Home / ಕವನ / ಕವಿತೆ / ಹೊನಲ ಹಾಡು

ಹೊನಲ ಹಾಡು

ಸ್ಥವಿರ ಗಿರಿಯ ಚಲನದಾಸೆ,
ಮೂಕ ವನದ ಗೀತದಾಸೆ,
ಸೃಷ್ಟಿ ಹೊರೆಯ ಹೊತ್ತ ತಿರೆಯ
ನಗುವಿನಾಸೆ ನಾ.
ಬಾಳ್ವೆಗೆಲ್ಲ ನಾನೆ ನಚ್ಚು,
ಲೋಕಕೆಲ್ಲ ಅಚ್ಚುಮೆಚ್ಚು,
ನಾನೆ ನಾನೆ ವಿಧಿಯ ಹುಚ್ಚು,
ಹೊನಲ ರಾಣಿ ನಾ.

ಕಿರಣ ನೆಯ್ದ ಸರಿಗೆಯುಡಿಗೆ,
ಇರುಳು ಕೊಟ್ಟ ತಾರೆತೊಡಿಗೆ,
ಇಂದುಕಳೆಯ ಹೂವೆ ಮುಡಿಗೆ –
ದೇವಕನ್ಯ ನಾ.
ಬೆಳ್ಳಿ ನೊರೆಯ ನಗೆ ನಗುತ್ತ,
ತೆರೆಯ ನಿರಿಯ ಚಿಮುಕಿಸುತ್ತ,
ಕಡಲ ವರಿಸೆ ತವಕಿಸುತ್ತ,
ನಡೆವ ವಧುವೆ ನಾ.

ನಲಿತ ಕುಣಿತವೆನ್ನ ಶೀಲ,
ಚಲನವೆನ್ನ ಜೀವಾಳ,
ಲುಪ್ತಮಾಗೆ ದೇಶಕಾಲ
ಎನ್ನ ಗಾಯನಾ.
ದಡದ ಗಿಡಕೆ ಪುಷ್ಪಹಾಸ,
ಸನಿಯದಿಳೆಗೆ ಸಸ್ಯಹಾಸ,
ಹಾಸಕೀರ್ಣ, ಹಾಸಪೂರ್ಣ,
ಎನ್ನ ಜೀವನಾ.

ಹೂವಿನಾಸೆಯನ್ನು ತೋರಿ
ಎಲೆಯ ಕಣ್ಣನೀರ ಕಾರಿ
ರೆಂಬೆಯಡ್ಡಗಟ್ಟಿ, ಹಳುವು
ಆಡೆ ಕರೆವುದು;
ಬೆಟ್ಟ ಮುದ್ದು ಮಾಡಲೆಂದು,
ಮಡುವು ಹಾದಿ ತಂಗಲೆಂದು,
ಕಡಲು ಒಲುಮೆ ಸಾಲದೆಂದು-
ನನ್ನ ತಡೆವುದು.

ನಾನು ನಿಲ್ವುದೊಂದೆ ಚಣಂ
ಸತತ ಕರ್ಮವೆನ್ನ ಗುಣಂ
ಅದಕೆ, ಕಾಣೆ ಗೋಳನಣಂ
ಹರ್ಷಮೆನಗೆ ಚಿರಂತಣಂ.

ಗವಿಗಳಲ್ಲಿ ಹುಳನಡಗಿ
ಬಂಡೆ ಮೇಲೆ ಹವ್ವನೆರಗಿ
ಮಡುವಿನಿಂದ ಮೆಲನೆ ಜರುಗಿ
ಕಡಲಿಗೋಡುವೆ;
ಬಿಸಿಲ ಕೋಲ ಹಿಡಿದು ಹತ್ತಿ
ನೀರ ತೇರನೇರಿ ಸುತ್ತಿ
ತಿರುಗಿ ತಿರೆಯ ಮಡಿಲಿನಲ್ಲಿ
ಧುಮುಕಿ ಹರಿಯುವೆ.

ಅಚರ ಜಗದ ಚಲನದಾಸೆ
ಮೂಕ ಜಗದ ಗೀತದಾಸೆ
ನಿಯತಿ ನಿಯಮ ನಿಯತ ಜಗದ
ನಗುವಿನಾಸೆ ನಾ.
ವನವಿನೋದ, ಮಲೆಯ ಮೋದ,
ಮುಗಿಲ ಮೇಲ್ಮೆ, ನಾಡ ನಲ್ಮೆ,
ನಾನೆ ನಾನೆ ದಿವದ ಕೂರ್ಮೆ-
ಪೊನಲ ರಾಣಿ ನಾ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...