Home / ಕವನ / ಕವಿತೆ / ಯಾರೆಂಬರು ಮುಗಿದುವೆಂದು ಬವರಾಂ?

ಯಾರೆಂಬರು ಮುಗಿದುವೆಂದು ಬವರಾಂ?

ಹತೋ ವಾ ಪ್ತವ್ಸ್ಯಸಿ ಸ್ವರ್‍ಗಂ ಜಿ ತ್ವಾವಾ ಭೋಕ್ಷ್ಯಸೇ ಮಹೀಮ್ |
ತಸ್ಮಾದುತಿಷ್ಟ ಕೌಂತೇಯ ಯುದ್ಧಾಯ ಕೃತನಿಶ್ಚಯ ತಿ (ಗೀತಾ ೨.೩೭)

ಯಾರಂಬರು ಮುಗಿದುವೆಂದು ಬವರಂ?
ನಂಬದಿರದು ಮರುಳರ ಮಾತೆ:
ನರನೆನ್ನವರಂ ನರನನ್ನೆವರಂ
ರಣಾಂಗಣವೆ ಶಾಂತಿಯ ಮಾತೆ!
ಶಾಂತಿಯೆ ನಿನ್ನಯ ಸಾಧನಮಾಗೆ
ಸದಾ ಸಿದ್ಧವಿರು ಯುದ್ಧಕ ಸಾಗೆ.

ಯುದ್ಧವಿಲ್ಲದಭಿವೃದ್ಧಿಯದುಂಟೆ?
ಯುದ್ಧದೆ ಮನುಜತೆಯ ವಿಕಾಸಂ-
ಬೆಂಕಿಯೊಳಲ್ಲವೆ ಕಬ್ಬಿಣ ದಾಂಟೆ
ಯತ್ರ ತಂತ್ರ ಶಕ್ತಿಯ ಸಾನಂ?
ಯೋಧನಾದ ನರನಮರಸಮಾನಂ,
ಯೋಧನೆಂದೆ ಸೃಷ್ಟಿಯ ಯಜಮಾನಂ.

ಕಟ್ಟಳೆಯೊಳೆ ಹಳಸಿದ ಬಾಳುವೆಗೆ
ಯುದ್ಧದಿ ನವಯೌವನ ಸಿದ್ಧಿ;
ಪರವಶತಗೆ ನಾಚದ ತಾಳುವೆಗೆ
ಯುದ್ಧದೊಳಾ ಪಾಪದ ಶುದ್ದಿ;
ಯುದ್ಧವೆ ಮೃತಜೀವನದುತ್ಥಾನಂ,
ಯುದ್ಧವೆ ಉತ್ಕ್ರಾಂತಿಯ ಸೋಪಾನಂ.

ನರತೆಯೊಂದ ನರನಾದಡನೇಕಂ,
ಏಕಾರ್‍ಥದ ಮಂದಿಯೆ ಜನತ;
ಜನತ ಜನತೆಯೊಳಗಿರದು ಏವೇಕಂ-
ಸ್ವಾರ್ಥಕಲ್ಲವಲ್ಲವೆ ತನತೆ?
ಸ್ವಾರ್ಥತೆ ಪರ್‍ಆರ್‍ಥದಲಿ ಕೆಯ್ಮಾಡ
ಸಂಗರವಾ ಪ್ರಸಭವನೀಡಾಡೆ

ಸರ್‍ವಜೀವಿಗಳೊಳೊರ್‍ವನೆ ಮನುಜಂ
ವರಹಿತ ಗೆಯಲೆಂದೊಗೆತಂದು,
ತನ್ನ ಹಂಗನವಮನ್ನಸಿ ದನುಜಂ
ತಾನೆನೆ ಪರರಲಿ ಮಲೆವಂದು,
ಕೇಸುರಿ ಬಲೆಯ ಕೇಸರಿಗೆಂತು
ಸಮರವಾತನಂ ಕಮರಿಸಲಂತು

ಸಾಲದು ನರಜನ್ಮವ ಬರಿದೆತ್ತ-
ಜನ್ಮಮಾತ್ರವೇತರ ಕಾರ್‍ಯಂ?
ನರನಹೆಯಾ? ದುಡಿ ನರತೆಯ ಮತ್ತ-
ದ್ವಿಜನಾಗದ ಮನುಜನನಾರ್‍ಯಂ!
ಪರರಳಲಿನ ವರಿಹರಿಕಗೆ ನಂದು
ಹೊಸ ಬಾಳೆತ್ತಿದವನೆ ದ್ವಿಜನಿಂದು.

ಅನ್ಯನಲ್ಲ, ನೀನೆ ನನ್ನ ಯೋಧಂ!
ಕಾದೆನಲಾ ಪ್ರಕೃತಿಯೆ ನಿನಗೆ.
ಕಟ್ಟಾಜ್ಞೆಯದಕ ತಟ್ಟಿ ವಿರೋಧಂ
ಎಲ್ಲಿನೆಲ್ಲಿಗುರುಳಿದೆ ಕೊನೆಗೆ!
ಕತ್ತಿಗೆ ಬಾರದ ಕಬ್ಬಿಣ ಬಾಗಿ
ಸುಟ್ಟಪುದನುದಿನ ಸಟ್ಟುಗಮಾಗಿ
ಅಳಿವೆಯೊ? ಉಳಿವೆಯೊ? ಪ್ರಶ್ನೆಯನಿತ್ತೆ-
ಮೂರನೆಯದಿಲ್ಲ ನಿನಗಾಯ.
ಕಾದದಡೆ ಸಾವಿಗವುತಣವಿತ್ತೆ
ಕಾದೆ ಸದೆದೆ ಸಾವನೆ ಸಾಯ!
ಪ್ರಬಲರಬಲರಂ ಕಬಲಿಸೆ, ಹಗೆಯಾ
ಕಾದೊ ಕಾದದೆಯೊ ಬದುಕುವೆ, ಬಗೆಯಾ!

ಕದೆ ಸಾವೆನೆಂದಕಟಾ ಗಾಸಿಯೊ?
ಕಾದದವರಿಗಿಲ್ಲವ ಸಾಯೆ?
ಕತ್ತಿಯಾಗಿ ಹಾಯೆ ಸಾಯೆ ವಾಸಿಯಾ?
ನಾಲದಂತ ಕಾಲಲಿ ತೇಯೆ?
ಸಾವಿಗಂಜೆ ಸಾವಿರ ಸಲ ಸತ್ತ,
ಸಾವನಂಜದವನೂಮ್ಮೆಯನಿತ್ತ.

ಕಾದೆ ಸಾವನೆಂದಲ್ಲಿಗೆ ಸರಿಯ,
ಬಾಳ್ವೆ ಸಾವಿನೊಳೆ ನೆರವೇರೆ?
ಬಾಳ್ವೆ ಬಾಳತಕ್ಕುದೊ ನಾನರಿಯೆ,
ಸಾವು ಸಾಯತಕ್ಕುದು ನೇರೆ!
ಧರ್‍ಮಯುದ್ಧವೊಂದಲ್ಲದೆ ಬೇರ
ದಾರಿಯೆ ವೀರಸ್ವರ್‍ಗವನೇರೆ?

ಸೆರೆಗೇಕಂಜುವೆ? ನೆರೆಯಾಳಲ್ಲವ
ತನ್ನ ಮನೆಯೊಳನ್ಯರ ತೊತ್ತು?
ಸಿಕ್ಕ ಮಡೆಯ ಮುಕ್ಕುವ ಗಿಳಿ ಬಲ್ಲವೆ
ಗೂಡೊ ಬೀಡೊ ಎನುವಾ ಗೊತ್ತು?
ಬಸುರಲಿ ಸೋಸಿಲ್ಲವೆ ನೀ ಸೆರೆಯಾ?
ಹೊಸ ಹುಟ್ಟಿನ ಬಸಿರಾ ಸೆರೆಯರಿಯಾ!

ತನ್ನ ಕಡುಕನ್ನೆಲ್ಲ ಮುನ್ನ ಕಾದು,
ತಾಯಿಳೆಯ ಬಿಡುಗಡೆಗೆ ಕಾದು,
ನರತೆಯ ಸರಿಸೋದರತೆಗೆ ಕಾದು,
ಮನುಜನ ವಿಮೋಚನೆಗೆ ಕಾದು.
ಪೂಸತೆ ಭವಿಷ್ಯವ ನೊಸಯಿಸೆ ಕಾದು,
ಬದುಕಿದೊಂದು ಕೂಳುಗುಳವೆನೆ ಕಾದು.

ನೀನಜರಾಮರನಹೆಯಾ? ಕಾದು-
ನರರಿಗೆ ವೆರೆತಮರತಯೊಳವೆ?
ಕಂಚೊ ಕಲ್ಲೊ ಕತೆ ಕವಿತೆಯೊ ಕಾದು
ನಿನ್ನನುಳಿಸೆ ನಿನಗಿನ್ನಳಿವೆ?
ಗೆದ್ದರೆ ಹೊಸ ಹೊತ್ತೆದ್ದುದು ಮುಂದೆ.
ಬಿದ್ದರೆ ನೇಸರಿನುದ್ದಕೆ ನಿಂದೆ!

ನಿನಗೆ ಕಾದೆನುವೆನಿದೊ ಧರ್‍ಮರಣಂ,
ಪರಾಕ್ರಮಣವದು ರಣವಲ್ಲ,
ವರರ ಬಿಡುವಿನವಹರಣವೆ ಮರಣಂ-
ಬಿಡುವ ತುಡುಕಿ ಕೆಡದವರಿಲ್ಲ.
ಬಿಡುಗಡೆ ಎನೆ ಜನಜನತೆಯ ಸೊತ್ತು,
ಕಳೆವನು ಸೆಳೆವನು ನಿಯತಿಯ ತುತ್ತು.

ಸಗ್ಗದಿಂದ ಸೋನೆಯಂತ ಸುರಿಯದು,
ಬಿಡುಗಡೆ ಗಡ ಬಾರದು ಬರಿದೆ!
ಕಾಯ್ವೊಡೆಯಗೆ ಬರಿ ಬಾಯಿಗೆ ದೊರೆಯದು-
ಕಾದದ ಕೆಯ್ಗೆಂದಿಗುಮರಿದೆ!
ದುಡಿಯದೆ ಪಡೆದಾ ಬಿಡುಗಡೆಯಲ್ಲ-
ರಣಹೇಡಿಗೆ ದೇವರ ನೆರವಿಲ್ಲ.

ಆಯುಧವಿಲ್ಲೆಂದೆದೆಗೆಡಬೇಡ-
ಯೋಧನೆತ್ತಲತ್ತಲೆ ಕತ್ತಿ!
ಸಾಧಕನೆ ತನ್ನ ಸಾಧನ, ನೋಡ!
ಹೇಡಿ ಏವನಾಯುದ್ಧದತ್ತಿ?
ಮನದೊರೆಯಲಿ ನಿನಗನುತಹ ಸಿರಿಯ
ಹೊತ್ತು ಕಾವ ಬಗೆಗತ್ತಿಯ ಹಿರಿಯ!

ನೆರವಿಗೆ ಯಾರೆಂದೇತಕ ಖನ್ನ
ಕಾದಿಸುವೊಡೆಯನೆ ಜತೆಗಿಲ್ಲಾ?
ಎಂದಿನಿಂದ ಕಾದವನಿದೊ! ನಿನ್ನ
ನುಳಿದು ತಾನೆ ಕಾದುವನಲ್ಲ.
ಕಂಡಿಸೆದೆಯನಿಡು ಗಂಡಡಿ ಮುಂದೆ
ನೂಕು ರವೀಂದು ಪತಾಕೆಯ ಹಿಂದೆ

ಕೇಳದೆ ಜಗದಿ ಗೋಳಿನ ಕಾಳ?
ಕಳಕಳಿಸದೆ ನಿನ್ನೆದೆಯಾರ?
ನಾಳೆ ಎಂಬ ಜಡಗೆಂದಿಗು ನಾಳ.
ಬಂದೆನೆಂಬ ಕುದುರೆಗೆ ಹಾರ!
ನೆಟ್ಟನೆ ರಣರಂಗದಿ ಮುಂಬರಿಯೊ,
ಜಯ ಶಾಂತಿ ಎಂದಶಾಂತಿಯನಿರಿಯಾ!
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...