Home / ಕವನ / ಕವಿತೆ / ನವಿರಂಗಿ

ನವಿರಂಗಿ

ಒಂದೂರಿನಲ್ಲಿ ಒಬ್ಬರಸಿದ್ದ
ಅವನುಡುಪೆಂದರೆ ಬಹು ಪ್ರಸಿದ್ದ.
ಒಮ್ಮೆಗೆ ಓಲಗದೊಳು ಕುಳಿತಿರಲು
ಬಂದೆರೆಡೆಗೆ ಇಬ್ಬರು ದರ್ಜಿಗಳು,
“ಕಂಡೂ ಕಾಣದ ತೆರ ನವಿರಾಗಿಹ
ಗಾಳಿಗು ಆಕಾಶಕು ತೆಳುವಾಗಿಹ
ಸೋಜಿಗದುಡುಪನು ಹೊಲಿಯುವೆ”ವೆಂದು
ಆಣೆಯನಿಟ್ಟರು ಎಲ್ಲರ ಮುಂದು.
ಅರಸಗೆ ಉಡುಪೆಂದರೆ ಬಲು ಆಸೆ.
ನಂಬಿಸಿತವನನು ಠಕ್ಕರ ಭಾಷೆ.
ಒಂದು ವರುಷ ಗಡುಬನು ಕೇಳಿದರು
ರಾಶಿಹೊನ್ನ ಮುಂಗಡ ಕೇಳಿದರು.
ಉಡುಪಿನಾಸೆಗರಸಸ್ತು ಎಂದ
ಅವರೆರೆತಕೆಲ್ಲಕ್ಕೂ “ಹ್ಞೂ” ಎಂದ.

ಇಂತು ಬೊಕ್ಕಸವ ಬರಿದನು ಮಾಡಿ
ನೆಯ್ಯುವ ಹೊಲಿಯುವ ಆಟವ ಹೂಡಿ
ಜಾಣರಿಗೇ ಇದು ಕಾಣುವುದೆಂದು
ಸಾಮಾನ್ಯರಿಗೆಂದಿಗು ಅಲ್ಲೊಂದು
ಬಂದವರಿಗೆಲ್ಲ ಬಯಲನೆ ತೋರಿ
ಇಲ್ಲದುಡುಪಿನಂದವನೇ ಸಾರಿ
ಎಲ್ಲರ ನಂಬಿಸಿದರು ದರ್ಜಿಗಳು.
ಇದರ ಮಾತನಡುಗೂಲಜ್ಜಿಗಳು
ಹರಡಿದರೆಲ್ಲೆಡೆ ಜಾತ್ರೆ ನೆರೆಯಿತು.
ದೊರೆ ಉಡುಪನುಡುವ ದಿನವೇರ್ಪಟ್ಟಿತು.
ಉಟ್ಟನರಸನೀ ಬಯಲುಬಟ್ಟೆಯ,
ಬೆತ್ತಲೆಯೊಳೆ ಕೊಂಡನು ಜನದಿಟ್ಟಿಯ!
“ಅಯ್ಯೋ! ಬರಿಮೈ” ಎಂದರು ಜನಮನದೊಳಗೆ,
“ಆಹಾ ವಸ್ತ್ರದ ನವಿರೆಂಥದು!” ಎಂದರು ಹೊರಗೆ.
ಆದೊಡೆ ಮಗುವೊಂದು
“ಅಯ್ಯೋ ಬೆತ್ತಲೆಬಸವನ ನೋಡೆ”ಂದು
ಚಪ್ಪಳೆಯಿಕ್ಕಿತು; ಎಂಥ ದಿಟ್ಟತನ!
“ಹೌದೇ, ಬರಿಬೆತ್ತಲೆ!” ಎಂದರು ಊರ ಜನ
“ದಿಟ, ದಿಟ” ಪಿಸುಗುಟ್ಟಿತು ಪರಿವಾರ ;
ಅಳುಕಿ ಅಳುಕಿ “ಹೌದೆ”ಂದಿತು ಸರಕಾರ.
ಆಗರಸನು ಬೆಚ್ಚಿ
“ಕೆಚ್ಚಿನಿವರ ನೆಚ್ಚಿ”
ಎನ್ನುತ ಅವಮಾನಕೆ ಕಣ್ಮುಚ್ಚಿ
ಓಡಿದನರಮನೆಗೆ,
ತಿಂಗಳವರೆಗೂ ಬಾರದೆ ಹೊರಗೆ
ನೀವೇನೆನ್ನುವಿರೀ ಕತೆಗೆ?

ಈ ಕವನ ಹಾನ್ ಅನ್‌ಡೆರ್‌ಸೆನ್‌ ಅವರ ಕತಯೊಂದರ ಭಾವಾನುವಾದ.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...