Home / ಕವನ / ಕವಿತೆ / ಚಿಕುಹೂ

ಚಿಕುಹೂ

ಚಿಕುಹೂ ಚಿಕುಹೂ ಚಿಕುಹೂ-
ಸನ್ನೆಯವೊಲು ಮುಹುರ್ಮುುಹು
ಆರೆಚ್ಚರಕೀ ತುತ್ತುರಿ
ಬಾನೊಳು ಮೊಳಗುತ್ತಿದೆ?
ಎನ್ನ ಕಿವಿಯೊಳೀ ಸವಿ ದನಿ
ಸಿಂಪಿಸುತಿದೆ ಸೊದೆಸೀರ್ಪನಿ
ವಿಸ್ಮೃತಿಗೈದಿರುವಾತ್ಮವ-
ನುಜ್ಜೀವಿಪ ತೆರದೆ.

ದಿವಮರೆತಪ್ಸರೆ ಎಚ್ಚರೆ
ಅಗಲುವಳೆಂದಿಳೆ ಬೆಚ್ಚಿರೆ
ಹರಿಕಾರರನಮರಾವತಿ
ದೊರೆಯಟ್ಟಿಹನೆನಲು
ಈ ದನಿ ಬರೆ ಲಾಲಿಸುತದೆ
ಪಯಣಕೆ ಸಡಗರಗೊಳುತಿದೆ
ಮನ್ಮಾನಸ ಸರೋವರದ
ಕರಣಗಳಂಚಿನೊಳು.

ಚಿಕುವೂ ಚಿಕುವೂ ಚಿಕುವೂ-
ಕಂಪೆರಚಿದೆ ಈ ದನಿಹೂ
ರಸ ಸೂಸಿದೆ ಸ್ವಾಹಾ
ಎಂದುಜ್ವಲಿಸಲು ನೆನಹು
ನೋಡುತಲಿದ್ದರು ಕಾಣದು
ಆಲಿಸುತಿದ್ದರು ಕೇಳದು
ಸರ್ವೇಂದ್ರಿಯವಿದಕಾಗಿರೆ
ಪ್ರತ್ಯಕ್ಷವೆ ಮರಹು.

“ಬಂದಿರ ತಂದಿರ ಕೊಡುವಿರ
ಕೊಟ್ಟಿರ ಕೊಳುವಿರ ನಡೆವಿರ”-
ನಿಸ್ಸ್ನೇಹದ ಸಭ್ಯತೆಯೊಳು
ಈ ನಡೆವಳಿಯೆಲ್ಲಾ
ನಡೆಯುತ್ತಿವೆ ಹೊರಬಗೆಯೊಳು,
ಮನೆಯಾಚೆಯ ಗದ್ದಲದೊಲು;
ಯೋಗಕ್ಷೇಮದ ವೇದನೆ
ಇಂದೆನಗಿನಿತಿಲ್ಲ.

ಭವಿ ನಾ ತಾಪಸಿ ನಾನು
ಕವಿ ನಾ ಕಿಂಕರ ನಾನು
ನಾ ನಾ ಇದಕಿತಿಯೇನಿದೆ
ಮಿತಿಯೇನಿದೆ, ದನಿಯೇ,
ಥಟ್ಟನೆರಗಿ ಗರುಡನ ತೆರ
ಅಹಮೆಂಬೀ ನಿಧಿನಾಗರ-
ನೊಯ್ದಿಹೆನೀ ಮುದವಿದ್ಯುತ್-
ಸ್ಪರ್ಶವ ಮನ ಪಡೆಯೆ.

ಚಿಕುವೂ ಕುವ್ವೂ- ಏನ್ ಸವಿ!
ಒಂದೇ ಸರದೊಂದೇ ಛವಿ
ಅಜರಾಮರವಿದು ಅಚ್ಚರಿ
ಪುರಾಣ ನೂತನವು
ಕೋಟಿ ಕೋಟಿ ಕೋಗಿಲೆ ಮೈ
ತರಗೆಲೆಯಂತುದುರಿವೆ ಸೈ
ಇದನು ಹಿಡಿದು ಬಿಡುವಾಟದಿ
ಋತುಋತು ಯುಗಯುಗವೂ.

ಈಯೆಡೆ ಆಯಡೆ ಬೇರಡೆ
ಬಿಡುವಿರುವೆಡೆ ಬಿಡುವಿರದೆಡೆ
ಒಲಿವೆಡೆ ನಲಿವೆಡೆ ಅಳುವೆಡೆ
ದೇಶವಿದೇಶದೊಳು
ಜನ್ಮದಿ ಜನ್ಮದಿ ನಾನಿದ
ಬಗೆಬಗೆಯೊಳು ಕೇಳಿದ ಹದ
ಇಂದೆಂತೆಯೊ ತೆರೆ ತರೆಯುತ
ತೋರಿದೆ ಹೃದಯದೊಳು-

“ಓ ಕೆಳೆಯಾ, ಮನೆ ನೆನೆಯಾ
ಬಿಡುಬಿಡು ಭವದೀ ಕೊನೆಯಾ
ದಿವ್ಯತೆಗೆಯೆ ಕಾಮಂಗೊಂ
ಡೆದೆ ಎರಕೆಯನೆರೆಯಾ”
ಎಂಬರ್ತಿಯ ಆರ್ತಸ್ವರ-
ವಿದು ಬಗೆಗೊಳೆ, ನಾ ಕಾತರ-
ಗೊಂಡೋಗುಟ್ಟುವೆ ನೆನೆನೆನೆ-
ದಾ ದೂರದ ಕರೆಯಾ.

ಚಿಕುವೂ ಕುವು ಕುವು ಟಿಇವೂ-
ಕಾರ ತಂಪು ಮಿಂಚ ಹೊಳಹು
ದಾಳಿಂಬೆಯ ರುಚಿ ಅಗಲಿದ
ಕಾದಲರೆದೆ ಕಾವು,
ಮಗು ತಾಯಿಗೆ, ಕವಿ ಚೆಲುವಿಗೆ,
ನನ್ನಿಗ ನನ್ನಿಗೆ, ಪರಮಗೆ
ಭಕ್ತರು ಹಂಬಲಿಸುವ ಬಗೆ
ಈ ಕೋಗಿಲೆಯುಲಿವು.

ದನಿಹಣ್ಣಿಂದಮೃತದ ರಸ
ತೊಟ್ಟಿಡಲಿಂತೆದೆ ತಾಮಸ-
ವುಳಿದುಜ್ವಲಿಸಿರೆ ಈ ಮಹ-
ದನುಭವಕೇನೆಂಬೆ?
ಈ ಶಾಶ್ವತ ರುತಿಗೊಂದಿದ
ಅಂದಂದಿನ ಸ್ಮೃತಿಯೋಲಿದ
ಪಿಡಿವಾನಂದದೊಳಾನಂ-
ತ್ಯವ ಮುಟ್ಟಿಹೆನೆಂಬೆ.
*****

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...