Home / ಲೇಖನ / ವಿಜ್ಞಾನ / ವಿದ್ಯುತ್ ಬಿಲ್ಲೂಸಹ ಇನ್ನು ಕಂಪ್ಯುಟರಿಕೃತ ಯಂತ್ರದಿಂದ

ವಿದ್ಯುತ್ ಬಿಲ್ಲೂಸಹ ಇನ್ನು ಕಂಪ್ಯುಟರಿಕೃತ ಯಂತ್ರದಿಂದ

ತಪ್ಪು ಲೆಕ್ಕಾಚಾರ, ಕೂಡಿಸುವುದು, ಬಾಕಿ ತೋರಿಸುವುದು, ಮೀಟರ್‌ಗಳ ತಪ್ಪಿನಿಂದಾಗಿ ಹೆಚ್ಚು ಬಿಲ್ಲು ಬರೆದುಕೊಡುವುದು. ಇದೆಲ್ಲ ಗ್ರಾಹಕರಿಗೆ ಮಾಮೂಲಾಗಿದೆ. ಕೆ.ಪಿ.ಟಿ.ಸಿ. ಎಲ್. ನಿಂದಾದ ಕಿರಿಕಿರಿಗಳೆಂದು ಇದುವರೆಗೆ ಜನಭಾವಿಸಿದ್ದರು. ಇನ್ನು ಮುಂದೆ ಹಾಗಗಲಾರದು. ರಸೀದಿಯನ್ನಷ್ಟೇ ಕಂಪುಟರಿನಲ್ಲಿ ಕೊಡುವುದರ ಬದಲು ಮೀಟರ್ ರೀಡಿಂಗ್ ಸಹ ಪುಟ್ಟ ಯಂತ್ರದಲ್ಲಿ ತೋರಿಸಿ ಅಲ್ಲಿಯೇ ಒಂದಿಷ್ಟು ತಪ್ಪಾಗದಂತೆ ಬಿಲ್ಲುತೋರಿಸಿ, ರಸೀದಿ ನೀಡುವ ವ್ಯವಸ್ಥೆ ಗೊಳಿಸಲಾಗಿದೆ.

ನಗರ ಪಟ್ಟಣ ಪ್ರದೇಶಗಳಲ್ಲದೇ ಹಳ್ಳಿಹಳ್ಳಿಗೂ ತಲುಪಿ ಹೊಸ ಹೊಸ ರೀತಿಯ ವಿದ್ಯುತ್‌ಬಿಲ್ ನೀಡುವ ಮೂಲಕ ಗ್ರಾಹಕರಿಗೆ ಕುತೂಹಲ ಕೆರಳಿಸಿದೆ. ಹಿಂದಿನಂತೆ ಪದೇ ಪದೇ ತಲೆ ಎತ್ತಿ ನೋಡುವ ಕ್ರಿಯೆಗೆ ಸೆನ್ಸಾರ್ ಹಾಕಿರುವ ಈ ಯಂತ್ರ ಒಂದು ರೀತಿಯ ಕ್ಯಾಲ್ಯುಕುಲೇಟರ್ನಂತೆಯೇ ಕೆಲಸಮಾಡುತ್ತದೆ. ಮತ್ತು ವಿದ್ಯುತ್ ಮೂಲಕ ಬಿಲ್ಲು ನೀಡುವಾಗ ಒಮ್ಮೆ ಮೀಟರ್‌ನ ನಂಬರ್ ಹಾಗೂ ಮೀಟರ ಓಡಿರುವ ಯುನಿಟ್‌ಗಳನ್ನು ಫೀಡ್ ಮಾಡಿದರೆ ಸಾಕು. ಮಿಕ್ಕೆಲ್ಲ ಕೆಲಸಗಳನ್ನು ತನ್ನಿಂದ ತಾನೇ ಮಾಡಿ ಬಾಕಿ ಹಣ ಉಳಿದಿದ್ದರೆ ಅದನ್ನು ಸುಲಭವಾಗಿ ಈ ಯಂತ್ರ ತೋರಿಸುತ್ತದೆ. ಆರಂಭದಲ್ಲಿ ಕೆಲ ಬಿಲ್ಲುಗಳ ರೀಡರ್‌ಗಳ ತಪ್ಪಿನಿಂದಾಗಿ ಗೊಂದಲ ಸೃಷ್ಟಿಯಾಗುತ್ತಿತ್ತು. ಈ ಕಂಪ್ಯೂಟರಿಕೃತ ಬಿಲ್‌ರೀಡಿಂಗ್ ಯಂತ್ರವು ಸುವ್ಯವಸ್ಥಿತವಾಗಿ ಗೊಂದಲಗಳನ್ನು ನಿವಾರಿಸಿ ನೂತನ ಯಂತ್ರದ ಸಹಾಯದಿಂದ ಗ್ರಾಹಕರಿಗೆ ತಲುಪಿಸುತ್ತದೆ (ರಸೀದಿ) . ಜತೆಗೆ ಬಿಲ್ ಫೀಡ್ ಮಾಡಿದವರ ಹೆಸರೂ ಸಹ ಇದರಲ್ಲಿ ಅಚ್ಚಾಗಿರುತ್ತದೆ. ಒಟ್ಟಿನಲ್ಲಿ ವಿದ್ಯುತ್ ರೀಡಿಂಗ್ ಬಿಲ್ ಸಹ ಕಂಪ್ಯೂಟರೀಕರಣಗೊಂಡುದದು ಆಧುನಿಕತೆಗೆ ಸಾಕ್ಷಿಯಾಗಿದೆ. ಈ ಬಿಲ್ ರೀಡಿಂಗ್ ನಿಂದ ರಸೀದಿ ಪುಸ್ತಕಗಳನ್ನು ಮಾಡಿಸುವುದು, ಅವುಗಳನ್ನು ಫೈಲ್ ಮಾಡುವುದು ಕೂಡ ತಪ್ಪುತ್ತದೆ. ಇದು ಪ್ರತಿ ತಿಂಗಳೂ ಬರುತ್ತದೆ. ಈ ಯಂತ್ರದಿಂದ ಕಾರ್ಯಕ್ಷಮತೆ ಹೆಚ್ಚುತ್ತದೆ. ಗ್ರಾಹಕರಿಗೆ ಯಾಂತ್ರೀಕೃತ ಬಿಲ್ ನೀಡುವ ಮೂಲಕ ರಸೀದಿಯಲ್ಲಿ ತಿದ್ದುವ ತಪ್ಪು ಲೆಕ್ಕ ಬರೆಯಲು ಆಸ್ಪದ ಆಗದೇ ಇರುವುದರಿಂದ ಇದೊಂದು ವಿಜ್ಞಾನ ಕ್ಷೇತ್ರದ ಕೊಡುಗೆಯಾಗಿದೆ.
*****

Tagged:

Leave a Reply

Your email address will not be published. Required fields are marked *

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...

ಕಾಲ ಹನ್ನೆರಡನೆ ಶತಮಾನ. ದೇಶ ಜಪಾನ್. ಅರಸನ ಹೆಸರು ಅಂತೋಕು. ವಯಸ್ಸು ಕೇವಲ ಏಳು ಸಂವತ್ಸರಗಳು. ಅಂತೋಕು ಹೈಕೆ ಎಂಬ ಸಾಮುರಾಯ ದಳದ ನಾಮ ಮಾತ್ರ ಮುಂದಾಳುವಾಗಿದ್ದು ನಿಜವಾದ ಅಧಿಕಾರ ಇವನ ಅಜ್ಜಮ್ಮನ ಕೈಯಲ್ಲಿತ್ತು. ಅಜ್ಜಮ್ಮನ ಹೆಸರು ನೀ ಎಂದು. ನೀಯ ಜವಾಬ್ದಾರಿ ಗುರುತರವಾಗಿತ್ತು ಎಂದು...

ಶೇಖರನಿಗೆ ಇನ್ನೂ ಎರಡು ದಿನಗಳ ‘ವಾರ’ ಕಡಿಮೆ ಬಿದ್ದಿತ್ತು. ಎಲ್ಲಿಯೂ ಹುಟ್ಟುವಂತೆ ತೋರಲಿಲ್ಲ. ಶ್ರೀಮಾನ್ ಪದ್ಮನಾಭ ಹೆಬ್ಬಾರರ ಮನೆಯಲ್ಲಿ ಕೇಳಬೇಕೆಂದು ನಾಲ್ಕಾರು ಸಲ ಯೋಚಿಸಿದ. ಆದರೆ ಅವರು ಭಿಕ್ಷುಕರನ್ನೂ, ವರ್ಗಣಿ ಕೇಳುವವರನ್ನೂ ವಾರದ ಮಾಣಿಗಳನ್ನೂ ಅಂಗಳಕ್ಕೂ ಬರಗೊ...

ಸರ್‍ಕಸ್ಸು ಮುಗಿದರೂ ಅವನು ಅಲ್ಲಿಯೇ ಕುಳಿತಿದ್ದ. ಎಲ್ಲಾ ಎದ್ದು ಹೋಗಿದ್ದರು. ಎರಡನೇ ಷೋ ಆರಂಭವಾಗಲು ಕೆಲವೇ ಸಮಯ ಉಳಿದಿತ್ತು. ಅವನ ಕಣ್ಣುಗಳು ಏನನ್ನೋ ಹುಡುಕುತ್ತಿದ್ದವು. ಆ ಸರ್‍ಕಸ್ಸಿನ ಹುಡುಗಿ ಪ್ರವೇಶಿಸಿ ಓಡಿ ಬಂದು ಎರಡು ಬಾರಿ ಲಾಗಾ ಹಾಕಿ ಇವನ ಮುಂದೆಯೇ ನಿಂತಂತಾಯಿತು. ಆಕೆಯ...

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...