Home / ಕವನ / ಕವಿತೆ / ಪಂಢರಪುರದಲ್ಲಿ

ಪಂಢರಪುರದಲ್ಲಿ

ರಾಗ ಯಮುನಾಕಲ್ಯಾಣಿ-ತಾಳ ಧುಮಾಳಿ

ಯಾವ ಭಾಗ್ಯದಿಂದಿಲ್ಲಿಗೆ ಬಂದೆ?
ನಿನ್ನ ಕಂಡು ಧನ್ಯನಾದೆ ತಂದೆ!
ಇನ್ನಾದಡಮೆನಿಸೆನ್ನೆದೆಯಿಂದೆ-
ಜಯ ಜಯ ಪಂಢರಿನಾಥ ವಿಠೋಬಾ! ||೧||

ತುಕಾರಾಮ ನಾಮದೇವರಿಲ್ಲಿ
ಕುಣಿದ ರಂಗಸಿಲೆಯಿಂ ೧ಸೆಲೆವಲ್ಲಿ
ನಿನ್ನ ನಾಮಮೆದೆಯೊತ್ತುವೆನಲ್ಲಿ-
ಜಯ ಜಯ ಪಂಢರಿನಾಥ ವಿಠೋಬಾ! ||೨||

ನಡುವಲಿ ಕೆಯ್ಮಡಗುತ ನಿಡುನಿಂತೆ
ಕೃತಕೃತ್ಯನೊಲೆನ್ನ ಕಾವ ಮುಂತೆ
ಮುಗಿವುದೆಂತು ನಿನ್ನ ಕೆಲಸದಂತೆ?
ಜಯ ಜಯ ಪಂಢರಿನಾಥ ವಿಠೋಬಾ! ||೩||

೨ಬಬ್ಬುಳಿಯ ಮುಳ್ಳ ಮೆಳೆಯಲಿ ನಿಲ್ಲೆ,
ಏಕೆ ವಿಷಯವಿಷಮ ಮನಮನೊಲ್ಲೆ?
ನೀತಿಯಿದೇಂ, ದೇವ, ನೀನೆ ಬಲ್ಲೆ!
ಜಯ ಜಯ ಪಂಢರಿನಾಥ ವಿಠೋಬಾ ||೪||

ಸಕೂಬಾಯಿಯೊಡಬೀಸಿದೆ ಕಲ್ಲಂ,
ಗೋಮಾಯಿಯ ೩ಕಡಸಲಾಂತೆ ಜಲ್ಲಂ-
ನನ್ನ ಕಡೆಗೆ ಕಣ್ಣೆತ್ತಿದುದಿಲ್ಲಂ!
ಜಯ ಜಯ ಪಂಢರಿನಾಥ ವಿಠೋಬಾ ||೫||

೪ಹಳಸಿರದೆ ೫ಅಂದಿನಿಟ್ಟಿಗೆ ನಿನ್ನ?
ನೋಡ ಜೀಯ ತಂದಿಹೆ ಹೊಸತನ್ನ-
ಮೆಟ್ಟಿ ನಿಲ್ಲು ನಿಷ್ಠುರ ಮನಮೆನ್ನ,
ಜಯ ಜಯ ಪಂಢರಿನಾಥ ವಿಠೋಬಾ! ||೬||

ಪುಣ್ಯಸಲಿಲೆ ತಾಯೆ ಚಂದ್ರಭಾಗೆ,
ತೊಳಸೆನ್ನ ಮನದ ಶಂಕೆಯ ನೀಗೆ,
ಗುಳುಗುಳಿಸೊಡೆಯನ ನೆನವೆದೆ ಬೀಗೆ-
ಜಯ ಜಯ ಪಂಢರಿನಾಥ ವಿಠೋಬಾ! ||೭||

ಪೊರೆಯ! ತೊರೆಯ! ಇನ್ನೆರೆಯ ನೀನೆನ್ನ-
ಧನ್ಯನಾದೆ ಕಂಡೆನೆಂದೆ ನಿನ್ನ!
ನೀ ಮರೆವೊಡಮಿನ್ನಿದೆ ಮರೆಯೆನ್ನ-
ಜಯ ಜಯ ಪಂಢರಿನಾಥ ವಿಠೋಬಾ! ||೮||

ಗೆಯ್ದ ಪಾಪಮನಿತುಂ ನಿನಗರ್ಪಣ,
ಗೆಯ್ಯದ ಪುಣ್ಯಮದುಂ ನಿನಗರ್ಪಣ,
ಕಳೆದುಳಿದ ಜೀವಿತಂ ನಿನಗರ್ಪಣ,
ಜಯ ಜಯ ಪಂಢರಿನಾಥ ವಿಠೋಬಾ! ||೯||

ನಿನ್ನನೊಡೆಯ ಮತ್ತೇನನು ಬೇಡೆ-
ಬೇಡಲೇಕೆ ನೀ ಬೇಡದೆ ನೀಡೆ?
ಸಾಕಂತ್ಯವರಂ ನಾಲಗೆಯಾಡೆ –
ಜಯ ಜಯ ಪಂಢರಿನಾಥ ವಿಠೋಬಾ! ||೧೦||
*****
೧ ಮರುಧ್ವನಿಸು
೨ ಜಾಲೀಗಿಡ
೩ ಕಡವನ್ನು ದಾಟಿಸು
೪ ಹಳತಾಗು
೫ ದೇವರು ತನ್ನ ಭಕ್ತನಾದ ಪುಂಡರೀಕನ ಮನೆಗೆ ಬಂದಾಗ, ತಾಯಿತಂದೆಯವರ ಸೇವೆಯಲ್ಲಿ ನಿರತನಾಗಿದ್ದ ಆತನು ತಾನದನ್ನು ಮುಗಿಸಿ ಬರುವ ವರೆಗೆ ಇದರಲ್ಲಿರು ಎಂದು ಕೊಟ್ಟ ಇಟ್ಟಿಗೆ.

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...