Home / ಕವನ / ಕವಿತೆ / ನವಿರಂಗಿ

ನವಿರಂಗಿ

ಒಂದೂರಿನಲ್ಲಿ ಒಬ್ಬರಸಿದ್ದ
ಅವನುಡುಪೆಂದರೆ ಬಹು ಪ್ರಸಿದ್ದ.
ಒಮ್ಮೆಗೆ ಓಲಗದೊಳು ಕುಳಿತಿರಲು
ಬಂದೆರೆಡೆಗೆ ಇಬ್ಬರು ದರ್ಜಿಗಳು,
“ಕಂಡೂ ಕಾಣದ ತೆರ ನವಿರಾಗಿಹ
ಗಾಳಿಗು ಆಕಾಶಕು ತೆಳುವಾಗಿಹ
ಸೋಜಿಗದುಡುಪನು ಹೊಲಿಯುವೆ”ವೆಂದು
ಆಣೆಯನಿಟ್ಟರು ಎಲ್ಲರ ಮುಂದು.
ಅರಸಗೆ ಉಡುಪೆಂದರೆ ಬಲು ಆಸೆ.
ನಂಬಿಸಿತವನನು ಠಕ್ಕರ ಭಾಷೆ.
ಒಂದು ವರುಷ ಗಡುಬನು ಕೇಳಿದರು
ರಾಶಿಹೊನ್ನ ಮುಂಗಡ ಕೇಳಿದರು.
ಉಡುಪಿನಾಸೆಗರಸಸ್ತು ಎಂದ
ಅವರೆರೆತಕೆಲ್ಲಕ್ಕೂ “ಹ್ಞೂ” ಎಂದ.

ಇಂತು ಬೊಕ್ಕಸವ ಬರಿದನು ಮಾಡಿ
ನೆಯ್ಯುವ ಹೊಲಿಯುವ ಆಟವ ಹೂಡಿ
ಜಾಣರಿಗೇ ಇದು ಕಾಣುವುದೆಂದು
ಸಾಮಾನ್ಯರಿಗೆಂದಿಗು ಅಲ್ಲೊಂದು
ಬಂದವರಿಗೆಲ್ಲ ಬಯಲನೆ ತೋರಿ
ಇಲ್ಲದುಡುಪಿನಂದವನೇ ಸಾರಿ
ಎಲ್ಲರ ನಂಬಿಸಿದರು ದರ್ಜಿಗಳು.
ಇದರ ಮಾತನಡುಗೂಲಜ್ಜಿಗಳು
ಹರಡಿದರೆಲ್ಲೆಡೆ ಜಾತ್ರೆ ನೆರೆಯಿತು.
ದೊರೆ ಉಡುಪನುಡುವ ದಿನವೇರ್ಪಟ್ಟಿತು.
ಉಟ್ಟನರಸನೀ ಬಯಲುಬಟ್ಟೆಯ,
ಬೆತ್ತಲೆಯೊಳೆ ಕೊಂಡನು ಜನದಿಟ್ಟಿಯ!
“ಅಯ್ಯೋ! ಬರಿಮೈ” ಎಂದರು ಜನಮನದೊಳಗೆ,
“ಆಹಾ ವಸ್ತ್ರದ ನವಿರೆಂಥದು!” ಎಂದರು ಹೊರಗೆ.
ಆದೊಡೆ ಮಗುವೊಂದು
“ಅಯ್ಯೋ ಬೆತ್ತಲೆಬಸವನ ನೋಡೆ”ಂದು
ಚಪ್ಪಳೆಯಿಕ್ಕಿತು; ಎಂಥ ದಿಟ್ಟತನ!
“ಹೌದೇ, ಬರಿಬೆತ್ತಲೆ!” ಎಂದರು ಊರ ಜನ
“ದಿಟ, ದಿಟ” ಪಿಸುಗುಟ್ಟಿತು ಪರಿವಾರ ;
ಅಳುಕಿ ಅಳುಕಿ “ಹೌದೆ”ಂದಿತು ಸರಕಾರ.
ಆಗರಸನು ಬೆಚ್ಚಿ
“ಕೆಚ್ಚಿನಿವರ ನೆಚ್ಚಿ”
ಎನ್ನುತ ಅವಮಾನಕೆ ಕಣ್ಮುಚ್ಚಿ
ಓಡಿದನರಮನೆಗೆ,
ತಿಂಗಳವರೆಗೂ ಬಾರದೆ ಹೊರಗೆ
ನೀವೇನೆನ್ನುವಿರೀ ಕತೆಗೆ?

ಈ ಕವನ ಹಾನ್ ಅನ್‌ಡೆರ್‌ಸೆನ್‌ ಅವರ ಕತಯೊಂದರ ಭಾವಾನುವಾದ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...