Home / ಲೇಖನ / ಇತರೆ / ಉಭಯ ಸಂಕಟ

ಉಭಯ ಸಂಕಟ

ಪ್ರಿಯ ಸಖಿ,

ಹೇಳಿದರೆ ಹಾಳಾಗುವುದೋ ಈ ಅನುಭವದ ಸವಿಯು
ಹೇಳದಿರೆ ತಾಳಲಾರನೋ ಕವಿಯು!

ಕುವೆಂಪು ಅವರು ‘ಉಭಯ ಸಂಕಟ’ ಕವನದ ಈ ಸಾಲುಗಳು ಎಷ್ಟೊಂದು ಮಾರ್ಮಿಕ ವಾಗಿವೆಯಲ್ಲವೇ?’

ಎದೆಯೊಳಗೆ ಅವ್ಯಕ್ತವಾಗಿರುವ ಭಾವಗಳು ತಕ್ಕ ಮೂರ್ತರೂಪ ಪಡೆಯುವುದು ಎಂತಾ ಕಷ್ಟದ ಕೆಲಸ! ಆ ಕಷ್ಟ ಕವಿಯೊಬ್ಬಗೇ ಗೊತ್ತು! ಅನುಭವದ ಸವಿಯನ್ನು ಎಂತಾ ತಕ್ಕ ಪದಗಳಿಂದಲೂ ವರ್ಣಿಸಲು ಅಸಾಧ್ಯ. ಇದು ಭಾಷೆಯ ಸೋಲೋ? ಕವಿಯ ಸೋಲೋ? ಯಾವುದೇ ವ್ಯಕ್ತ ಭಾವಗಳೂ ಅವು ಅವ್ಯಕ್ತವಾಗಿದ್ದಾಗಲೆ ಸುಂದರವಾಗಿತ್ತು ಎನ್ನಿಸಿದರೆ ಅಂದೊಂದು ಸೋಲೇ ತಾನೇ? ಬಹುಶಃ ಕವಿಯೊಬ್ಬನ ಮಿತಿಯೂ ಇದೇ ಏನೋ?

ಆದರೆ ಹೇಳದಿದ್ದರೆ ತಾಳಲಾಗುವುದೂ ಇಲ್ಲವೆಂಬ ತುಡಿತ ಕವಿಗೆ ಮೂಡಿದಾಗ ಆತ ಏನು ಮಾಡಬೇಕು ? ಎದೆಯೊಳಗಿಂದಾ ಭಾವಗಳು ಒತ್ತಿ ಬಂದಾಗ ಆತ ಬರೆಯದೆಯೂ ಉಳಿಯಲಾರ! ಸಮರ್ಥ ಕವಿಯೊಬ್ಬ ತನ್ನ ಅಮೂರ್ತ ಭಾವಗಳಿಗೆ ತನ್ನ ಮಿತಿಯಲ್ಲೆ ಸಮರ್ಥ ಮೂರ್ತರೂಪ ಕೊಡಬಲ್ಲನಲ್ಲವೇ?

ಆದರೆ ಇಂಥಾ ಯಾವ ಒತ್ತಡಗಳೂ ಇಲ್ಲದೇ ಬಲವಂತವಾಗಿ ಹುಟ್ಟಿಸಿದ ಕವನ, ಕಷ್ಟಪಟ್ಟು ಪದ ಪದಗಳನ್ನು ಜೋಡಿಸಿ ಮಾಡಿದ ಜಾಳು ಪದ್ಯ. ಇತ್ತ ಭಾವಗಳ ಸಮರ್ಥ ಅಭಿವ್ಯಕ್ತಿಯೂ ಆಗುವುದಿಲ್ಲ. ಅತ್ತ ಸುಂದರ ಕವನ ಎನ್ನಿಸಿಕೊಳ್ಳುವುದೂ ಇಲ್ಲ.

ಹೇಳಿಬಿಟ್ಟಿರೆ ಅನುಭವದ ಸವಿ ಹಾಳಾಗಿ ಬಿಟ್ಟೀತೆಂಬ ಚಡಪಡಿಕೆ ಹೇಳದೇ ಉಳಿದರೆ ತಾಳಲಾಗದಂತಹ ಒತ್ತಡ, ಇಂತಹ ಉಭಯಸಂಕಟದ ಮೂಸೆಯಲ್ಲಿ ಪ್ರತಿಯೊಬ್ಬ ಕವಿಯೂ ಹದವಾಗಿ ಬೇಯಬೇಕು. ಆಗಲೇ ಉತ್ತಮ ಕವನ, ಸಮರ್ಥ ಅಭಿವ್ಯಕ್ತಿ ಹೊರಬೀಳಬಹುದಲ್ಲವೇ? ನೀನೇನನ್ನುತ್ತೀ ಸಖಿ?
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...