Home / ಲೇಖನ / ಇತರೆ / ಪ್ರಶ್ನೆಯಿಲ್ಲದ ಬದುಕೊಂದು ಬದುಕೆ

ಪ್ರಶ್ನೆಯಿಲ್ಲದ ಬದುಕೊಂದು ಬದುಕೆ

ಪ್ರಿಯ ಸಖಿ,

ಜಿ.ಎಸ್. ಶಿವರುದ್ರಪ್ಪನವರ ಕವನದ ಕೆಲ ಸಾಲುಗಳು ನೆನಪಾಗುತ್ತಿದೆ.
ಪ್ರಶ್ನೆಯಿಲ್ಲದ ಬದುಕೊಂದು
ಬದುಕೆ ?
ನನಗಿಲ್ಲ ಪೂರ್ಣ ವಿರಾಮವನ್ನರಸಿ
ನಡೆಯುವ ಬಯಕೆ,
ಈ ಪ್ರಶ್ನೆಯ ಕೆಳಗೆ ಮಡಿಸಿರುವ
ಸಂಶಯದ ನೆರಳ
ಬಿಚ್ಚಿ ನಡೆಯುವುದು ನನಗಿಷ್ಟ

ಎಷ್ಟು ಸೊಗಸಾದ ಸಾಲುಗಳಲ್ಲವೇ ? ನಿಜಕ್ಕೂ ಪ್ರಶ್ನೆಯಿಲ್ಲದ ಬದುಕು ಬದುಕೆ? ಉತ್ತರಗಳಿಲ್ಲದೆಯೂ ಬದುಕಬಹುದು. ಆದರೆ ನಿರಂತರ ಪ್ರಶ್ನೆ ಮಾಡುವ ಮನಸ್ಸು ನಮ್ಮಲ್ಲಿರಬೇಕು. ಪ್ರಶ್ನೆಗಳಿಗೆ ಉತ್ತರ ಸಿಗಲಿ ಬಿಡಲಿ, ಉತ್ತರಗಳನ್ನು ಹುಡುಕುವ ಪ್ರಶ್ನೆಗಳನ್ನು ಕೆದಕುತ್ತಾ ಸಾಗುವ ದಿಟ್ಟತನ ನಮಗೆ ಬೇಕು.

ನಮ್ಮಲ್ಲಿ ಎಷ್ಟೊಂದು ಜನರಿಗೆ ಯಾವುದಕ್ಕೂ ಪುರಸೊತ್ತಿಲ್ಲ. ಆಂಗ್ಲ ಕವಿಯೊಬ್ಬ ಹೇಳುತ್ತಾನೆ, Take time to live. Because the world has so much to give…ಬದುಕಲು ಸಮಯ ಮಾಡಿಕೋ ಏಕೆಂದರೆ ನಿನಗಾಗಿ ನೀಡಲು ಈ ಜಗತ್ತಿಗೆ ಬಹಳಷ್ಟಿದೆ. ನಮ್ಮದೇ ಕಷ್ಟ, ದುಃಖ ಸಮಸ್ಯೆಗಳ ಜಾಲದಲ್ಲಿ ಸುತ್ತಿಕೊಂಡಿರುವ ನಮಗೆ,
ಹೃದಯ ತೆರೆದು ಹೀಗೆ ಬದುಕಲು, ಜಗತ್ತಿನ ಆಗು-ಹೋಗುಗಳಿಗೆ ಸ್ಪಂದಿಸಲು ಸಮಯವಿದೆಯೇ? ಅಥವಾ ಆಸಕ್ತಿಯಿದೆಯೇ?

ಒಬ್ಬ ವ್ಯಕ್ತಿ ನಿಜಕ್ಕೂ ಬದುಕಿದ್ದಾನೆಂದು ತಿಳಿಯುವುದೇ ಅವನಲ್ಲಿರುವ ಅದಮ್ಯ ಕುತೂಹಲದಿಂದ. ಎಲ್ಲವನ್ನೂ ಒಳಗೊಂಡ ಬದುಕನ್ನು ತಿಳಿಯಬೇಕೆಂದು ಪ್ರಶ್ನೆ ಮೇಲೆ ಪ್ರಶ್ನೆ ಹಾಕುವ ವ್ಯಕ್ತಿ, ಉತ್ತರಗಳನ್ನು ಅರಸುವ ವ್ಯಕ್ತಿ ಸದಾಕಾಲ ಜೀವಂತವಾಗಿರುತ್ತಾನೆ.
ಇಲ್ಲದಿದ್ದವನು ಬದುಕಿದ್ದೂ ಸತ್ತಂತೆ!

ಪ್ರಿಯ ಸಖಿ, ನಾವೂ ಬದುಕಲು ಒಂದಿಷ್ಟು ಸಮಯ ಮಾಡಿಕೊಳ್ಳೋಣ. ಜಗತ್ತು ನಮಗಾಗಿ ನೀಡಲು ಕಾದಿರುವ ಎಲ್ಲವನ್ನೂ ಆಸ್ವಾದಿಸೋಣ. ಪ್ರಶ್ನೆಗಳೂ ನಮ್ಮನ್ನು ಕಾಡಲಿ. ಉತ್ತರಗಳಿಗಾಗಿ ಹುಡುಕಾಡೋಣ. ಎಲ್ಲಕ್ಕೂ ಮೊದಲು ಹೃದಯ ತೆರೆದು ಬದುಕಲು ಪ್ರಯತ್ನಿಸೋಣ. ನೀನೇನನ್ನುತ್ತೀ ಸಖಿ? ಸಮಯ ಮೀರುತ್ತಿದೆ ಇನ್ನು ಬರಲೆ?
*****

Tagged:

Leave a Reply

Your email address will not be published. Required fields are marked *

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...