Home / ಕವನ / ಕವಿತೆ / ಪಂಢರಪುರದಲ್ಲಿ

ಪಂಢರಪುರದಲ್ಲಿ

ರಾಗ ಯಮುನಾಕಲ್ಯಾಣಿ-ತಾಳ ಧುಮಾಳಿ

ಯಾವ ಭಾಗ್ಯದಿಂದಿಲ್ಲಿಗೆ ಬಂದೆ?
ನಿನ್ನ ಕಂಡು ಧನ್ಯನಾದೆ ತಂದೆ!
ಇನ್ನಾದಡಮೆನಿಸೆನ್ನೆದೆಯಿಂದೆ-
ಜಯ ಜಯ ಪಂಢರಿನಾಥ ವಿಠೋಬಾ! ||೧||

ತುಕಾರಾಮ ನಾಮದೇವರಿಲ್ಲಿ
ಕುಣಿದ ರಂಗಸಿಲೆಯಿಂ ೧ಸೆಲೆವಲ್ಲಿ
ನಿನ್ನ ನಾಮಮೆದೆಯೊತ್ತುವೆನಲ್ಲಿ-
ಜಯ ಜಯ ಪಂಢರಿನಾಥ ವಿಠೋಬಾ! ||೨||

ನಡುವಲಿ ಕೆಯ್ಮಡಗುತ ನಿಡುನಿಂತೆ
ಕೃತಕೃತ್ಯನೊಲೆನ್ನ ಕಾವ ಮುಂತೆ
ಮುಗಿವುದೆಂತು ನಿನ್ನ ಕೆಲಸದಂತೆ?
ಜಯ ಜಯ ಪಂಢರಿನಾಥ ವಿಠೋಬಾ! ||೩||

೨ಬಬ್ಬುಳಿಯ ಮುಳ್ಳ ಮೆಳೆಯಲಿ ನಿಲ್ಲೆ,
ಏಕೆ ವಿಷಯವಿಷಮ ಮನಮನೊಲ್ಲೆ?
ನೀತಿಯಿದೇಂ, ದೇವ, ನೀನೆ ಬಲ್ಲೆ!
ಜಯ ಜಯ ಪಂಢರಿನಾಥ ವಿಠೋಬಾ ||೪||

ಸಕೂಬಾಯಿಯೊಡಬೀಸಿದೆ ಕಲ್ಲಂ,
ಗೋಮಾಯಿಯ ೩ಕಡಸಲಾಂತೆ ಜಲ್ಲಂ-
ನನ್ನ ಕಡೆಗೆ ಕಣ್ಣೆತ್ತಿದುದಿಲ್ಲಂ!
ಜಯ ಜಯ ಪಂಢರಿನಾಥ ವಿಠೋಬಾ ||೫||

೪ಹಳಸಿರದೆ ೫ಅಂದಿನಿಟ್ಟಿಗೆ ನಿನ್ನ?
ನೋಡ ಜೀಯ ತಂದಿಹೆ ಹೊಸತನ್ನ-
ಮೆಟ್ಟಿ ನಿಲ್ಲು ನಿಷ್ಠುರ ಮನಮೆನ್ನ,
ಜಯ ಜಯ ಪಂಢರಿನಾಥ ವಿಠೋಬಾ! ||೬||

ಪುಣ್ಯಸಲಿಲೆ ತಾಯೆ ಚಂದ್ರಭಾಗೆ,
ತೊಳಸೆನ್ನ ಮನದ ಶಂಕೆಯ ನೀಗೆ,
ಗುಳುಗುಳಿಸೊಡೆಯನ ನೆನವೆದೆ ಬೀಗೆ-
ಜಯ ಜಯ ಪಂಢರಿನಾಥ ವಿಠೋಬಾ! ||೭||

ಪೊರೆಯ! ತೊರೆಯ! ಇನ್ನೆರೆಯ ನೀನೆನ್ನ-
ಧನ್ಯನಾದೆ ಕಂಡೆನೆಂದೆ ನಿನ್ನ!
ನೀ ಮರೆವೊಡಮಿನ್ನಿದೆ ಮರೆಯೆನ್ನ-
ಜಯ ಜಯ ಪಂಢರಿನಾಥ ವಿಠೋಬಾ! ||೮||

ಗೆಯ್ದ ಪಾಪಮನಿತುಂ ನಿನಗರ್ಪಣ,
ಗೆಯ್ಯದ ಪುಣ್ಯಮದುಂ ನಿನಗರ್ಪಣ,
ಕಳೆದುಳಿದ ಜೀವಿತಂ ನಿನಗರ್ಪಣ,
ಜಯ ಜಯ ಪಂಢರಿನಾಥ ವಿಠೋಬಾ! ||೯||

ನಿನ್ನನೊಡೆಯ ಮತ್ತೇನನು ಬೇಡೆ-
ಬೇಡಲೇಕೆ ನೀ ಬೇಡದೆ ನೀಡೆ?
ಸಾಕಂತ್ಯವರಂ ನಾಲಗೆಯಾಡೆ –
ಜಯ ಜಯ ಪಂಢರಿನಾಥ ವಿಠೋಬಾ! ||೧೦||
*****
೧ ಮರುಧ್ವನಿಸು
೨ ಜಾಲೀಗಿಡ
೩ ಕಡವನ್ನು ದಾಟಿಸು
೪ ಹಳತಾಗು
೫ ದೇವರು ತನ್ನ ಭಕ್ತನಾದ ಪುಂಡರೀಕನ ಮನೆಗೆ ಬಂದಾಗ, ತಾಯಿತಂದೆಯವರ ಸೇವೆಯಲ್ಲಿ ನಿರತನಾಗಿದ್ದ ಆತನು ತಾನದನ್ನು ಮುಗಿಸಿ ಬರುವ ವರೆಗೆ ಇದರಲ್ಲಿರು ಎಂದು ಕೊಟ್ಟ ಇಟ್ಟಿಗೆ.

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಎಂ ಎನ್ ಎಸ್ ರಾವ್