Home / ಕವನ / ಕವಿತೆ / ಅವನು-ಅವಳು

ಅವನು-ಅವಳು

ಕಲನಾದಿನಿ ಕಾವೇರಿಯ ತೀರದಿ
ತನ್ನನೆ ನೆನೆಯುತಲವನಿದ್ದ;
ತನ್ನ ಬಿಜ್ಜೆ ಕುಲ ಶೀಲ ಸಂಪತ್ತು
ತನ್ನ ರೂಪು ತನ್ನೊಳೆ ಇದ್ದ.

ತನ್ನವರೊಲ್ಲದ ಸರಸತಿ ನವವಧು
ಗಂಡನ ಮಡಿವಾಳಿತಿಯಾಗಿ
ಹಿಂಡುಬಟ್ಟೆಗಳ ಹಿಂಡಲು ಬಂದಳು
ಜವ್ವನದುಲ್ಲಸದೊಳು ತೂಗಿ.

ಕರೆಯೊಳಗಿಬ್ಬರೆ-ಆರೋ ಎನ್ನುತ
ಸೆರಗೆದೆಗೆಳೆವಳು ನಾಚುತಲಿ,
ಬಳಿಕಿವನೇ-ಸರಿ-ಭಯವೇನೆನ್ನುತ
ಹೊಳೆಗಿಳಿವಳು ನಿರ್ಲಕ್ಷ್ಯದಲಿ.

ಬಿಂಕದವನೀತ, ಬಿಂಕದವಳಾಕೆ,
ಮೌನ ನೆರವು ಮನ ಮಾತಾಡೆ;
ಕಣ್ ಕಣ್ ಕೂಟವೆ ಸಾಕಾಯ್ತವರಿಗೆ
ಬೇಟದ ಬಿರುನುಡಿ ಸಿಡಿದಾಡೆ.

“ಆಹಾ ನೀ ಸುಂದರಿ, ದಿಟ, ಆದೊಡೆ
ಮರುಕವ ತರುವುದು ಈ ಚೆಲುವು;
ಇದರಿಂಬಿಗೆ ನಿರ್ಭಾಗ್ಯರ ಮನೆಯೇ?
ಎನ್ನುತ ಸುಯ್ಯುವುದೆನ್ನೊಲವು.”

ಎನಲಾಕೆಯು ತಾತ್ಸಾರದಿ ನುಡಿವಳು:
“ನಿನ್ನ ಮರುಕವಾರಿಗೆ ಬೇಕು!
ಸುಮ್ಮನಿರೈ ನನ್ನಿದಿರೇ ಈ ಹಿಡಿ-
ಹೊನ್ನಳತೆಯ ನೇಹದ ಕಾಕು”

ಎನೆ ಅವನಿಂತೆಂದನು ನಸು ನಾಚುತ:
“ತಪ್ಪು ತಪ್ಪು ನಮ್ಮಪ್ಪನದೊಪ್ಪಿದೆ;
ಹಣಕೂ ಮಿಗಿಲಾಯ್ತಭಿಮಾನ
ಕೇಳಿದ ತಪ್ಪಿಗೆ ಕೊಡೆನೆನ್ನುವ ತ-
ಪ್ಪೀ ಹೋರಾಟದಿ ಸೊಗವೂನ.”

ಸರಸತಿ ಮೌನದೊಳೇ ಮರನುಡಿದಳು:
“ತಪ್ಪೋ ಒಪ್ಪೋ ಸೊಗವೋ ಸುಯ್ಯಲೊ
ನಿನ್ನದು ನಿನಗೆನ್ನದು ನನಗೆ-
ನಿನ್ನವರ ಬಿಂಕಕೆನ್ನೊಲವೆ ಸುಂಕ?
ಪೋ, ಇನ್ನಾ ಮಾತೇಕೆಮಗೆ!

ನಿನ್ನ ರೂಪ ಸಿರಿ ಬಿಚ್ಚೆ ಬಿಗುಮಾನ
ನಿನಗೆಯೆ ಇರಲೇ ಪಿತೃಭಕ್ತಿ-
ಇದೆ ಸಾಕಿದೆಸಾಕಿದೆಸಾಕೆನಗೀ
ಬಡವರ ನೆರವಿನೊಳೇ ಮುಕ್ತಿ.”

ಬಿರುಸಿನೊಳೊಗೆಯುವ ಬಟ್ಟೆಯ ಸದ್ದಿನೊ-
ಳೀ ತೆರ ಬಿರುನುಡಿಗಳ ನುಡಿದು
ಕಜ್ಜ ತೀರೆ ಮೇಲೆದ್ದು ನಡೆದಳು
ರೂಪಶೀಲದಿಂದೆದೆ ಕಡೆದು.

ಹುಸಿಮರುಕದ ಹೊಗೆಯಾರುತಲಾಸೆಯ
ಕಿಡಿಯುರಿದೊಲುಮೆಯ ಬೆಳಕಾಗಿ
ಬಿಂಕವ ಸುಟ್ಟು ನಿರಾಸೆಯ ತೋರಲು
ಎಂತು ಸುಯ್ದನವ ನಿಡಿದಾಗಿ!
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...