Home / ಲೇಖನ / ಇತರೆ / ಸಾವು

ಸಾವು

ಪ್ರಿಯ ಸಖಿ,
ಅಸಹಜ ಸಾವನ್ನು ಕಂಡು ಮನಕರಗದವರುಂಟೇ? ಸಾವು ಎಲ್ಲ ಜೀವಿಗೂ ಸಹಜವೇ. ಬೇಕಾದುದೇ. ಕವಿ ಪೇಜಾವರ ಸದಾಶಿವರಾಯರು ತಮ್ಮ ‘ಸಾವು’ ಎಂಬ ಸುನೀತದಲ್ಲಿ
(ಸಾನೆಟ್)

ಸಾವು ಸಹಜವು ನಿಜವೆ. ಸಾವಿಲ್ಲದೊಡೆ ಬಾಳು
ನೋವಿನೋಲುಗ ಜೀವದಾಧಿಕ್ಯಗೋಳು

ಎನ್ನುತ್ತಾರೆ. ತುಂಬು ಬಾಳನು ಬಾಳಿ ಸಾವಿಗೀಡಾದ ವ್ಯಕ್ತಿಯ ಬಗೆಗೆ ನಮಗಾಗುವ ದುಃಖದ ನೂರರಷ್ಟು ಪಾಲು ದುಃಖ ಕೊಲೆಯಾದ, ವೀರಮರಣದ ಹೆಸರಲ್ಲಿ ಸತ್ತ, ಆತ್ಮಹತ್ಯೆಗೊಳಗಾದ, ಅಪಘಾತದಿಂದ ಸತ್ತ ವ್ಯಕ್ತಿಯ ಇಂತಹ ಅಸಹಜ ಸಾವಿಗಾಗಿ ಆಗುತ್ತದೆ. ಇಂತಹ ಸಾವಿಗಾಗಿ ಮರುಗುತ್ತಾ ಕವಿ,

ಯಾರ ಹಸಿವಿಂಗಿಸಲು, ಯಾರ ಮದ ಭಂಗಿಸಲು
ಕೂರಲಗ ಕತ್ತಿಯಲಿ ನೆತ್ತರಿನ ಭುಗಿಲು?

ಎಂದು ಪ್ರಶ್ನಿಸುತ್ತಾರೆ. ಇಂತಹ ಅಸಹಜ ಸಾವುಗಳಿಗೆ ಕಾರಣವಾದರೂ ಏನು? ಎನ್ನುತ್ತಾ,

ಕಾವ ಕರುಣೆಯ ನಯದ ತೋಳ ತೊಂಗಲಿನಲ್ಲಿ
ಜೀವ ದುಂಬಿಯ ಆಟ

ಎಂದು ವಿಷಾದಿಸುತ್ತಾರೆ. ಕಾಯುವ ಕರುಣೆಯನ್ನು ನಂಬಿ ನೆಮ್ಮದಿಯಾಗಿರುವಾಗ ಕೊಲ್ಲುವಾಟವ ಆಡುವ ಈ ಆಳ್ವಿಕೆಗೆ ಉತ್ತರವೆಲ್ಲಿದೆ ? ಎನ್ನುತ್ತಾ, ಪದ್ಯದ ಕೊನೆಯಲ್ಲಿ

ಕೊಲೆಯು ಜೀವದ ಕೊನೆಯೆ! ಬಾಳು ಸಾವಿನ ಆಳೆ!
ಜಗದ ಸೌಂದರ್ಯದಂತಕನ ಸೂಳೆ!

ಎಂದು ಮಾರ್ಮಿಕವಾಗಿ ನುಡಿಯುತ್ತಾರೆ. ವಿಶೇಷ ಮಾನವ ಜನ್ಮ ಪಡೆದು ತನ್ನ ಜೀವನದ ಅಲ್ಪ ಭಾಗವನ್ನು, ಅನುಭವಿಸಿರದಾಗ ಕೊಲೆಯೇ ಜೀವದ ಕೊನೆಯಾಗಬೇಕೆ? ಈ ಬಾಳೆಂಬುದು ಸಾವು ಹೇಳಿದಂತೆ ಕೇಳುವ ಆಳಾಗಬೇಕೆ? ಎನ್ನುತ್ತಾ ಜಗತ್ತಿನ ಸೌಂದರ್ಯವೆನ್ನುವುದು ಅಂತಕ ಬೇಕೆನ್ನುವಂತೆ ಕುಣಿಸುವ,
ಕೊನೆಗಾಣಿಸುವ ಸೂಳೆಯೆ? ಎಂದು ಪ್ರಶ್ನಿಸುತ್ತಾರೆ. ಹೌದು ಅಸಹಜ ಸಾವನ್ನು ತಡೆಯಲು ಇಲ್ಲಿ ಯಾರಿಗೂ ಸಾಧ್ಯವಿಲ್ಲ. ಇಂತಹ ಅಸಹಜ ಸಾವಿಗೆ ಆ ಅಂತಕ
ಉತ್ತರ ಕೊಡಬಲ್ಲನೇ ಸಖಿ?
*****

Tagged:

Leave a Reply

Your email address will not be published. Required fields are marked *

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...

ಕಾಲ ಹನ್ನೆರಡನೆ ಶತಮಾನ. ದೇಶ ಜಪಾನ್. ಅರಸನ ಹೆಸರು ಅಂತೋಕು. ವಯಸ್ಸು ಕೇವಲ ಏಳು ಸಂವತ್ಸರಗಳು. ಅಂತೋಕು ಹೈಕೆ ಎಂಬ ಸಾಮುರಾಯ ದಳದ ನಾಮ ಮಾತ್ರ ಮುಂದಾಳುವಾಗಿದ್ದು ನಿಜವಾದ ಅಧಿಕಾರ ಇವನ ಅಜ್ಜಮ್ಮನ ಕೈಯಲ್ಲಿತ್ತು. ಅಜ್ಜಮ್ಮನ ಹೆಸರು ನೀ ಎಂದು. ನೀಯ ಜವಾಬ್ದಾರಿ ಗುರುತರವಾಗಿತ್ತು ಎಂದು...

ಶೇಖರನಿಗೆ ಇನ್ನೂ ಎರಡು ದಿನಗಳ ‘ವಾರ’ ಕಡಿಮೆ ಬಿದ್ದಿತ್ತು. ಎಲ್ಲಿಯೂ ಹುಟ್ಟುವಂತೆ ತೋರಲಿಲ್ಲ. ಶ್ರೀಮಾನ್ ಪದ್ಮನಾಭ ಹೆಬ್ಬಾರರ ಮನೆಯಲ್ಲಿ ಕೇಳಬೇಕೆಂದು ನಾಲ್ಕಾರು ಸಲ ಯೋಚಿಸಿದ. ಆದರೆ ಅವರು ಭಿಕ್ಷುಕರನ್ನೂ, ವರ್ಗಣಿ ಕೇಳುವವರನ್ನೂ ವಾರದ ಮಾಣಿಗಳನ್ನೂ ಅಂಗಳಕ್ಕೂ ಬರಗೊ...