Home / ಕವನ / ಕವಿತೆ / ಮಹಾತ್ಮರ ಉಪವಾಸ

ಮಹಾತ್ಮರ ಉಪವಾಸ

[ರಕ್ತಾಕ್ಷಿ ಸಂ| ದ ಭಾದ್ರಪದ ಬ|೫ (೧೪-೯-೧೯೨೪)ಯಿಂದ ಆಶ್ವೀಜ ಶು।೧೧ (೮—೧೦-೧೯೨೪) ಯ ವರೆಗೆ ಮಹಾತ್ಮಾ ಗಾಂಧಿಯವರು ಧಿಲ್ಲಿಯಲ್ಲಿ ಮಾಡಿದ ೨೧ ದಿನಗಳ ಉಪವಾಸ]

ಮಂಜಿನೇಕಾಂತದಲಿ ಶ್ರೀಹರಿಯ ಹಂಬಲಿಸಿ,
ಹೃದಯ ಕ್ಷುಧಯನ್ನೂಡುತೊಡಲ ಹಸಿವಿಂದಂ,
ಮನದ ರಂಭೆಯ ಗೆದ್ದು ೧ಶುಕನಾತನನ್ನೊಲಿಸಿ,
ಭಕ್ತಿಗಂಗೆಯ ಭಾರತದ ತೃಷೆಗೆ ತಂದಂ ೪

೨ಉರುವೇಲೆಯರಳಿಯಡಿಯಲಿ ಚಿರಂ ಹಸಿದರೆದು,
ಮಾರನಂ ಮುರಿದು ಸಂಬುದ್ಧನೆಮಗಗ್ಗಂ
ನಿಬ್ಬಾಣಮೊಂದೆ, ೩ತಣ್ಹೆರಣ್ಯಮಂ ತರಿದು,
ತೋರ್ದನರಿಯಟ್ಟಂಗಿಕದ ಧಮ್ಮಮಗ್ಗಂ೪ ೮

ಕಟ್ಟಳಯೆ ಕುರುಡಿನಲಿ ಬೆಳಕಿನೊಡೆಯನ ಸೋಸು
ವೆಮ್ಮೆದೆಯ ಪರೆಯ ಹೆರೆದೆಮ್ಮೊಳಗೆ ನಿಸದಂ
ನೆಲಸಿರುವ ೫ಸ್ವಾರಾಜ್ಯವೆಮಗೆ ತೋರಿಸೆ ಯೇಸು
೬ಯೋರ್ದನಿನ ಬನದಿ ನಲವತ್ತು ದಿನ ಹಸಿದಂ ೧೨

ಅರಬರೆದೆಯರಬಿಂದ೮ ನೊಂದು, ನವಜೀವನವ
ನುಪವಾಸದಿಂದರಸಿ ೯ಹಿರೆಯ ಕಂದರಿಯಿಂ
ದೇವರಲ್ಲದೆ ದೇವರಿಲ್ಲೆಮ್ಮ ಕಾವನವ
ನೆಂಬ ಸತ್ಯದಿ ಕಂಡನದನರಬರೆರೆಯಂ. ೧೬

ಗುರುವೆ ಇಪ್ಪತ್ತೊಂದು ದಿನದುಪೋಷ್ಯವ ನೋಂತು
ಧಿಲ್ಲಿಯಿಂ ನೀ ಚೆಲ್ಲಿದೀ ಪ್ರೇಮ ಬೀಜಂ
ಭಾರತದ ಭಾಗ್ಯಲತೆಯಾಗಿ ಮಡಲಿಡದೆಂತು?
ಬೆಳಸದೆಂತಮರ ಸೌದರ್ಯನಿದು ಸಾಜಂ? ೨೦
*****

೧ ಪರಿಕ್ಷಿದ್ರಾಯನಿಗೆ ಶ್ರೀಮದ್ಭಾಗವತವನ್ನು ಹೇಳುವ ದ್ವಾರಾ ಶುಕಯೋಗಿ ಭಕ್ತಿಮಾರ್ಗವನ್ನು
ಬೋಧಿಸಿದನು
೨ ಬುದ್ದಗಯೆಯ ಸಮೀಪದಲ್ಲಿರುವ ವನ
೩ ತೃಷ್ಣೆ, ವಿಷಯ ಲಾಲಸೆ
೪ ಅರಿಯೋ ಅಟ್ಟಿಂಗಿಕೋ ಧಮ್ಮ ಮಗ್ಗೊ – The noble eightfold path.
೫ ಸ್ವರ್ಗದ ರಾಜ್ಯ
೬ ಝರೋಸಲೇಮಿನ ಬಳಿಯ ಒಂದು ಹೊಳೆ
೮ ಅರಬು=ಶುಷ್ಕತೆ, ಅಜ್ಞಾನ
೯ ಮಕ್ಕದ ಸಮೀಪದಲ್ಲಿರುವ ‘ಹಿರಾ’ ಎಂಬ ಗುಡ್ಡದ ಗುಹೆಯಲ್ಲಿ ಮಹಮ್ಮದನು ಧ್ಯಾನಿಸುತ್ತಿದ್ದನು

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಎಂ ಎನ್ ಎಸ್ ರಾವ್