್ಷೆಗಳು ೨೦೧೫ರ ಪರಿಷ್ಕರಣೆ” ಎಂಬ ಅಧ್ಯಯನ ವರದಿಯಲ್ಲಿ ವಿವರಿಸಿರುವುದು.

ವಿಶ್ವದಲ್ಲಿ ಸದ್ಯ ಚೀನಾ- ಭಾರತ ದೇಶಗಳು ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಬಹುದೊಡ್ಡ ರಾಷ್ಟ್ರಗಳಾಗಿವೆ. ೨೦೨೨ರ ವೇಳೆಗೆ ಭಾರತವು ಚೀನಾ ದೇಶವನ್ನು ಹಿಂದಿಕ್ಕಿ ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವೆಂದು ಗುರ್‍ತಿಸಿಕೊಳ್ಳಲಿದೆಯೆಂದೂ ಇಡೀ ವಿಶ್ವದ ಒಟ್ಟು ಜನಸಂಖ್ಯೆಯಲ್ಲಿ ಶೇಕಡಾ ೧೯% ರಷ್ಟು ಚೀನಾದ ಜನಸಂಖ್ಯೆ ಯಾಗಿದ್ದರೆ ಶೇಕಡಾ ೧೮% ರಷ್ಟು ಭವ್ಯ ಭಾರತದ್ದಾಗಿದೆಯೆಂದು ವಿಶ್ವಸಂಸ್ಥೆ ದಿನಾಂಕ ೦೬-೦೮-೨೦೧೫ರಂದು ಬಹಿರಂಗ ಪಡಿಸಿದೆ.

ನೈಜೀರಿಯಾ ಏಷ್ಯಾದ ಐದು ರಾಷ್ಟ್ರಗಳಾದ ಬಾಂಗ್ಲಾದೇಶ, ಚೀನಾ, ಭವ್ಯಭಾರತ, ಇಂಡೋನೇಷ್ಯಾ ಹಾಗೂ ಪಾಕಿಸ್ತಾನ, ಲ್ಯಾಟಿನ್ ಅಮೇರಿಕಾದ ಎರಡು ದೇಶಗಳಾದ ಬ್ರೆಜಿಲ್ ಮತ್ತು ಮೆಕ್ಸಿಕೊ, ಉತ್ತರ ಅಮೆರಿಕ ಹಾಗೂ ಯುರೋಫ್ (ರಷ್ಯಾ ಒಕ್ಕೂಟ) ಇವೆಲ್ಲವು ಜಗತ್ತಿನ ತೀರಾ ಹೆಚ್ಚೆಚ್ಚು ಜನಸಂಖ್ಯೆವುಳ್ಳ ಹತ್ತು ಬೃಹತ್ ರಾಷ್ಟ್ರಗಳೆನಿಸಿವೆಯೆಂದು ವಿಶ್ವಸಂಸ್ಥೆಯು ತೀರಾ ಕಳವಳ ವ್ಯಕ್ತಪಡಿಸಿ ಅಂಕಿ ಅಂಶಗಳನ್ನು ಕೂಡಾ ಬಿಡುಗಡೆ ಮಾಡಿರುವುದು.

ಇಡೀ ವಿಶ್ವದ ಒಟ್ಟು ಜನಸಂಖ್ಯೆಯು ೨೦೧೫ಕ್ಕೆ ೭೩೦ ಕೋಟಿ ಇರುವುದು. ಇದೇ ಜನಸಂಖ್ಯೆಯು ೨೦೩೦ಕ್ಕೆ ಒಂದು ಅಂದಾಜಿನ ಪ್ರಕಾರ ೮೫೦ ಕೋಟಿ ಬೆಳೆಯುವ ಎಲ್ಲ ಲಕ್ಷಣಗಳು ಕಂಡು ಬರುತ್ತಿವೆಯೆಂದು ವಿಶ್ವಸಂಸ್ಥೆಯ ಅಧ್ಯಯನ ವರದಿಯು ಬಹಿರಂಗಗೊಳಿಸಿರುವುದು.

ಆದ್ದರಿಂದ ಪ್ರತಿ ಮನೆಮನೆಯಲ್ಲಿ, ಹಳ್ಳಿಹಳ್ಳಿಗಳಲ್ಲಿ, ಪಟ್ಟಣ ಪ್ರದೇಶಗಳಲ್ಲಿ ಒಂದು ಬೇಕು ಎರಡು ಮಕ್ಕಳು ಸಾಕು. ಹೆಣ್ಣಿರಲಿ ಗಂಡಿರಲಿ ಎರಡು ಮಕ್ಕಳಿರಲಿ ಎಂದು ಕಡ್ಡಾಯ ಮಾಡುವ ಕಾಯ್ದೆ ಕಾನೂನು ಕಟ್ಟುನಿಟ್ಟು ಮಾಡುವ ಎಲ್ಲಾ ಮನ ಒಲಿಸುವ ಕೆಲಸ ಆಗಬೇಕಾಗಿದೆ. ಈ ನಿಟ್ಟಿನಲ್ಲಿ ನಾವು ನೀವು ಸಾಗೋಣವಲ್ಲವೇ??
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...