Home / ಲೇಖನ / ಇತರೆ / ಸಣ್ಣ ಸಂಗತಿ

ಸಣ್ಣ ಸಂಗತಿ

ಪ್ರಿಯ ಸಖಿ,
ಮೊನ್ನೆ ಕೆ. ಎಸ್. ನರಸಿಂಹಸ್ವಾಮಿಗಳ ‘ಸಣ್ಣ ಸಂಗತಿ’ ಎಂಬ ಒಂದು ಸುನೀತ (ಸಾನೆಟ್)ವನ್ನು ಓದುತ್ತಿದ್ದೆ.. ಕವನದ ಹೆಸರೇ ಸೂಚಿಸುವಂತೆ ಕವಿ ಅಲ್ಲಿ ಹಿಡಿದಿಟ್ಟ ಚಿತ್ರ ಅತ್ಯಂತ ಸಣ್ಣ ಸಂಗತಿ. ಆದರೆ ಅದರಲ್ಲಿರುವ ಧ್ವನಿ ಮಾತ್ರ ಮಹತ್ತರ ವಾದುದು. ಕವಿ ಚಿತ್ರಿಸಿರುವ ಆ ಸಣ್ಣ ಸಂಗತಿಯಾದರೋ ಇಷ್ಟೆ ಸೋನೆ ಮಳೆ ಹಿಡಿದ ನಡುರಾತ್ರಿ. ಇತ್ತ ಮನೆಯೊಳಗೆ ಪುಟ್ಟ ಮಗುವೊಂದು ಮಂಚದ ಬಳಿಯ ತೊಟ್ಟಿಲಲ್ಲಿ ಅರ್ಧ ಕಣ್ಣು ಮುಚ್ಚಿ ಮಲಗಿದೆ. ಅದೂ ಬರಿಮೈಲಿ. ನಿದ್ದೆಗಣ್ಣಿನಲ್ಲೇ ಪಕ್ಕದಲ್ಲಿರುವ ತಾಯಿ ಕೈನೀಡಿ ಹೊದಿಕೆಯನ್ನು ಸರಿಪಡಿಸಿದ್ದಾಳೆ. ಆದರೆ ಮಗು
ಮತ್ತೆ ಹೊದಿಕೆಯನ್ನು ಕಿತ್ತೆಸೆದು ಬರಿ ಮೈಲಿ ಮಲಗುತ್ತದೆ. ಸುನೀತದ ಕೊನೆಯ ಎರಡು ಸಾಲು ಹೀಗಿದೆ.

ನಿದ್ದೆ ಎಚ್ಚರಗಳಲಿ ಪೊರೆವ ಕೈ ದುಡಿಯುತಿದೆ
ಅದನು ಲೆಕ್ಕಿಸದೆ ಮಗು ಹೊದಿಕೆಯನು ಒದೆಯುತಿದೆ

ಈ ಎರಡು ಸಾಲುಗಳಲ್ಲಿ ಎಂತಹಾ ಅರ್ಥ ತುಂಬಿದೆ ನೋಡಿದೆಯಾ ಸಖಿ. ತಾಯಿ-ಮಗುವಿನ ಸಂಬಂಧದಲ್ಲಾಗಲಿ ಸೃಷ್ಟಿಯೊಂದಿಗಿನ ಮಾನವನ
ಸಂಬಂಧದಲ್ಲಾಗಲಿ ತಾಯಿಯೂ ಸೃಷ್ಟಿಯೂ ಉನ್ನತವಾದ ಸ್ಥಾನದಲ್ಲಿ ನಿಂತು ಮಗುವೂ ಮಾನವನೂ ಅರಿತೂ ಮಾಡಿದ ತಪ್ಪುಗಳನ್ನು ಕ್ಷಮಿಸುತ್ತಲೇ ಇರುತ್ತಾರೆ. ಆದರೆ ಆ ಕ್ಷಮೆಗೆ ಬೆಲೆ ಕೊಡದ ಮಗು ಮಾನವ ತನ್ನ ಅಹಂಕಾರದಿಂದ, ತಾ ಮಾಡಿದ್ದೇ ಸರಿಯೆಂಬ ಗರ್ವದಿಂದ ಅದೇ ತಪ್ಪುಗಳನ್ನು ಮತ್ತೆ ಮತ್ತೆ ಮಾಡುತ್ತಲೇ ಇರುತ್ತಾನೆ. ಬಹುಶಃ ತಾಯಿಯೂ ಸೃಷ್ಟಿಯೂ ತೋರುವ ಕ್ಷಮೆಗೆ, ಮಗುವಿನ-ಮಾನವನ ತಪ್ಪುಗಳಿಗೆ ಕೊನೆಯೆಂಬುದೇ ಇಲ್ಲ! ಆದರೆ ತಾಯಿಯ ಸೃಷ್ಟಿಯ ಅಖಂಡ ಕ್ಷಮೆಗೂ ಮಿತಿಯೆಂಬುದೊಂದಿದೆ ಎಂದು ಅನ್ನಿಸುವುದಿಲ್ಲವೇ?  ಆ ಕ್ಷಮೆಯನ್ನು ಕಳೆದುಕೊಂಡ ಕೊನೆಯ ದಿನ ಬಹುಶಃ ಇಲ್ಲಿ ಏನೂ ಉಳಿದಿರುವುದಿಲ್ಲ! ಅಂತೂ ಮಾಡುವ ಅಂತಹಾ ಕ್ಷಮೆ ಇಲ್ಲದ ತಪ್ಪನ್ನು ನಾವ್ಯಾರೂ ಮಾಡದಂತೆ ಸಮಯ ಮೀರುವ ಮೊದಲೇ ಎಚ್ಚೆತ್ತುಕೊಳ್ಳಬೇಕಲ್ಲವೇ ಸಖಿ?

ಪೊರೆವ ಕೈಗಳ ದುಡಿಮೆಯನ್ನು ಲೆಕ್ಕಿಸದ ಮಗು ಹೊದಿಕೆಯನು ಮತ್ತೆ ಮತ್ತೆ ಒದೆದು ಮುಂದೊಮ್ಮೆ ಪೊರೆವ ಕೈಗಳ ಪ್ರೇಮವನ್ನೇ ಕಳೆದುಕೊಳ್ಳಬಾರದಲ್ಲವೇ ಸಖಿ?
*****

Tagged:

Leave a Reply

Your email address will not be published. Required fields are marked *

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...