Home / ಕವನ / ಕವಿತೆ / ಯುಗಾದಿಯ ನೆನಪು

ಯುಗಾದಿಯ ನೆನಪು

ನಿನ್ನೆ ಹೆಸರಳಿದು ನೀರಾದುದಾ ಪ್ರಭವಂ
ಜೀವನಪ್ಲವಮೆನ್ನ ಸಂಪ್ಲವಿಸಿ ನಿನ್ನ!
ಇಂದೆನ್ನನೀಚಿಸುವ ವೀಚಿಯೂ ವಿಭವಂ
ಸಾರ್ಥಮಕ್ಕೆಮ ವಿಯೋಗಿಸಿ ಭವದಿನೆನ್ನ ೪

ಆ ಯುಗಾದಿಯಲಿ ನೀನೆನ್ನ ಕಣ್ತಣಿಮೆ-
ಈ ಯುಗಾದಿಯಲಿ ನೀನೆಲ್ಲಿ? ನಾನೆಲ್ಲಿ?
ನನ್ನೆದೆಯಮಾಸೆಗಿನ್ನಶ್ರು ತರ್ಪಣಮೆ-
ಹಬ್ಬಮಿನ್ನೆನಗೆ ನಿನ್ನೊಡಗೂಡುವಲ್ಲಿ! ೮

ಕೊನೆಯ ತವರ್ಮನೆಗಕಟ! ನೀ ತೆರಳುವಂದು
ತಿಂಗಳಾರರ ಮುನ್ನಮುಟ್ಟ ಮಡಿಸೀರೆ
ಕಡೆಗಾಯ್ತೆ? ಇನ್ನುಡೆಯನೆಂತೀವೆನೆಂದು
ನೆನವ ನೂಲಂ ಮೀಸಲಿಡುವೆನಿದೊ ನೀರೆ! ೧೨

ಸರ್ವಮಂಗಲೆ! ಸರ್ವಶೃಂಗಾರವೆತ್ತು-
ಕೆಚ್ಚೆರಂಕದಿನೆನ್ನ ಹಚ್ಚಿ ಕುಂಕುಮಮಂ,
ನೆನವ ಬಾಗಿನವನೆನಗನುವಿಂದ ತೆತ್ತು,
ಮುಡಿದು ಮುಡಿಗೆನ್ನ ಸುರಿಕಂಬನಿಯ ಸುಮಮಂ- ೧೬

ಮದವಳಿಗೆ ಲಗ್ನವೇದಿಕೆಯಂತೆ, ಚಿತಿಯ
ಪೊಗುತಗ್ನಿಯಂ ಮನ್ಮನೋರಣಿಯಿನಾಂತು,
ನಮ್ಮೇಕ ಗಾರ್ಹಪತ್ಯವ್ರತವ ಸತಿಯ
ಧರ್ಮದಿಂದುದ್ಯಾಪಿಸಿದೆ ನೀ ಸಮಂತು ೨೦

ನಿನ್ನಯ ಚಿತಾಗ್ನಿಯಾಗಳಿನೆದೆಯೊಳೆನ್ನ
ಬೇಯೆ ಬಾಂಗಿನೆಯೆ ಬೈಗಿನ ಬೆಂಕಿಯಂತೆ
ಮೂಡಿಂದುವಂತೆ! ಕರೆಯಕ್ಕರೆಯ ಜೊನ್ನ
ದುಮ್ಮನದ ಗುಮ್ಮನೆರಕೆಯಿಳುಂಕಿಪಂತೆ. ೨೪

ಕಂತಿದಿಂ ಬಳಿಕ ನೀ ನಿನ್ನೊಸಗೆಯರಿಯೆಂ,
ನೀನಾದಡಂ ಬಲ್ಲೆಯೇನಳಲನೆನ್ನ?-
ನನೆನಲಿನಮಂ ನಿಟ್ಟಿಪಂತಿರುಳ ಮರೆಯಿಂ
ನೇಸರೇನಿರುಳ ನಲಿನಂ ನೇಸರನ್ನ? ೨೮

ಕುಂದೇನು ಮನದನ್ನೆ ನೊಂದಡಾನಿಲ್ಲಿ?
ಮಗು ಮುಡಿದ ತೊಟ್ಟಿಲೇನಾದಡೇನಂತೆ?
ನೀರ ಕೆರೆ ತಾರದಂತರಗಾಲದಲ್ಲಿ,
ನೀನಲ್ಲಿ ನೆಮ್ಮದಿಯಿನಿರೆ ಸಾಕು, ಕಾಂತೆ! ೩೨

ಪತಿಗೆ ಹೆಂಡತಿ ಸಾಲಗಾತಿ ತಾನಂತೆ,
ನಮ್ಮೊಳಂತಲ್ಲ, ನಾ ಸಾಲಿಗನೆ ನಿನ್ನ-
ಕಣ್ಣ ಕಾಣಿಕೆಯಂತೆ ನನ್ನಿರವನಾಂತೆ,
ಪಾಲಾಗಿ ನೀರನಿನಿವಾಲೆಸಗಿದೆನ್ನ ೩೬

ಇದ್ದೆ ಸೆಯಿನಿದ್ದೊರೆಗಳೆದ್ದು ಮುಂಬೆರೆಯೆ,
ಒಂದನಿನ್ನೊಂದು ಮರೆಸಂದು ಹರಿವಂತೆ,
ಬಲ್ಲೆನೆನ್ನಯ ಕಂಗಣಂಗಿ ನೀ ಸರಿಯೆ,
ಬೆರತಿನ್ನುಮಿರವನ್ನ ಹರಿವೆ ಮುನ್ನಂತೆ. ೪೦

ಕಡಲೆನಿತು ಕೆರಳ್ದೊಡಂ, ಕಡೆವುದೇಂ ಕರೆಯಂ?-
ಆಯುರವಧಿಯನೆನ್ನ ನನ್ನಳವೆ ಮೀರೆ?
ಕಾವೆನಾಚೆಗೆ ನಿನ್ನ ತೇರಿಸಿದ ತರಿಯಂ,
ಗೆಣೆವಕ್ಕಿ ಹಗಲಂತೆ ತನ್ನೆಣೆಯ ಸೇರೆ. ೪೪

ಎನಿತಿನ್ನುಮೆನ್ನ ಬಾಳ್ವೆಯ ಹುಳುಕು ವಾಲೆ
ಮಗಚುವುದೊ ನಾನರಿಯೆ- ಬರೆದವನೆ ಬಲ್ಲಂ!
ಇನ್ನುಮಳ್ತಿಯೆ ನನ್ನನಿಂತು ವಿಧಿಯಾಲೆ
ಹಿಳಿಯಲೇವಾಳ್ತೆ? ಕಳಲಿಂದಹುದೆ ಬೆಲ್ಲಂ? ೪೮

ತಾಳದು ವಿಕಾಳಿಸುವ ಕಾಳಿಮೆ! ಇದನ್ನ
ತಾಳದಕಟಾ ನಿನ್ನ ಬಾಳೆನೆನೆ, ಮನವಂ
ಸೇರುವೆಗೆ ಕೋರಿಸಿ ಚಕೋರಿಸುವೆನೆನ್ನ
ಪ್ರೇಮಪರಿಧಿಯ ಸುಧಾನಿಧಿಯೆ ನಿನ್ನೆನವಂ! ೫೨
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...