Home / ಲೇಖನ / ಇತರೆ / ಸಣ್ಣ ಸಂಗತಿ

ಸಣ್ಣ ಸಂಗತಿ

ಪ್ರಿಯ ಸಖಿ,
ಮೊನ್ನೆ ಕೆ. ಎಸ್. ನರಸಿಂಹಸ್ವಾಮಿಗಳ ‘ಸಣ್ಣ ಸಂಗತಿ’ ಎಂಬ ಒಂದು ಸುನೀತ (ಸಾನೆಟ್)ವನ್ನು ಓದುತ್ತಿದ್ದೆ.. ಕವನದ ಹೆಸರೇ ಸೂಚಿಸುವಂತೆ ಕವಿ ಅಲ್ಲಿ ಹಿಡಿದಿಟ್ಟ ಚಿತ್ರ ಅತ್ಯಂತ ಸಣ್ಣ ಸಂಗತಿ. ಆದರೆ ಅದರಲ್ಲಿರುವ ಧ್ವನಿ ಮಾತ್ರ ಮಹತ್ತರ ವಾದುದು. ಕವಿ ಚಿತ್ರಿಸಿರುವ ಆ ಸಣ್ಣ ಸಂಗತಿಯಾದರೋ ಇಷ್ಟೆ ಸೋನೆ ಮಳೆ ಹಿಡಿದ ನಡುರಾತ್ರಿ. ಇತ್ತ ಮನೆಯೊಳಗೆ ಪುಟ್ಟ ಮಗುವೊಂದು ಮಂಚದ ಬಳಿಯ ತೊಟ್ಟಿಲಲ್ಲಿ ಅರ್ಧ ಕಣ್ಣು ಮುಚ್ಚಿ ಮಲಗಿದೆ. ಅದೂ ಬರಿಮೈಲಿ. ನಿದ್ದೆಗಣ್ಣಿನಲ್ಲೇ ಪಕ್ಕದಲ್ಲಿರುವ ತಾಯಿ ಕೈನೀಡಿ ಹೊದಿಕೆಯನ್ನು ಸರಿಪಡಿಸಿದ್ದಾಳೆ. ಆದರೆ ಮಗು
ಮತ್ತೆ ಹೊದಿಕೆಯನ್ನು ಕಿತ್ತೆಸೆದು ಬರಿ ಮೈಲಿ ಮಲಗುತ್ತದೆ. ಸುನೀತದ ಕೊನೆಯ ಎರಡು ಸಾಲು ಹೀಗಿದೆ.

ನಿದ್ದೆ ಎಚ್ಚರಗಳಲಿ ಪೊರೆವ ಕೈ ದುಡಿಯುತಿದೆ
ಅದನು ಲೆಕ್ಕಿಸದೆ ಮಗು ಹೊದಿಕೆಯನು ಒದೆಯುತಿದೆ

ಈ ಎರಡು ಸಾಲುಗಳಲ್ಲಿ ಎಂತಹಾ ಅರ್ಥ ತುಂಬಿದೆ ನೋಡಿದೆಯಾ ಸಖಿ. ತಾಯಿ-ಮಗುವಿನ ಸಂಬಂಧದಲ್ಲಾಗಲಿ ಸೃಷ್ಟಿಯೊಂದಿಗಿನ ಮಾನವನ
ಸಂಬಂಧದಲ್ಲಾಗಲಿ ತಾಯಿಯೂ ಸೃಷ್ಟಿಯೂ ಉನ್ನತವಾದ ಸ್ಥಾನದಲ್ಲಿ ನಿಂತು ಮಗುವೂ ಮಾನವನೂ ಅರಿತೂ ಮಾಡಿದ ತಪ್ಪುಗಳನ್ನು ಕ್ಷಮಿಸುತ್ತಲೇ ಇರುತ್ತಾರೆ. ಆದರೆ ಆ ಕ್ಷಮೆಗೆ ಬೆಲೆ ಕೊಡದ ಮಗು ಮಾನವ ತನ್ನ ಅಹಂಕಾರದಿಂದ, ತಾ ಮಾಡಿದ್ದೇ ಸರಿಯೆಂಬ ಗರ್ವದಿಂದ ಅದೇ ತಪ್ಪುಗಳನ್ನು ಮತ್ತೆ ಮತ್ತೆ ಮಾಡುತ್ತಲೇ ಇರುತ್ತಾನೆ. ಬಹುಶಃ ತಾಯಿಯೂ ಸೃಷ್ಟಿಯೂ ತೋರುವ ಕ್ಷಮೆಗೆ, ಮಗುವಿನ-ಮಾನವನ ತಪ್ಪುಗಳಿಗೆ ಕೊನೆಯೆಂಬುದೇ ಇಲ್ಲ! ಆದರೆ ತಾಯಿಯ ಸೃಷ್ಟಿಯ ಅಖಂಡ ಕ್ಷಮೆಗೂ ಮಿತಿಯೆಂಬುದೊಂದಿದೆ ಎಂದು ಅನ್ನಿಸುವುದಿಲ್ಲವೇ?  ಆ ಕ್ಷಮೆಯನ್ನು ಕಳೆದುಕೊಂಡ ಕೊನೆಯ ದಿನ ಬಹುಶಃ ಇಲ್ಲಿ ಏನೂ ಉಳಿದಿರುವುದಿಲ್ಲ! ಅಂತೂ ಮಾಡುವ ಅಂತಹಾ ಕ್ಷಮೆ ಇಲ್ಲದ ತಪ್ಪನ್ನು ನಾವ್ಯಾರೂ ಮಾಡದಂತೆ ಸಮಯ ಮೀರುವ ಮೊದಲೇ ಎಚ್ಚೆತ್ತುಕೊಳ್ಳಬೇಕಲ್ಲವೇ ಸಖಿ?

ಪೊರೆವ ಕೈಗಳ ದುಡಿಮೆಯನ್ನು ಲೆಕ್ಕಿಸದ ಮಗು ಹೊದಿಕೆಯನು ಮತ್ತೆ ಮತ್ತೆ ಒದೆದು ಮುಂದೊಮ್ಮೆ ಪೊರೆವ ಕೈಗಳ ಪ್ರೇಮವನ್ನೇ ಕಳೆದುಕೊಳ್ಳಬಾರದಲ್ಲವೇ ಸಖಿ?
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...