Home / ಕವನ / ಕವಿತೆ / ತೌಳವ ಮಾತೆ

ತೌಳವ ಮಾತೆ

ರಾಗ ಭೈರವೀ-ತ್ರಿತಾಲ
(‘ಪತಿತೋದ್ಧಾರಿಣಿ ಗಂಗೇ’ ಎಂಬ ಬಂಗಾಳೀ ಹಾಡಿನಂತೆ)

ಜಯ ಜಯ ತೌಳವ ತಾಯ ||ಪಲ್ಲ||
ಮಣಿವೆ ತಂದೆತಾಯಂದಿರ ತಾಯೇ,
ಭುವನದಿ ತ್ರಿದಿವಚ್ಛಾಯೇ ||ಅನು||
ಭಾರ್ಗವನಂದು ಬಿಸುಡೆ ಕೊಡಲಿಯ ನೀ ಕಡಲೊಡೆದೆಡೆಯಿಂ ಮೂಡಿ,

ಭಾರತಮಾತೆ ತೊಡೆಯೊಳೊಡಗೂಡಿಸೆ, ಸಹ್ಯವೀಣೆಯಂ ತೀಡಿ-
ದೆಸೆದೆಸೆ ರವಿಶಶಿ ಕಿರಣದ ಮಳೆಕುಳಿರಿನ ಮಿಸುಸೇಸೆಯ ಸೂಸೆ-
ನವನವ ರಿತುಗಾನವನವತರಿಸುವೆ, ಗಗನವನಧಿಯೋಲೈಸೆ ||೧||

ಸಾತಿಯಪುತರ ತವರ್ಮನೆ, 1ಸಾತರ ತೆಂಕಣ ನೆಲೆಮನೆಯ ಲೂಪರಾ
ಕೆಳಮನೆ, ಪಾಂಡ್ಯರ ಮೇಲ್ಮನೆ, ನೆರೆಯರಮನೆ ಕನ್ನಾಡಿನ ಭೂಪರಾ;
ಭೈರವ ಬಂಗರ ಚೌಟರಜಿಲ ಸಾವಂತರ ಮನೆಮನೆಯಿಂಬೇ,
ತುಳುವರ ತಾಯ್ಮನೆಯುಳಿದರ ಕಾಯ್ಮನೆ – ನೀನೆಮ್ಮಯ ಮನೆಯಂಬೇ ||೨||

ದೇಗುಲಗಳೊ ಧರ್ಮದ ಬಾಗಿಲಗಳೊ? ಪುಣ್ಯಘಟಂ ತಟಿನೀತಟಂ!
ಬಸದಿಗಳೋ ಕನಸೇ ಕಲ್ಲಾದುವೋ? ನೆಲಬಿರಿದೆದ್ದರೆ ಗೊಮ್ಮಟಂ?
ನಿನ್ನ ಪುಲಕವೇ ಪಸುರಿದಂತೆ ಪಸರಿಸಿದೀ ಸಸ್ಯದ ಚೆಲುವೇಂ!
ಜೀವನಸಾಮವನಾಡುನ ಪಾಡುವ ಖಗಮೃಗಪತಂಗದೊಲನೇಂ ||೩||

ಹಿಂದು ಜೈನ ಮಸ್ಲೀಮ ಕೈಸ್ತ್ರರಾವೊಂದೇ ಬಾಂಧವರೆಮ್ಮಾ
ತಂದೆ ದೇವರೊಬ್ಬನೆ, ನೀನೊಬ್ಬಳೆ ನಮ್ಮೆಲ್ಲರ ತಾಯಮ್ಮಾ!
ಎಂದಿನವಳೊ ನೀನಿಂದಿನವರೆ ನಾವಾದೊಡೆಮ್ಮನಕ್ಕರೆಯಿಂ
ನಿನ್ನೆದೆ ತೊಟ್ಟಿಲೊಳಿಟ್ಟು ಸಾಕುತಿಹೆ, ಸರಸಿಯಂತೆ ತಾವರೆಯೆಂ ||೪||

ಧನ್ಯನೆನಿತೊ ನಾ ನಿನ್ನಯ ಬಸುರಿಂದುಸುರಿಸಲೀ ಹೂವನ್ನ!
ಕೆಸರೊಳುದುರಲೀಯದೆ, ನಿನ್ನಡಿಗರ್ಪಿಸಿಕೊಳು ಸೌಸವವನ್ನ!
ಬೇಡುವೆನವ್ವಾ, ಬೀಳ್ಕೊಡುವಂದೆನ್ನನೆತ್ತಿದಂಕದಿ ನಿನ್ನ,
‘ಮರಳಿ ಬಾರ, ಕಂದಾ, ನನ್ನುದರದಿ’ ಎಂದು ತಬ್ಬಿ ಹರಸೆನ್ನ! ||೫||
*****
೧ ಸಾತವಾಹನರು

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...