Home / ಕವನ / ಕವಿತೆ / ಪಂಢರಪುರದಲ್ಲಿ

ಪಂಢರಪುರದಲ್ಲಿ

ರಾಗ ಯಮುನಾಕಲ್ಯಾಣಿ-ತಾಳ ಧುಮಾಳಿ

ಯಾವ ಭಾಗ್ಯದಿಂದಿಲ್ಲಿಗೆ ಬಂದೆ?
ನಿನ್ನ ಕಂಡು ಧನ್ಯನಾದೆ ತಂದೆ!
ಇನ್ನಾದಡಮೆನಿಸೆನ್ನೆದೆಯಿಂದೆ-
ಜಯ ಜಯ ಪಂಢರಿನಾಥ ವಿಠೋಬಾ! ||೧||

ತುಕಾರಾಮ ನಾಮದೇವರಿಲ್ಲಿ
ಕುಣಿದ ರಂಗಸಿಲೆಯಿಂ ೧ಸೆಲೆವಲ್ಲಿ
ನಿನ್ನ ನಾಮಮೆದೆಯೊತ್ತುವೆನಲ್ಲಿ-
ಜಯ ಜಯ ಪಂಢರಿನಾಥ ವಿಠೋಬಾ! ||೨||

ನಡುವಲಿ ಕೆಯ್ಮಡಗುತ ನಿಡುನಿಂತೆ
ಕೃತಕೃತ್ಯನೊಲೆನ್ನ ಕಾವ ಮುಂತೆ
ಮುಗಿವುದೆಂತು ನಿನ್ನ ಕೆಲಸದಂತೆ?
ಜಯ ಜಯ ಪಂಢರಿನಾಥ ವಿಠೋಬಾ! ||೩||

೨ಬಬ್ಬುಳಿಯ ಮುಳ್ಳ ಮೆಳೆಯಲಿ ನಿಲ್ಲೆ,
ಏಕೆ ವಿಷಯವಿಷಮ ಮನಮನೊಲ್ಲೆ?
ನೀತಿಯಿದೇಂ, ದೇವ, ನೀನೆ ಬಲ್ಲೆ!
ಜಯ ಜಯ ಪಂಢರಿನಾಥ ವಿಠೋಬಾ ||೪||

ಸಕೂಬಾಯಿಯೊಡಬೀಸಿದೆ ಕಲ್ಲಂ,
ಗೋಮಾಯಿಯ ೩ಕಡಸಲಾಂತೆ ಜಲ್ಲಂ-
ನನ್ನ ಕಡೆಗೆ ಕಣ್ಣೆತ್ತಿದುದಿಲ್ಲಂ!
ಜಯ ಜಯ ಪಂಢರಿನಾಥ ವಿಠೋಬಾ ||೫||

೪ಹಳಸಿರದೆ ೫ಅಂದಿನಿಟ್ಟಿಗೆ ನಿನ್ನ?
ನೋಡ ಜೀಯ ತಂದಿಹೆ ಹೊಸತನ್ನ-
ಮೆಟ್ಟಿ ನಿಲ್ಲು ನಿಷ್ಠುರ ಮನಮೆನ್ನ,
ಜಯ ಜಯ ಪಂಢರಿನಾಥ ವಿಠೋಬಾ! ||೬||

ಪುಣ್ಯಸಲಿಲೆ ತಾಯೆ ಚಂದ್ರಭಾಗೆ,
ತೊಳಸೆನ್ನ ಮನದ ಶಂಕೆಯ ನೀಗೆ,
ಗುಳುಗುಳಿಸೊಡೆಯನ ನೆನವೆದೆ ಬೀಗೆ-
ಜಯ ಜಯ ಪಂಢರಿನಾಥ ವಿಠೋಬಾ! ||೭||

ಪೊರೆಯ! ತೊರೆಯ! ಇನ್ನೆರೆಯ ನೀನೆನ್ನ-
ಧನ್ಯನಾದೆ ಕಂಡೆನೆಂದೆ ನಿನ್ನ!
ನೀ ಮರೆವೊಡಮಿನ್ನಿದೆ ಮರೆಯೆನ್ನ-
ಜಯ ಜಯ ಪಂಢರಿನಾಥ ವಿಠೋಬಾ! ||೮||

ಗೆಯ್ದ ಪಾಪಮನಿತುಂ ನಿನಗರ್ಪಣ,
ಗೆಯ್ಯದ ಪುಣ್ಯಮದುಂ ನಿನಗರ್ಪಣ,
ಕಳೆದುಳಿದ ಜೀವಿತಂ ನಿನಗರ್ಪಣ,
ಜಯ ಜಯ ಪಂಢರಿನಾಥ ವಿಠೋಬಾ! ||೯||

ನಿನ್ನನೊಡೆಯ ಮತ್ತೇನನು ಬೇಡೆ-
ಬೇಡಲೇಕೆ ನೀ ಬೇಡದೆ ನೀಡೆ?
ಸಾಕಂತ್ಯವರಂ ನಾಲಗೆಯಾಡೆ –
ಜಯ ಜಯ ಪಂಢರಿನಾಥ ವಿಠೋಬಾ! ||೧೦||
*****
೧ ಮರುಧ್ವನಿಸು
೨ ಜಾಲೀಗಿಡ
೩ ಕಡವನ್ನು ದಾಟಿಸು
೪ ಹಳತಾಗು
೫ ದೇವರು ತನ್ನ ಭಕ್ತನಾದ ಪುಂಡರೀಕನ ಮನೆಗೆ ಬಂದಾಗ, ತಾಯಿತಂದೆಯವರ ಸೇವೆಯಲ್ಲಿ ನಿರತನಾಗಿದ್ದ ಆತನು ತಾನದನ್ನು ಮುಗಿಸಿ ಬರುವ ವರೆಗೆ ಇದರಲ್ಲಿರು ಎಂದು ಕೊಟ್ಟ ಇಟ್ಟಿಗೆ.

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...