Home / ಕವನ / ಕವಿತೆ / ಪಂಢರಪುರದಲ್ಲಿ

ಪಂಢರಪುರದಲ್ಲಿ

ರಾಗ ಯಮುನಾಕಲ್ಯಾಣಿ-ತಾಳ ಧುಮಾಳಿ

ಯಾವ ಭಾಗ್ಯದಿಂದಿಲ್ಲಿಗೆ ಬಂದೆ?
ನಿನ್ನ ಕಂಡು ಧನ್ಯನಾದೆ ತಂದೆ!
ಇನ್ನಾದಡಮೆನಿಸೆನ್ನೆದೆಯಿಂದೆ-
ಜಯ ಜಯ ಪಂಢರಿನಾಥ ವಿಠೋಬಾ! ||೧||

ತುಕಾರಾಮ ನಾಮದೇವರಿಲ್ಲಿ
ಕುಣಿದ ರಂಗಸಿಲೆಯಿಂ ೧ಸೆಲೆವಲ್ಲಿ
ನಿನ್ನ ನಾಮಮೆದೆಯೊತ್ತುವೆನಲ್ಲಿ-
ಜಯ ಜಯ ಪಂಢರಿನಾಥ ವಿಠೋಬಾ! ||೨||

ನಡುವಲಿ ಕೆಯ್ಮಡಗುತ ನಿಡುನಿಂತೆ
ಕೃತಕೃತ್ಯನೊಲೆನ್ನ ಕಾವ ಮುಂತೆ
ಮುಗಿವುದೆಂತು ನಿನ್ನ ಕೆಲಸದಂತೆ?
ಜಯ ಜಯ ಪಂಢರಿನಾಥ ವಿಠೋಬಾ! ||೩||

೨ಬಬ್ಬುಳಿಯ ಮುಳ್ಳ ಮೆಳೆಯಲಿ ನಿಲ್ಲೆ,
ಏಕೆ ವಿಷಯವಿಷಮ ಮನಮನೊಲ್ಲೆ?
ನೀತಿಯಿದೇಂ, ದೇವ, ನೀನೆ ಬಲ್ಲೆ!
ಜಯ ಜಯ ಪಂಢರಿನಾಥ ವಿಠೋಬಾ ||೪||

ಸಕೂಬಾಯಿಯೊಡಬೀಸಿದೆ ಕಲ್ಲಂ,
ಗೋಮಾಯಿಯ ೩ಕಡಸಲಾಂತೆ ಜಲ್ಲಂ-
ನನ್ನ ಕಡೆಗೆ ಕಣ್ಣೆತ್ತಿದುದಿಲ್ಲಂ!
ಜಯ ಜಯ ಪಂಢರಿನಾಥ ವಿಠೋಬಾ ||೫||

೪ಹಳಸಿರದೆ ೫ಅಂದಿನಿಟ್ಟಿಗೆ ನಿನ್ನ?
ನೋಡ ಜೀಯ ತಂದಿಹೆ ಹೊಸತನ್ನ-
ಮೆಟ್ಟಿ ನಿಲ್ಲು ನಿಷ್ಠುರ ಮನಮೆನ್ನ,
ಜಯ ಜಯ ಪಂಢರಿನಾಥ ವಿಠೋಬಾ! ||೬||

ಪುಣ್ಯಸಲಿಲೆ ತಾಯೆ ಚಂದ್ರಭಾಗೆ,
ತೊಳಸೆನ್ನ ಮನದ ಶಂಕೆಯ ನೀಗೆ,
ಗುಳುಗುಳಿಸೊಡೆಯನ ನೆನವೆದೆ ಬೀಗೆ-
ಜಯ ಜಯ ಪಂಢರಿನಾಥ ವಿಠೋಬಾ! ||೭||

ಪೊರೆಯ! ತೊರೆಯ! ಇನ್ನೆರೆಯ ನೀನೆನ್ನ-
ಧನ್ಯನಾದೆ ಕಂಡೆನೆಂದೆ ನಿನ್ನ!
ನೀ ಮರೆವೊಡಮಿನ್ನಿದೆ ಮರೆಯೆನ್ನ-
ಜಯ ಜಯ ಪಂಢರಿನಾಥ ವಿಠೋಬಾ! ||೮||

ಗೆಯ್ದ ಪಾಪಮನಿತುಂ ನಿನಗರ್ಪಣ,
ಗೆಯ್ಯದ ಪುಣ್ಯಮದುಂ ನಿನಗರ್ಪಣ,
ಕಳೆದುಳಿದ ಜೀವಿತಂ ನಿನಗರ್ಪಣ,
ಜಯ ಜಯ ಪಂಢರಿನಾಥ ವಿಠೋಬಾ! ||೯||

ನಿನ್ನನೊಡೆಯ ಮತ್ತೇನನು ಬೇಡೆ-
ಬೇಡಲೇಕೆ ನೀ ಬೇಡದೆ ನೀಡೆ?
ಸಾಕಂತ್ಯವರಂ ನಾಲಗೆಯಾಡೆ –
ಜಯ ಜಯ ಪಂಢರಿನಾಥ ವಿಠೋಬಾ! ||೧೦||
*****
೧ ಮರುಧ್ವನಿಸು
೨ ಜಾಲೀಗಿಡ
೩ ಕಡವನ್ನು ದಾಟಿಸು
೪ ಹಳತಾಗು
೫ ದೇವರು ತನ್ನ ಭಕ್ತನಾದ ಪುಂಡರೀಕನ ಮನೆಗೆ ಬಂದಾಗ, ತಾಯಿತಂದೆಯವರ ಸೇವೆಯಲ್ಲಿ ನಿರತನಾಗಿದ್ದ ಆತನು ತಾನದನ್ನು ಮುಗಿಸಿ ಬರುವ ವರೆಗೆ ಇದರಲ್ಲಿರು ಎಂದು ಕೊಟ್ಟ ಇಟ್ಟಿಗೆ.

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...