Home / ಕವನ / ಕವಿತೆ / ನವಿರಂಗಿ

ನವಿರಂಗಿ

ಒಂದೂರಿನಲ್ಲಿ ಒಬ್ಬರಸಿದ್ದ
ಅವನುಡುಪೆಂದರೆ ಬಹು ಪ್ರಸಿದ್ದ.
ಒಮ್ಮೆಗೆ ಓಲಗದೊಳು ಕುಳಿತಿರಲು
ಬಂದೆರೆಡೆಗೆ ಇಬ್ಬರು ದರ್ಜಿಗಳು,
“ಕಂಡೂ ಕಾಣದ ತೆರ ನವಿರಾಗಿಹ
ಗಾಳಿಗು ಆಕಾಶಕು ತೆಳುವಾಗಿಹ
ಸೋಜಿಗದುಡುಪನು ಹೊಲಿಯುವೆ”ವೆಂದು
ಆಣೆಯನಿಟ್ಟರು ಎಲ್ಲರ ಮುಂದು.
ಅರಸಗೆ ಉಡುಪೆಂದರೆ ಬಲು ಆಸೆ.
ನಂಬಿಸಿತವನನು ಠಕ್ಕರ ಭಾಷೆ.
ಒಂದು ವರುಷ ಗಡುಬನು ಕೇಳಿದರು
ರಾಶಿಹೊನ್ನ ಮುಂಗಡ ಕೇಳಿದರು.
ಉಡುಪಿನಾಸೆಗರಸಸ್ತು ಎಂದ
ಅವರೆರೆತಕೆಲ್ಲಕ್ಕೂ “ಹ್ಞೂ” ಎಂದ.

ಇಂತು ಬೊಕ್ಕಸವ ಬರಿದನು ಮಾಡಿ
ನೆಯ್ಯುವ ಹೊಲಿಯುವ ಆಟವ ಹೂಡಿ
ಜಾಣರಿಗೇ ಇದು ಕಾಣುವುದೆಂದು
ಸಾಮಾನ್ಯರಿಗೆಂದಿಗು ಅಲ್ಲೊಂದು
ಬಂದವರಿಗೆಲ್ಲ ಬಯಲನೆ ತೋರಿ
ಇಲ್ಲದುಡುಪಿನಂದವನೇ ಸಾರಿ
ಎಲ್ಲರ ನಂಬಿಸಿದರು ದರ್ಜಿಗಳು.
ಇದರ ಮಾತನಡುಗೂಲಜ್ಜಿಗಳು
ಹರಡಿದರೆಲ್ಲೆಡೆ ಜಾತ್ರೆ ನೆರೆಯಿತು.
ದೊರೆ ಉಡುಪನುಡುವ ದಿನವೇರ್ಪಟ್ಟಿತು.
ಉಟ್ಟನರಸನೀ ಬಯಲುಬಟ್ಟೆಯ,
ಬೆತ್ತಲೆಯೊಳೆ ಕೊಂಡನು ಜನದಿಟ್ಟಿಯ!
“ಅಯ್ಯೋ! ಬರಿಮೈ” ಎಂದರು ಜನಮನದೊಳಗೆ,
“ಆಹಾ ವಸ್ತ್ರದ ನವಿರೆಂಥದು!” ಎಂದರು ಹೊರಗೆ.
ಆದೊಡೆ ಮಗುವೊಂದು
“ಅಯ್ಯೋ ಬೆತ್ತಲೆಬಸವನ ನೋಡೆ”ಂದು
ಚಪ್ಪಳೆಯಿಕ್ಕಿತು; ಎಂಥ ದಿಟ್ಟತನ!
“ಹೌದೇ, ಬರಿಬೆತ್ತಲೆ!” ಎಂದರು ಊರ ಜನ
“ದಿಟ, ದಿಟ” ಪಿಸುಗುಟ್ಟಿತು ಪರಿವಾರ ;
ಅಳುಕಿ ಅಳುಕಿ “ಹೌದೆ”ಂದಿತು ಸರಕಾರ.
ಆಗರಸನು ಬೆಚ್ಚಿ
“ಕೆಚ್ಚಿನಿವರ ನೆಚ್ಚಿ”
ಎನ್ನುತ ಅವಮಾನಕೆ ಕಣ್ಮುಚ್ಚಿ
ಓಡಿದನರಮನೆಗೆ,
ತಿಂಗಳವರೆಗೂ ಬಾರದೆ ಹೊರಗೆ
ನೀವೇನೆನ್ನುವಿರೀ ಕತೆಗೆ?

ಈ ಕವನ ಹಾನ್ ಅನ್‌ಡೆರ್‌ಸೆನ್‌ ಅವರ ಕತಯೊಂದರ ಭಾವಾನುವಾದ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...