Home / ಲೇಖನ / ಇತರೆ / ಪ್ರಶ್ನೆಯಿಲ್ಲದ ಬದುಕೊಂದು ಬದುಕೆ

ಪ್ರಶ್ನೆಯಿಲ್ಲದ ಬದುಕೊಂದು ಬದುಕೆ

ಪ್ರಿಯ ಸಖಿ,

ಜಿ.ಎಸ್. ಶಿವರುದ್ರಪ್ಪನವರ ಕವನದ ಕೆಲ ಸಾಲುಗಳು ನೆನಪಾಗುತ್ತಿದೆ.
ಪ್ರಶ್ನೆಯಿಲ್ಲದ ಬದುಕೊಂದು
ಬದುಕೆ ?
ನನಗಿಲ್ಲ ಪೂರ್ಣ ವಿರಾಮವನ್ನರಸಿ
ನಡೆಯುವ ಬಯಕೆ,
ಈ ಪ್ರಶ್ನೆಯ ಕೆಳಗೆ ಮಡಿಸಿರುವ
ಸಂಶಯದ ನೆರಳ
ಬಿಚ್ಚಿ ನಡೆಯುವುದು ನನಗಿಷ್ಟ

ಎಷ್ಟು ಸೊಗಸಾದ ಸಾಲುಗಳಲ್ಲವೇ ? ನಿಜಕ್ಕೂ ಪ್ರಶ್ನೆಯಿಲ್ಲದ ಬದುಕು ಬದುಕೆ? ಉತ್ತರಗಳಿಲ್ಲದೆಯೂ ಬದುಕಬಹುದು. ಆದರೆ ನಿರಂತರ ಪ್ರಶ್ನೆ ಮಾಡುವ ಮನಸ್ಸು ನಮ್ಮಲ್ಲಿರಬೇಕು. ಪ್ರಶ್ನೆಗಳಿಗೆ ಉತ್ತರ ಸಿಗಲಿ ಬಿಡಲಿ, ಉತ್ತರಗಳನ್ನು ಹುಡುಕುವ ಪ್ರಶ್ನೆಗಳನ್ನು ಕೆದಕುತ್ತಾ ಸಾಗುವ ದಿಟ್ಟತನ ನಮಗೆ ಬೇಕು.

ನಮ್ಮಲ್ಲಿ ಎಷ್ಟೊಂದು ಜನರಿಗೆ ಯಾವುದಕ್ಕೂ ಪುರಸೊತ್ತಿಲ್ಲ. ಆಂಗ್ಲ ಕವಿಯೊಬ್ಬ ಹೇಳುತ್ತಾನೆ, Take time to live. Because the world has so much to give…ಬದುಕಲು ಸಮಯ ಮಾಡಿಕೋ ಏಕೆಂದರೆ ನಿನಗಾಗಿ ನೀಡಲು ಈ ಜಗತ್ತಿಗೆ ಬಹಳಷ್ಟಿದೆ. ನಮ್ಮದೇ ಕಷ್ಟ, ದುಃಖ ಸಮಸ್ಯೆಗಳ ಜಾಲದಲ್ಲಿ ಸುತ್ತಿಕೊಂಡಿರುವ ನಮಗೆ,
ಹೃದಯ ತೆರೆದು ಹೀಗೆ ಬದುಕಲು, ಜಗತ್ತಿನ ಆಗು-ಹೋಗುಗಳಿಗೆ ಸ್ಪಂದಿಸಲು ಸಮಯವಿದೆಯೇ? ಅಥವಾ ಆಸಕ್ತಿಯಿದೆಯೇ?

ಒಬ್ಬ ವ್ಯಕ್ತಿ ನಿಜಕ್ಕೂ ಬದುಕಿದ್ದಾನೆಂದು ತಿಳಿಯುವುದೇ ಅವನಲ್ಲಿರುವ ಅದಮ್ಯ ಕುತೂಹಲದಿಂದ. ಎಲ್ಲವನ್ನೂ ಒಳಗೊಂಡ ಬದುಕನ್ನು ತಿಳಿಯಬೇಕೆಂದು ಪ್ರಶ್ನೆ ಮೇಲೆ ಪ್ರಶ್ನೆ ಹಾಕುವ ವ್ಯಕ್ತಿ, ಉತ್ತರಗಳನ್ನು ಅರಸುವ ವ್ಯಕ್ತಿ ಸದಾಕಾಲ ಜೀವಂತವಾಗಿರುತ್ತಾನೆ.
ಇಲ್ಲದಿದ್ದವನು ಬದುಕಿದ್ದೂ ಸತ್ತಂತೆ!

ಪ್ರಿಯ ಸಖಿ, ನಾವೂ ಬದುಕಲು ಒಂದಿಷ್ಟು ಸಮಯ ಮಾಡಿಕೊಳ್ಳೋಣ. ಜಗತ್ತು ನಮಗಾಗಿ ನೀಡಲು ಕಾದಿರುವ ಎಲ್ಲವನ್ನೂ ಆಸ್ವಾದಿಸೋಣ. ಪ್ರಶ್ನೆಗಳೂ ನಮ್ಮನ್ನು ಕಾಡಲಿ. ಉತ್ತರಗಳಿಗಾಗಿ ಹುಡುಕಾಡೋಣ. ಎಲ್ಲಕ್ಕೂ ಮೊದಲು ಹೃದಯ ತೆರೆದು ಬದುಕಲು ಪ್ರಯತ್ನಿಸೋಣ. ನೀನೇನನ್ನುತ್ತೀ ಸಖಿ? ಸಮಯ ಮೀರುತ್ತಿದೆ ಇನ್ನು ಬರಲೆ?
*****

Tagged:

Leave a Reply

Your email address will not be published. Required fields are marked *

ಭಾಗ ೧ ಒಂದು ಯುನಿವರ್ಸಿಟೀನಲ್ಲಿ ಆಧ್ಯಾಪಕನಾಗಿರುವ ನಾನು ಕ್ಯಾಂಪಸ್ ಆವರಣದೊಳಗೇ ಇರುವ ಫ್ಲಾಟೊಂದರಲ್ಲಿ ಹೆಂಡತಿ ಮಕ್ಕಳ ಜತೆ ಮನೆ ಮಾಡಿಕೊಂಡಿದ್ದೇನೆ. ಮನೆ ಮತ್ತು ಆಫೀಸಿಗೆ ಹೆಚ್ಚೇನೂ ದೂರವಿಲ್ಲದ ಕಾರಣ ವಾಹನಗಳಿಗೆ ವೃಥಾ ಕಾಸು ಖರ್ಚು ಮಾಡಬೇಕಾದುದಿಲ್ಲ. ಮಧ್ಯಾಹ್ನ ಲಂಚಿಗೆ ಕೂಡ ಮನ...

ಬಣಸಾಲೆ ಮುಂದಿನಿಂದ ಹೆಜ್ಜೆ ಹಾಕುವಾಗ ಹೊತ್ತು ಕಂತಿದ್ದು ಲಕ್ಷ್ಯಕ್ಕೆ ಬಂದಿರಲಿಲ್ಲ. ಆಚೀಚಿನ ಹನೆಮರದೆತ್ತರದ ತೇಗ-ಮಾವುಗಳ ಟಿಸಿಲುಗಳಲ್ಲಿ ಹಕ್ಕಿಗಳ ಗರಿ ಒದರುವ ಸರಪರ. ತಾರಕ ಸ್ವರದ ಮಕ್ಕಳಾಟ ವೀಕ್ಷಿಸುತ್ತಾ ರಸ್ತೇಲಿ ಬಿದ್ದಿದ್ದ ಸಣ್ಣ ಸಣ್ಣ ಕಲ್ಲುಗಳನ್ನು ಕಾಲಿನಿಂದ ಚಿಮ್ಮುತ್ತಾ...

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...