Home / ಕವನ / ಕವಿತೆ / ತೌಳವ ಮಾತೆ

ತೌಳವ ಮಾತೆ

ರಾಗ ಭೈರವೀ-ತ್ರಿತಾಲ
(‘ಪತಿತೋದ್ಧಾರಿಣಿ ಗಂಗೇ’ ಎಂಬ ಬಂಗಾಳೀ ಹಾಡಿನಂತೆ)

ಜಯ ಜಯ ತೌಳವ ತಾಯ ||ಪಲ್ಲ||
ಮಣಿವೆ ತಂದೆತಾಯಂದಿರ ತಾಯೇ,
ಭುವನದಿ ತ್ರಿದಿವಚ್ಛಾಯೇ ||ಅನು||
ಭಾರ್ಗವನಂದು ಬಿಸುಡೆ ಕೊಡಲಿಯ ನೀ ಕಡಲೊಡೆದೆಡೆಯಿಂ ಮೂಡಿ,

ಭಾರತಮಾತೆ ತೊಡೆಯೊಳೊಡಗೂಡಿಸೆ, ಸಹ್ಯವೀಣೆಯಂ ತೀಡಿ-
ದೆಸೆದೆಸೆ ರವಿಶಶಿ ಕಿರಣದ ಮಳೆಕುಳಿರಿನ ಮಿಸುಸೇಸೆಯ ಸೂಸೆ-
ನವನವ ರಿತುಗಾನವನವತರಿಸುವೆ, ಗಗನವನಧಿಯೋಲೈಸೆ ||೧||

ಸಾತಿಯಪುತರ ತವರ್ಮನೆ, 1ಸಾತರ ತೆಂಕಣ ನೆಲೆಮನೆಯ ಲೂಪರಾ
ಕೆಳಮನೆ, ಪಾಂಡ್ಯರ ಮೇಲ್ಮನೆ, ನೆರೆಯರಮನೆ ಕನ್ನಾಡಿನ ಭೂಪರಾ;
ಭೈರವ ಬಂಗರ ಚೌಟರಜಿಲ ಸಾವಂತರ ಮನೆಮನೆಯಿಂಬೇ,
ತುಳುವರ ತಾಯ್ಮನೆಯುಳಿದರ ಕಾಯ್ಮನೆ – ನೀನೆಮ್ಮಯ ಮನೆಯಂಬೇ ||೨||

ದೇಗುಲಗಳೊ ಧರ್ಮದ ಬಾಗಿಲಗಳೊ? ಪುಣ್ಯಘಟಂ ತಟಿನೀತಟಂ!
ಬಸದಿಗಳೋ ಕನಸೇ ಕಲ್ಲಾದುವೋ? ನೆಲಬಿರಿದೆದ್ದರೆ ಗೊಮ್ಮಟಂ?
ನಿನ್ನ ಪುಲಕವೇ ಪಸುರಿದಂತೆ ಪಸರಿಸಿದೀ ಸಸ್ಯದ ಚೆಲುವೇಂ!
ಜೀವನಸಾಮವನಾಡುನ ಪಾಡುವ ಖಗಮೃಗಪತಂಗದೊಲನೇಂ ||೩||

ಹಿಂದು ಜೈನ ಮಸ್ಲೀಮ ಕೈಸ್ತ್ರರಾವೊಂದೇ ಬಾಂಧವರೆಮ್ಮಾ
ತಂದೆ ದೇವರೊಬ್ಬನೆ, ನೀನೊಬ್ಬಳೆ ನಮ್ಮೆಲ್ಲರ ತಾಯಮ್ಮಾ!
ಎಂದಿನವಳೊ ನೀನಿಂದಿನವರೆ ನಾವಾದೊಡೆಮ್ಮನಕ್ಕರೆಯಿಂ
ನಿನ್ನೆದೆ ತೊಟ್ಟಿಲೊಳಿಟ್ಟು ಸಾಕುತಿಹೆ, ಸರಸಿಯಂತೆ ತಾವರೆಯೆಂ ||೪||

ಧನ್ಯನೆನಿತೊ ನಾ ನಿನ್ನಯ ಬಸುರಿಂದುಸುರಿಸಲೀ ಹೂವನ್ನ!
ಕೆಸರೊಳುದುರಲೀಯದೆ, ನಿನ್ನಡಿಗರ್ಪಿಸಿಕೊಳು ಸೌಸವವನ್ನ!
ಬೇಡುವೆನವ್ವಾ, ಬೀಳ್ಕೊಡುವಂದೆನ್ನನೆತ್ತಿದಂಕದಿ ನಿನ್ನ,
‘ಮರಳಿ ಬಾರ, ಕಂದಾ, ನನ್ನುದರದಿ’ ಎಂದು ತಬ್ಬಿ ಹರಸೆನ್ನ! ||೫||
*****
೧ ಸಾತವಾಹನರು

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...