Home / ಲೇಖನ / ಇತರೆ / ಉಭಯ ಸಂಕಟ

ಉಭಯ ಸಂಕಟ

ಪ್ರಿಯ ಸಖಿ,

ಹೇಳಿದರೆ ಹಾಳಾಗುವುದೋ ಈ ಅನುಭವದ ಸವಿಯು
ಹೇಳದಿರೆ ತಾಳಲಾರನೋ ಕವಿಯು!

ಕುವೆಂಪು ಅವರು ‘ಉಭಯ ಸಂಕಟ’ ಕವನದ ಈ ಸಾಲುಗಳು ಎಷ್ಟೊಂದು ಮಾರ್ಮಿಕ ವಾಗಿವೆಯಲ್ಲವೇ?’

ಎದೆಯೊಳಗೆ ಅವ್ಯಕ್ತವಾಗಿರುವ ಭಾವಗಳು ತಕ್ಕ ಮೂರ್ತರೂಪ ಪಡೆಯುವುದು ಎಂತಾ ಕಷ್ಟದ ಕೆಲಸ! ಆ ಕಷ್ಟ ಕವಿಯೊಬ್ಬಗೇ ಗೊತ್ತು! ಅನುಭವದ ಸವಿಯನ್ನು ಎಂತಾ ತಕ್ಕ ಪದಗಳಿಂದಲೂ ವರ್ಣಿಸಲು ಅಸಾಧ್ಯ. ಇದು ಭಾಷೆಯ ಸೋಲೋ? ಕವಿಯ ಸೋಲೋ? ಯಾವುದೇ ವ್ಯಕ್ತ ಭಾವಗಳೂ ಅವು ಅವ್ಯಕ್ತವಾಗಿದ್ದಾಗಲೆ ಸುಂದರವಾಗಿತ್ತು ಎನ್ನಿಸಿದರೆ ಅಂದೊಂದು ಸೋಲೇ ತಾನೇ? ಬಹುಶಃ ಕವಿಯೊಬ್ಬನ ಮಿತಿಯೂ ಇದೇ ಏನೋ?

ಆದರೆ ಹೇಳದಿದ್ದರೆ ತಾಳಲಾಗುವುದೂ ಇಲ್ಲವೆಂಬ ತುಡಿತ ಕವಿಗೆ ಮೂಡಿದಾಗ ಆತ ಏನು ಮಾಡಬೇಕು ? ಎದೆಯೊಳಗಿಂದಾ ಭಾವಗಳು ಒತ್ತಿ ಬಂದಾಗ ಆತ ಬರೆಯದೆಯೂ ಉಳಿಯಲಾರ! ಸಮರ್ಥ ಕವಿಯೊಬ್ಬ ತನ್ನ ಅಮೂರ್ತ ಭಾವಗಳಿಗೆ ತನ್ನ ಮಿತಿಯಲ್ಲೆ ಸಮರ್ಥ ಮೂರ್ತರೂಪ ಕೊಡಬಲ್ಲನಲ್ಲವೇ?

ಆದರೆ ಇಂಥಾ ಯಾವ ಒತ್ತಡಗಳೂ ಇಲ್ಲದೇ ಬಲವಂತವಾಗಿ ಹುಟ್ಟಿಸಿದ ಕವನ, ಕಷ್ಟಪಟ್ಟು ಪದ ಪದಗಳನ್ನು ಜೋಡಿಸಿ ಮಾಡಿದ ಜಾಳು ಪದ್ಯ. ಇತ್ತ ಭಾವಗಳ ಸಮರ್ಥ ಅಭಿವ್ಯಕ್ತಿಯೂ ಆಗುವುದಿಲ್ಲ. ಅತ್ತ ಸುಂದರ ಕವನ ಎನ್ನಿಸಿಕೊಳ್ಳುವುದೂ ಇಲ್ಲ.

ಹೇಳಿಬಿಟ್ಟಿರೆ ಅನುಭವದ ಸವಿ ಹಾಳಾಗಿ ಬಿಟ್ಟೀತೆಂಬ ಚಡಪಡಿಕೆ ಹೇಳದೇ ಉಳಿದರೆ ತಾಳಲಾಗದಂತಹ ಒತ್ತಡ, ಇಂತಹ ಉಭಯಸಂಕಟದ ಮೂಸೆಯಲ್ಲಿ ಪ್ರತಿಯೊಬ್ಬ ಕವಿಯೂ ಹದವಾಗಿ ಬೇಯಬೇಕು. ಆಗಲೇ ಉತ್ತಮ ಕವನ, ಸಮರ್ಥ ಅಭಿವ್ಯಕ್ತಿ ಹೊರಬೀಳಬಹುದಲ್ಲವೇ? ನೀನೇನನ್ನುತ್ತೀ ಸಖಿ?
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...