Home / ಲೇಖನ / ಇತರೆ / ಸುಖಕ್ಕೆ ಅಪೇಕ್ಷೆ ಪಡಬೇಡಿ

ಸುಖಕ್ಕೆ ಅಪೇಕ್ಷೆ ಪಡಬೇಡಿ

ಪ್ರತಿಯೊಬ್ಬರು ಬಾಳಿನಲ್ಲಿ ಸುಖವಾಗಿ ಬಾಳಬೇಕೆನ್ನುತ್ತಾರೆ. ಇದು ಮಾನವನ ಸಹಜ ಪ್ರವೃತ್ತಿ. ‘ಸುಖ’ ಎನ್ನುವ ಪದವೇ ಸದಾ ನಮಗೆ ಜೀವನದ ಹೊಯ್ದಾಟಗಳಿಗೆ ಕಾರಣವಾಗುತ್ತದೆ. ಈಗ ಪ್ರತಿಯೊಬ್ಬರಿಗೂ ಕೇಳಿದರೂ ಸುಖದ ಅರ್ಥ ಬೇರೆ ಬೇರೆಯಾಗಿ ಅರ್ಥೈಸುತ್ತಾರೆ. ಆರೋಗ್ಯವಾಗಿರುವುದೇ ಸುಖವೆಂದು ಕೆಲವರೆಂದರೆ, ಹಣ ಗಳಿಕೆ ಮಾಡಿ ಚಿಂತೆಯಿಂದ ದಿನನಿತ್ಯ ಬದುಕುವುದೇ ಸುಖ ಎನ್ನುತ್ತಾರೆ ಹಲವರು. ಮಕ್ಕಳು ಜ್ಞಾನಾರ್ಜನೆ ಮಾಡಿಕೊಂಡು ನೌಕರಿ ಮಾಡಿಕೊಂಡು ನೆಮ್ಮದಿಯಿಂದ ಇದ್ದರಾಯಿತು ಅದೇ ಸುಖ ಎನ್ನುತ್ತಾರೆ. ಹೀಗೆ ಸುಖದ ಅರ್ಥಗಳು ಕಾಲ ಕಾಲಕ್ಕೂ ಬದಲಾಗುತ್ತ ಸಾಗುತ್ತವೆ.

ಹಾಗಾದರೆ ಸುಖ ಯಾವುದು! ಸಿರಿವಂತರಾಗಿದ್ದರೆ ಅಥವಾ ಆರೋಗ್ಯದಿಂದ ಬಾಳಿದರೆ ಅಥವಾ ಮಕ್ಕಳು ಮೊಮ್ಮಕ್ಕಳ ನಡುವೆ ನಗುತ್ತ ಬಾಳುವುದೇ ಹಾಗಾಗದಿದ್ದರೆ ಒಂದು ದೊಡ್ಡ ಬಂಗ್ಲೆ ಕಟ್ಟಿಕೊಂಡು, ಕಾರು ಖರೀದಿಸಿ ಇನ್ನೇನೋ ಆಸೆಗಳಿಗೆ ತೃಪ್ತಿಪಡಿಸಿ ಬಾಳುವುದು ಸುಖವೇ! ಎಲ್ಲಕ್ಕು ಉತ್ತರ ‘ಇಲ್ಲ’ ಎಂಬುದೇ ತಿಳಿಯುತ್ತದೆ.

ಗೌತಮ ಬುದ್ಧರು ‘ಆಸೆಯೆ ದುಃಖಕ್ಕೆ ಕಾರಣ’ ಎಂದರು. ಅಂದರೆ ದಿನನಿತ್ಯ ಸಾವಿರಾರು ಆಸೆಗಳು ನಮ್ಮ ಕಲ್ಪನೆಯಲ್ಲಿ ಹುಟ್ಟುತ್ತವೆ. ಅಂಥ ಹುಟ್ಟಿಕೊಂಡ ಆಸೆಗಳಿಗೆ ಕಟ್ಟಿಕೊಡುತ್ತ ಸಾಗಿದರೆ ನಾವೆಂದೂ ಸುಖಿಗಳಾಗುವುದಿಲ್ಲ. ‘ಎಲ್ಲರ ಮನೆಯ ದೋಸೆ ತೂತು’ ಎಂಬಂತೆ ಎಲ್ಲರೂ ಒಂದಿಲ್ಲ ಒಂದು ತೊಂದರೆಗಳಿಗೆ ಸಿಲುಕಿ ಸುಖದಿಂದ ವಂಚಿತರಾಗಿದ್ದಾರೆ. ಈ ಲೋಕದಲ್ಲಿ ಬಾಳುವ ಯಾರೂ ಸುಖಿಗಳಲ್ಲ. ರಾಜ ಮಹಾರಾಜರಿಂದ ಜನಸಾಮಾನ್ಯನವರೆಗೂ ಏನೋ ಅತೃಪ್ತಿಗಳು ಕಾಡುತ್ತಿವೆ.

ಆ ಅತೃಪ್ತಿಗಳೇ ಸುಖದ ವೈರಿಗಳಾಗಿ ನಮ್ಮನ್ನು ನಿತ್ಯ ಶೋಕದ ಪ್ರಪಾತಕ್ಕೆ ತಳ್ಳುತ್ತಿವೆ. ಸುಖವೆಂಬುದೊಂದು ಮರಿಚೀಕೆಯಾಗಿದೆ. ನಾವು ಅದನ್ನು ಹಿಡಿಯಲು ಓಡುತ್ತಿರುವಾಗಲೆ ಅದೂ ನಮಗೆ ನಿಲುಕದೇ ಹಾಗೇ ದೂರ ಓಡುತ್ತದೆ. ಅಂತಲೇ ಅರಿಸ್ಟಾಟಲ್ ‘ಸುಖದ ಪ್ರಾಪ್ತಿಗೆ ವಸ್ತುಗಳು ಸಂಗ್ರಹಿಸಿದಷ್ಟು ದುಃಖವು ಅಧಿಕವಾಗುತ್ತದೆ’ ಎಂದರು.

ಆದ್ದರಿಂದ ಸಂತರು, ಶರಣರು ನೀನು ಸುಖಕ್ಕೆ ಅಪೇಕ್ಷೆ ಪಡದೇ ಜೀವನದಲ್ಲಿ ಬಂದುದೆಲ್ಲಕ್ಕೂ ನೆಮ್ಮದಿಯಿಂದ ಸ್ವೀಕರಿಸಿದರೆ ಅದೇ ಸುಖವೆಂದು ಅರಹುತ್ತಾರೆ. ಅದೇ ಸಾರ್ಥಕ ಮೈಲಿಗಲ್ಲಾಗುತ್ತದೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...