Home / ಕವನ / ಕವಿತೆ / ಕನ್ನಡಿಗರ ತಾಯಿ

ಕನ್ನಡಿಗರ ತಾಯಿ

ತಾಯೆ ಬಾರ, ಮೊಗವ ತೋರ, ಕನ್ನಡಿಗರ ಮಾತೆಯೆ!
ಹರಸು ತಾಯೆ, ಸುತರ ಕಾಯೆ, ನಮ್ಮ ಜನ್ಮದಾತೆಯೆ!
ನಮ್ಮ ತಪ್ಪನೆನಿತೊ ತಾಳ್ವೆ,
ಅಕ್ಕರೆಯಿಂದೆಮ್ಮನಾಳ್ವೆ;
ನೀನೆ ಕಣಾ ನಮ್ಮ ಬಾಳ್ವೆ,
ನಿನ್ನ ಮರೆಯಲನೆಮ್ಮೆವು-
ತನು ಕನ್ನಡ, ಮನ ಕನ್ನಡ, ನುಡಿ ಕನ್ನಡವೆಮ್ಮವು. ೭

ಹಣ್ಣನೀವ ಕಾಯನೀವ ಪರಿಪರಿಯ ಮರಂಗಳೊ,
ಪತ್ರಮೀವ ಪುಷ್ಪಮೀವ ಲತೆಯ ತರತರಂಗಳೊ,
ತೆನೆಯ ಕೆನೆಯ ಗಾಳಿಯೊ,
ಖಗಮೃಗೋರಗಾಳಿಯೊ,
ನದಿನಗರನಗಾಳಿಯೊ!
ಇಲ್ಲಿಲ್ಲದುದುಳಿದುದೆ?
ಜೇನು ಸುರಿವ ಹಾಲು ಹರಿವ ದಿವಂ ಭೂಮಿಗಿಳಿದುದೆ? ೧೪

ಬುಗರಿಯೀಯೆ ಶಬರಿ ಕಾಯೆ ರಾಮನಿಲ್ಲಿ ಬಂದನೆ?
ಕನ್ನಡ ದಳ ಕೂಡಿಸಿ ಖಳ ದಶಾಸ್ಯನಂ ಕೊಂದನೆ?
೧ಪಾಂಡವರಜ್ಞಾತಮಿದ್ದ,
ವಲಲಂ ಕೀಚಕನ ಗೆದ್ದ,
೨ಕುರುಕುಲ ಮುಂಗದನಮೆದ್ದ
ನಾಡು ನೋಡಿದಲ್ಲವೇ?
ನಂದನಂದನನಿಲ್ಲಿಂದ ಸಂದಿಗಯ್ದನಲ್ಲವೇ? ೨೧

ಶಕವಿಜೇತನಮರ ೩ಶಾತವಾಹನಾಖ್ಯನೀ ಶಕಂ
ನಿನ್ನೊಳಂದು ತೊಡಗಿ ಸಂದುದರ್ಧ ಭರತದೇಶಕಂ!
ಚಳುಕ್ಯ ರಾಷ್ಟ್ರಕೂಟರೆಲ್ಲಿ,
ಗಂಗರಾ ಕದಂಬರೆಲ್ಲಿ,
ಹೊಯ್ಸಳ ಕಳಚುರ್ಯರೆಲ್ಲಿ,
ವಿಜಯನಗರ ಭೂಪರು
ಆಳ್ದರಿಲ್ಲಿಯಲ್ಲದೆಲ್ಲಿ ತಾಯೆ ಮೇಣಲೂಪರು? ೨೮

ಜೈನರಾದ ಪೂಜ್ಯಪಾದ ಹೊಂಡಕುಂದ ವರ್ಯರ,
ಮದ್ವಯತಿಯೆ ಬಸವಪತಿಯೆ ಮುಖ್ಯ ಮತಾಚಾರ್ಯರ,
೪ಶರ್ವ ಪಂಪ ರನ್ನರ,
ಲಕ್ಷ್ಮೀಪತಿ ಜನ್ನರ,
ಷಡಕರಿ ಮುದಣ್ಣರ,
ಪುರಂದರ ವರೇಣ್ಯರ,
ತಾಯೆ, ನಿನ್ನ ಬಸಿರೆ ಹೊನ್ನ ಗನಿ ವಿದ್ಯಾರಣ್ಯರ! ೩೫

ಹಳೆಯ ಬೀಡ ೫ಬೇಲನಾಡ ಮಾಡಮೆನಿತೊ ಸುಂದರಂ!
೬ಬಿಳಿಯ ಕೊಳದ ಕಾರಕಳದ ೭ನಿಡುಕರೆನಿತೊ ಬಂಧುರಂ!
ಇಲ್ಲಿಲ್ಲದ ಶಿಲ್ಪಮಿಲ್ಲ;
ನಿನ್ನ ಕಲ್ಲೆ ನುಡಿವುದಲ್ಲ!
ಹಿಂಗತೆಯಿನಿವಾಲ ಸೊಲ್ಲ
ನೆಮ್ಮ ತೃಷೆಗೆ ದಕ್ಕಿಸು-
ಹೊಸತು ಕಿನ್ನರಿಯಲಿ ನಿನ್ನ ಹಳೆಯ ಹಾಡನುಕ್ಕಿಸು! ೪೨

ಆರ್ಯರಿಲ್ಲಿ ಬಾರದಲ್ಲಿ ಬಾಸೆ ಎಲ್ಲಿ ಸಕ್ಕದಂ?
ನಿನ್ನ ನುಡಿಯಿನಚ್ಚುಪಡಿಯನಾಂತರೆನಿತೊ ತಕ್ಕುದಂ!
ಎನಿತೊ ಹಳೆಯ ಕಾಲದಿಂದ
ಬರ್ದಿಲಮೀ ಬಾಸೆಯಿಂದ
ಕಾಲನ ಮೂದಲಿಸಿ ನಿಂದ
ನಿನಗೆ ಮರವೆ ಹೊದೆವುದೆ?
ನಿನ್ನ ನುಡಿಗೆ ನಿನ್ನ ನಡೆಗೆ ಮುದುಪುಮೆಂದುಮೊದವುದೆ? ೪೯

ತನ್ನ ಮರೆಯ ಕಂಪನರಿಯದದನೆ ಹೊರಗೆ ಹುಡುಕುವ
ಮೃಗದ ಸೇಡು ನಮ್ಮ ಪಾಡು ಪರರ ನುಡಿಗೆ ಮಿಡುಕುವ!
ಕನ್ನಡ ಕಸ್ತೂರಿಯನ್ನ
ಹೊಸತುಸಿರಿಂ ತೀಡದನ್ನ
ಸುರಭಿ ಎಲ್ಲಿ? ನೀನದನ್ನ
ನವಶಕ್ತಿಯಿನೆಬ್ಬಿಸು-
ಹೊಸ ಸುಗಂದದೊಸಗೆಯಿಂದ ಜಗದಿ ಹೆಸರ ಹಬ್ಬಿಸು! ೫೬

ನಿನ್ನ ಪಡೆಯ ಕತೆಯ ಕಡೆಯ ನುಡಿಯೆ ತಾಳಿಕೋಟೆಯು?
ಕಡಲಿನೊರತೆಗೊಳವೆ ಕೊರತೆ? ಬತ್ತದು ನಿನ್ನೂಟೆಯು!
ಸೋಲ ಗೆಲ್ಲವಾರಿಗಿಲ್ಲ?
ಸೋತು ನೀನೆ ಗೆದ್ದೆಯಲ್ಲ?
ನಿನ್ನನಳಿವು ತಟ್ಟಲೊಲ್ಲ!-
ತಾಳಿಕೋಟೆ ಸಾಸಿರಂ
ಬಾಹುಬಲದಿ ಮುನೋಬಲದಿ ತಾಯೆ ಗೆಲುನೆ ಭಾಸುರಂ! ೬೩

ಕುಗ್ಗದಂತೆ ಹಿಗ್ಗಿಪಂತೆ ನಿನ್ನ ಹೆಸರ ಟೆಕ್ಕೆಯಂ,
ನೀಗದಂತೆ ಸಾಗಿಪಂತೆ ನಿನ್ನ ನುಡಿಯ ಢಕ್ಕೆಯಂ,
ನಮ್ಮೆದೆಯಂ ತಾಯೆ ಬಲಿಸು,
ಎಲ್ಲರ ಬಾಯಲ್ಲಿ ನೆಲಸು,
ನಮ್ಮ ಮನಮನೊಂದೆ ಕಲಸು!
ಇದನೊಂದನೆ ಕೋರುವೆ-
ನಿನ್ನ ಮೂರ್ತಿ ಜಗತ್ಕೀರ್ತಿ ಎಂದಿಗೆಮಗೆ ತೋರುವೆ? ೭೦
*****
೧ ಧಾರವಾಡ ಜಿಲ್ಲೆಯ ‘ಹಾನಗಲ್ಲು’ ವಿರಾಟನ ರಾಜಧಾನಿ ಎಂದು ಪ್ರಖ್ಯಾತವಿದೆ.
೨ ಗೋಗ್ರಹಣದ ಯುದ್ಧ
೩ ಶಾಲಿವಾಹನ
೪ ಶರ್ವನೆಂದು ನೃಪತುಂಗನ ಹೆಸರು.
೫ ಬೇಲೂರು
೬ ಶ್ರವಣಬೆಳ್ಗೊಳ
೭ ನಿಡುನಿಂದಿರುವ ಗೊಮ್ಮಟ ಮೂರ್ತಿಗಳು

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...