Home / ಕವನ / ಕವಿತೆ / ಯುಗಾದಿಯ ನೆನಪು

ಯುಗಾದಿಯ ನೆನಪು

ನಿನ್ನೆ ಹೆಸರಳಿದು ನೀರಾದುದಾ ಪ್ರಭವಂ
ಜೀವನಪ್ಲವಮೆನ್ನ ಸಂಪ್ಲವಿಸಿ ನಿನ್ನ!
ಇಂದೆನ್ನನೀಚಿಸುವ ವೀಚಿಯೂ ವಿಭವಂ
ಸಾರ್ಥಮಕ್ಕೆಮ ವಿಯೋಗಿಸಿ ಭವದಿನೆನ್ನ ೪

ಆ ಯುಗಾದಿಯಲಿ ನೀನೆನ್ನ ಕಣ್ತಣಿಮೆ-
ಈ ಯುಗಾದಿಯಲಿ ನೀನೆಲ್ಲಿ? ನಾನೆಲ್ಲಿ?
ನನ್ನೆದೆಯಮಾಸೆಗಿನ್ನಶ್ರು ತರ್ಪಣಮೆ-
ಹಬ್ಬಮಿನ್ನೆನಗೆ ನಿನ್ನೊಡಗೂಡುವಲ್ಲಿ! ೮

ಕೊನೆಯ ತವರ್ಮನೆಗಕಟ! ನೀ ತೆರಳುವಂದು
ತಿಂಗಳಾರರ ಮುನ್ನಮುಟ್ಟ ಮಡಿಸೀರೆ
ಕಡೆಗಾಯ್ತೆ? ಇನ್ನುಡೆಯನೆಂತೀವೆನೆಂದು
ನೆನವ ನೂಲಂ ಮೀಸಲಿಡುವೆನಿದೊ ನೀರೆ! ೧೨

ಸರ್ವಮಂಗಲೆ! ಸರ್ವಶೃಂಗಾರವೆತ್ತು-
ಕೆಚ್ಚೆರಂಕದಿನೆನ್ನ ಹಚ್ಚಿ ಕುಂಕುಮಮಂ,
ನೆನವ ಬಾಗಿನವನೆನಗನುವಿಂದ ತೆತ್ತು,
ಮುಡಿದು ಮುಡಿಗೆನ್ನ ಸುರಿಕಂಬನಿಯ ಸುಮಮಂ- ೧೬

ಮದವಳಿಗೆ ಲಗ್ನವೇದಿಕೆಯಂತೆ, ಚಿತಿಯ
ಪೊಗುತಗ್ನಿಯಂ ಮನ್ಮನೋರಣಿಯಿನಾಂತು,
ನಮ್ಮೇಕ ಗಾರ್ಹಪತ್ಯವ್ರತವ ಸತಿಯ
ಧರ್ಮದಿಂದುದ್ಯಾಪಿಸಿದೆ ನೀ ಸಮಂತು ೨೦

ನಿನ್ನಯ ಚಿತಾಗ್ನಿಯಾಗಳಿನೆದೆಯೊಳೆನ್ನ
ಬೇಯೆ ಬಾಂಗಿನೆಯೆ ಬೈಗಿನ ಬೆಂಕಿಯಂತೆ
ಮೂಡಿಂದುವಂತೆ! ಕರೆಯಕ್ಕರೆಯ ಜೊನ್ನ
ದುಮ್ಮನದ ಗುಮ್ಮನೆರಕೆಯಿಳುಂಕಿಪಂತೆ. ೨೪

ಕಂತಿದಿಂ ಬಳಿಕ ನೀ ನಿನ್ನೊಸಗೆಯರಿಯೆಂ,
ನೀನಾದಡಂ ಬಲ್ಲೆಯೇನಳಲನೆನ್ನ?-
ನನೆನಲಿನಮಂ ನಿಟ್ಟಿಪಂತಿರುಳ ಮರೆಯಿಂ
ನೇಸರೇನಿರುಳ ನಲಿನಂ ನೇಸರನ್ನ? ೨೮

ಕುಂದೇನು ಮನದನ್ನೆ ನೊಂದಡಾನಿಲ್ಲಿ?
ಮಗು ಮುಡಿದ ತೊಟ್ಟಿಲೇನಾದಡೇನಂತೆ?
ನೀರ ಕೆರೆ ತಾರದಂತರಗಾಲದಲ್ಲಿ,
ನೀನಲ್ಲಿ ನೆಮ್ಮದಿಯಿನಿರೆ ಸಾಕು, ಕಾಂತೆ! ೩೨

ಪತಿಗೆ ಹೆಂಡತಿ ಸಾಲಗಾತಿ ತಾನಂತೆ,
ನಮ್ಮೊಳಂತಲ್ಲ, ನಾ ಸಾಲಿಗನೆ ನಿನ್ನ-
ಕಣ್ಣ ಕಾಣಿಕೆಯಂತೆ ನನ್ನಿರವನಾಂತೆ,
ಪಾಲಾಗಿ ನೀರನಿನಿವಾಲೆಸಗಿದೆನ್ನ ೩೬

ಇದ್ದೆ ಸೆಯಿನಿದ್ದೊರೆಗಳೆದ್ದು ಮುಂಬೆರೆಯೆ,
ಒಂದನಿನ್ನೊಂದು ಮರೆಸಂದು ಹರಿವಂತೆ,
ಬಲ್ಲೆನೆನ್ನಯ ಕಂಗಣಂಗಿ ನೀ ಸರಿಯೆ,
ಬೆರತಿನ್ನುಮಿರವನ್ನ ಹರಿವೆ ಮುನ್ನಂತೆ. ೪೦

ಕಡಲೆನಿತು ಕೆರಳ್ದೊಡಂ, ಕಡೆವುದೇಂ ಕರೆಯಂ?-
ಆಯುರವಧಿಯನೆನ್ನ ನನ್ನಳವೆ ಮೀರೆ?
ಕಾವೆನಾಚೆಗೆ ನಿನ್ನ ತೇರಿಸಿದ ತರಿಯಂ,
ಗೆಣೆವಕ್ಕಿ ಹಗಲಂತೆ ತನ್ನೆಣೆಯ ಸೇರೆ. ೪೪

ಎನಿತಿನ್ನುಮೆನ್ನ ಬಾಳ್ವೆಯ ಹುಳುಕು ವಾಲೆ
ಮಗಚುವುದೊ ನಾನರಿಯೆ- ಬರೆದವನೆ ಬಲ್ಲಂ!
ಇನ್ನುಮಳ್ತಿಯೆ ನನ್ನನಿಂತು ವಿಧಿಯಾಲೆ
ಹಿಳಿಯಲೇವಾಳ್ತೆ? ಕಳಲಿಂದಹುದೆ ಬೆಲ್ಲಂ? ೪೮

ತಾಳದು ವಿಕಾಳಿಸುವ ಕಾಳಿಮೆ! ಇದನ್ನ
ತಾಳದಕಟಾ ನಿನ್ನ ಬಾಳೆನೆನೆ, ಮನವಂ
ಸೇರುವೆಗೆ ಕೋರಿಸಿ ಚಕೋರಿಸುವೆನೆನ್ನ
ಪ್ರೇಮಪರಿಧಿಯ ಸುಧಾನಿಧಿಯೆ ನಿನ್ನೆನವಂ! ೫೨
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಎಂ ಎನ್ ಎಸ್ ರಾವ್