Home / ಲೇಖನ / ಇತರೆ / ಕಲಾಂ ಹೀಗಿದ್ದರು

ಕಲಾಂ ಹೀಗಿದ್ದರು

ಡಾ. ಎ.ಪಿ.ಜೆ. ಅಬ್ದುಲ್‌ ಕಲಾಂ ಅವರು ಜೀವಂತವಿದ್ದಾಗಲೇ ದಂತ ಕತೆಯಾದವರು.

ಇವರು ೨೦೦೨ರಲ್ಲಿ ಭವ್ಯ ಭಾರತದ ೧೧ನೆಯ ರಾಷ್ಟ್ರಪತಿಗಳಾಗಿ ಅಧಿಕಾರ ಸ್ವೀಕರಿಸಿದ ಹೊಸತರಲ್ಲಿ ದಿನಾಂಕ ೧೪-೦೮-೨೦೦೨ರಲ್ಲಿ ಬೆಳ್ಳಂಬೆಳಗ್ಗೆ ಬಹುದೊಡ್ಡ ಅಧಿಕಾರಿ ಬಹುಶಃ ಸ್ವಜಾತಿಯೆಂಬ ಸಲುಗೆಯಿಂದಲೋ ಏನೋ ಇವರನ್ನು ಕಾಣಲು ಬಂದಿದ್ದರು.

“ಸಾರ್ ನಿಮ್ಮ ಕಚೇರಿಗೆ ಮೇಲಿಂದ ಮೇಲೆ ಬರುತ್ತಿರುವ ಆ ಅಧಿಕಾರಿ ಬಗೆಗೆ ನಿಮಗೆ ತಿಳಿಯದೆಂದು ಅನಿಸುವುದು! ಆತ…?’ ಎಂದು ಇನ್ನು ಏನೇನೋ ಹೇಳಲು ಉತ್ಸಾಹಕನಾಗಿದ್ದನು.

‘ಕಲಾಂಜೀಯವರು ಮಧ್ಯದಲ್ಲೇ ಆ ವ್ಯಕ್ತಿ ನಿನಗೆ ಪರಿಚಿತರೇ?’ ಎಂದು ಬಂದಿದ್ದ ಅಧಿಕಾರಿಯನ್ನು ಕೇಳಿದರು.

‘ಇಲ್ಲ! ನನಗೆ ಪರಿಚಿತರಲ್ಲ. ನಾನು ಬೇರೊಬ್ಬ ಅಧಿಕಾರಿಯಿಂದ ವಿಷಯ ಸಂಗ್ರಹಿಸಿದ್ದೇನೆ. ಅದನ್ನು ನಿಮಗೆ ಹೇಳಿದರೆ ಸುರಕ್ಷಿತವೆಂದು ಭಾವಿಸಿ ಬಂದಿದ್ದೇನೆ’ ಎಂದ.

‘ನಿಮಗೆ ಅವರು ಗೊತ್ತಿಲ್ಲ. ಇನ್ನೊಬ್ಬರ ಮಾತು ಕಟ್ಟಿಕೊಂಡು ನನ್ನಲ್ಲಿಗೆ ಬಂದಿರುವೆ. ಅದು ಸತ್ಯವೆಂದು ನಿನಗೆ ಖಾತರಿ ಇದೆಯೇ?’ ಎಂದು ಕಲಾಂಜೀಯವರು ಮತ್ತೇ ಬಂದಿದ್ದವರನ್ನು ಪ್ರಶ್ನಿಸಿದರು.

‘ನನಗೆ ಹೇಳಿದವರೂ ನಮ್ಮ ಜಾತಿಯವರು. ಬಹಳ ದೊಡ್ಡ ಅಧಿಕಾರಿಯವರು, ಅವರು ಸುಳ್ಳು ಹೇಳಲಾರನೆಂದು ನಂಬಿಕೆ ನನ್ನದು ಅದನ್ನು ನಿಮಗೆ ಹೇಳಿದರೆ ನಿಮ್ಮ ಪದವಿಗೆ ಒಳ್ಳೆಯದೆಂದು ಬಂದಿರುವೆ’ ಎಂದ.

‘ಅವರಿಗೂ ಇವರಿಗೂ ವೃತ್ತಿ ಮತ್ಸರವಿರಬೇಕು. ಜಾತಿ, ಮತ, ಕುಲ, ಧರ್‍ಮ, ವೈಷಮ್ಯವಿರಬೇಕು. ಇದರಿಂದ ನನಗೇನು ಧಕ್ಕೆಯಾಗದು. ನನಗೇ ನನ್ನದೇ ಆದ ಬಹಳಷ್ಟು ಕೆಲಸಗಳಿವೆ. ಇನ್ನೊಬ್ಬರ ಗೊಡವೆ, ವೈಯಕ್ತಿಕ ವಿವರಗಳು, ನನಗೆ ಬೇಕಿಲ್ಲ! ಇದರಿಂದ ದೇಶಕ್ಕೆ, ವಿಶ್ವಕ್ಕೆ ಏನಾದರೂ ಪ್ರಯೋಜನವಿದೆಯೇ? ಹೇಳಿ ನಾನು ಕಾಲವನ್ನು ಮೀಸಲಿಡುತ್ತೇನೆ…’ ಎಂದು ಕಲಾಂಜೀಯವರು ಬಂದಿದ್ದ ಅಧಿಕಾರಿಗೆ ನೇರವಾಗಿ ಅಂದರು.

ಬಂದಿದ್ದ ಅಧಿಕಾರಿಯ ಟೈ-ಕೋಟು-ಕ್ರಾಪು ಎತ್ತತ್ತಲೋ ಹಾರಿತು! ಅದನ್ನು ಸರಿ ಮಾಡಿಕೊಳ್ಳುತ್ತಾ ಅಲ್ಲಿಂದ ಒಂದೇ ಉಸಿರಿಗೆ ಓಟ ಕಿತ್ತವರು ಇನ್ನೆಂದೂ ಅವರ ಎದುರಿಗೆ ಓಡಾಡಲಿಲ್ಲ.

ಪ್ರತಿ ಮನೆ, ಸಂಘ, ಸಂಸ್ಥೆ, ನಿಗಮ, ಇಲಾಖೆ, ಗುಂಪು… ಕಚೇರಿಯಲ್ಲಿ ಇಂಥವರು ಇರುವವರಲ್ಲವೇ?
*****

Tagged:

Leave a Reply

Your email address will not be published. Required fields are marked *

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...