Home / ಲೇಖನ / ಇತರೆ / ಸಾವು

ಸಾವು

ಪ್ರಿಯ ಸಖಿ,
ಅಸಹಜ ಸಾವನ್ನು ಕಂಡು ಮನಕರಗದವರುಂಟೇ? ಸಾವು ಎಲ್ಲ ಜೀವಿಗೂ ಸಹಜವೇ. ಬೇಕಾದುದೇ. ಕವಿ ಪೇಜಾವರ ಸದಾಶಿವರಾಯರು ತಮ್ಮ ‘ಸಾವು’ ಎಂಬ ಸುನೀತದಲ್ಲಿ
(ಸಾನೆಟ್)

ಸಾವು ಸಹಜವು ನಿಜವೆ. ಸಾವಿಲ್ಲದೊಡೆ ಬಾಳು
ನೋವಿನೋಲುಗ ಜೀವದಾಧಿಕ್ಯಗೋಳು

ಎನ್ನುತ್ತಾರೆ. ತುಂಬು ಬಾಳನು ಬಾಳಿ ಸಾವಿಗೀಡಾದ ವ್ಯಕ್ತಿಯ ಬಗೆಗೆ ನಮಗಾಗುವ ದುಃಖದ ನೂರರಷ್ಟು ಪಾಲು ದುಃಖ ಕೊಲೆಯಾದ, ವೀರಮರಣದ ಹೆಸರಲ್ಲಿ ಸತ್ತ, ಆತ್ಮಹತ್ಯೆಗೊಳಗಾದ, ಅಪಘಾತದಿಂದ ಸತ್ತ ವ್ಯಕ್ತಿಯ ಇಂತಹ ಅಸಹಜ ಸಾವಿಗಾಗಿ ಆಗುತ್ತದೆ. ಇಂತಹ ಸಾವಿಗಾಗಿ ಮರುಗುತ್ತಾ ಕವಿ,

ಯಾರ ಹಸಿವಿಂಗಿಸಲು, ಯಾರ ಮದ ಭಂಗಿಸಲು
ಕೂರಲಗ ಕತ್ತಿಯಲಿ ನೆತ್ತರಿನ ಭುಗಿಲು?

ಎಂದು ಪ್ರಶ್ನಿಸುತ್ತಾರೆ. ಇಂತಹ ಅಸಹಜ ಸಾವುಗಳಿಗೆ ಕಾರಣವಾದರೂ ಏನು? ಎನ್ನುತ್ತಾ,

ಕಾವ ಕರುಣೆಯ ನಯದ ತೋಳ ತೊಂಗಲಿನಲ್ಲಿ
ಜೀವ ದುಂಬಿಯ ಆಟ

ಎಂದು ವಿಷಾದಿಸುತ್ತಾರೆ. ಕಾಯುವ ಕರುಣೆಯನ್ನು ನಂಬಿ ನೆಮ್ಮದಿಯಾಗಿರುವಾಗ ಕೊಲ್ಲುವಾಟವ ಆಡುವ ಈ ಆಳ್ವಿಕೆಗೆ ಉತ್ತರವೆಲ್ಲಿದೆ ? ಎನ್ನುತ್ತಾ, ಪದ್ಯದ ಕೊನೆಯಲ್ಲಿ

ಕೊಲೆಯು ಜೀವದ ಕೊನೆಯೆ! ಬಾಳು ಸಾವಿನ ಆಳೆ!
ಜಗದ ಸೌಂದರ್ಯದಂತಕನ ಸೂಳೆ!

ಎಂದು ಮಾರ್ಮಿಕವಾಗಿ ನುಡಿಯುತ್ತಾರೆ. ವಿಶೇಷ ಮಾನವ ಜನ್ಮ ಪಡೆದು ತನ್ನ ಜೀವನದ ಅಲ್ಪ ಭಾಗವನ್ನು, ಅನುಭವಿಸಿರದಾಗ ಕೊಲೆಯೇ ಜೀವದ ಕೊನೆಯಾಗಬೇಕೆ? ಈ ಬಾಳೆಂಬುದು ಸಾವು ಹೇಳಿದಂತೆ ಕೇಳುವ ಆಳಾಗಬೇಕೆ? ಎನ್ನುತ್ತಾ ಜಗತ್ತಿನ ಸೌಂದರ್ಯವೆನ್ನುವುದು ಅಂತಕ ಬೇಕೆನ್ನುವಂತೆ ಕುಣಿಸುವ,
ಕೊನೆಗಾಣಿಸುವ ಸೂಳೆಯೆ? ಎಂದು ಪ್ರಶ್ನಿಸುತ್ತಾರೆ. ಹೌದು ಅಸಹಜ ಸಾವನ್ನು ತಡೆಯಲು ಇಲ್ಲಿ ಯಾರಿಗೂ ಸಾಧ್ಯವಿಲ್ಲ. ಇಂತಹ ಅಸಹಜ ಸಾವಿಗೆ ಆ ಅಂತಕ
ಉತ್ತರ ಕೊಡಬಲ್ಲನೇ ಸಖಿ?
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...