Home / ಕವನ / ಕವಿತೆ / ಬಯಕೆಯ ಹಾಡು

ಬಯಕೆಯ ಹಾಡು

ಕಸಕಸಿ ಕೊಬ್ಬರಿ ಹಸನುಳ್ಳ ಜಿಲಿಬಿಲಿ|
ಬಿಸಿಯ ಹೂರಣಗಡಬ ಬಿಳಿಯ ಬೆಲ್ಲಽಽ|
ರಸಬಾಳಿ ಖಬ್ಬ ಸುಲಿದು ಮುಂದಿಟ್ಟರ|
ಇಸಮಾಡಿ ಒಂದ ತುತ್ತ ತಿಂದೇನ ತಾಯಿ|
ಬಂಕಿ ಕಾಡತಾವ ತಾಯಿ ಪರಿಪರಿಯಿಂದ
ಬಂಕಿ ಕಾಡತಾವ ||೧||

ಆಕಳ ಹಾಲಾಗ ದುಮ್ಮಸ ಮಾಡ|
ಪರಡಿ ಸವತೀಬೀಜ ಪಾಯಸ ಮಾಡ|
ಯಾಲಕ್ಕಾಯ ಪತ್ತುರಿ ಜಾಜಿಕಾಯಿ ಮೊದಲುಮಾಡಿ|
ಇಷ್ಟ ಸಾಹಿತನೆಲ್ಲ ಹದಮಾಡ ತಾಯಿ|
ಬಂಕಿ ಕಾಡತಾವ ||೨||

ಗಂಗಾಳ ಝರಗಿ ಝಳಝಳ ಬೆಳಗ|
ತೆಂಬೀಗಿ ತುಂಬಿ ಬದಿಯಲ್ಲಿ ಇಡಽ|
ಡೊಣ್ಣಿ ತುಂಬ ತುಪ್ಪ ತಂದು ಮುಂದಿಟ್ಟಿರ|
ಬಟ್ಟೆದ್ದಿ ಬಾಯಾಗ ಇಟ್ಟೀನ ತಾಯಿ|
ಬಂಕಿ ಕಾಡತಾವ ||೩||

ಎಳ್ಳ ಹಚ್ಚಿದ ರೊಟ್ಟಿ ಎಣ್ಣಿ ಬದನೀಕಾಯಿ|
ಮಸರ ಕಲಸಿದ ಬುತ್ತಿ ಬಿಸಿಯ ಬಾನ|
ಅಲ್ಲ, ಮಾಗುಣಿ ಬೇರ, ಬೆಲ್ಲ, ಬೆಳವಲದ್ಹಣ್ಣ|
ಮನ ಬೇಡಿ ನನ ಜೀವ ಬಗಸ್ಯಾದ ತಾಯಿ|
ಬಂಕಿ ಕಾಡತಾವ ||೪||

ಹೋಳಿಹೆಣ್ಣಿವಿ ಸುತ್ತ ತನುಗಾಳಿ ಬೀಸ್ಯಾವ|
ಮಾಳೀಗಿ ಏರಿ ಬೆಳಖಿಂಡಿ ಮುಚ್ಚ|
ಬಣ್ಣಽದ ಹಚ್ಚಡ ಬಿಗಿಬಿಗಿದು ಹೊಚ್ಚಿದರ|
ಕಣ್ತುಂಬ ಒಂದು ನಿದ್ದಿ ಮಾಡೇನ ತಾಯೀ|
ಬಂಕಿ ಕಾಡತಾವ ||೫||

ಕುಂತಽರ ಆಕಡಿಕಿ ನಿಂತರ ತೂಕಡಿಕಿ|
ತಾಳಲಾರೆನೆ ತಾಯಿ ತೋಳಾರೆ ತಾರ|
ಮಂಚಕ ಒಪ್ಪತ ಹಾಸೀಗಿ ಮಾಡ|
ಮಂಚಕ ಎನ್ನ ಎಳದ್ಹಾಕ ತಾಯೀ|
ಬಂಕಿ ಕಾಡತಾವ ||೬||
*****
ಬಯಕೆಯ ಹಾಡು

ಒಬ್ಬ ಗರ್ಭಿಣಿಗೆ ಬಯಕೆಗಳು ಕಾಡುತ್ವೆ. ಅವಳು ತಾಯಿಯಲ್ಲಿ ತನ್ನ ಬಯಕೆಗಳನ್ನೆಲ್ಲ ಬೇಡುತ್ತಾಳೆ. ಅವಳ ಸಲಿಗೆಯ ಮಾತು ಹೇಳುವ ಬಗೆ ಎಶ್ಟು ಸೊಗಸಾಗಿವೆ; `ಕಸಕಸಿ ಕೊಬ್ಬರಿ, ಹೆಸನುಳ್ಳ ಜಿಲಿಬಿಲಿ, ಬಿಳಿಯ ಬೆಲ್ಲದ ಬಿಸಿಯ ಹೊರಣಗಡುಬು… ಇವನ್ನು ಮುಂದಿಟ್ಟರೆ ಇಸಮಾಡಿ ಒಂದು ತುತ್ತ ತಿಂದೇನು’ ಎನ್ನುತ್ತಾಳೆ! ಇದರಂತೆಯೆ `ಬಟ್ಟೆದ್ದಿ ಬಾಯಾಗ ಇಟ್ಟೇನು ತಾಯಿ’ `ತಾಳಲಾರೆನೆ ತಾಯಿ ತೋಳಾರೆ ತಾರ’-ಮೊದಲಾದುವು.

ಛಂದಸ್ಸು:- ಕುಸುಮಷಟ್ಟದಿಗೆ ಹೊಂದುತ್ತದೆ.

ಶಬ್ದ ಪ್ರಯೋಗಗಳು:- ಇಸ=ವಿಷ. ದುಮ್ಮಸ ಮಾಡ=ಅದರಲ್ಲಿ ಅಡಿಗೆ ಮಾಡು. ಮಸರ=ಮೊಸರು. ಬಾನ=ಬೋನ. ತನುಗಾಳಿ=ತಂಪುಗಾಳಿ.

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...