Home / ಲೇಖನ / ಇತರೆ / ಕಂದರಗಳು ತೆರೆದಿವೆ!

ಕಂದರಗಳು ತೆರೆದಿವೆ!

ಪ್ರಿಯ ಸಖಿ,
ಇತ್ತೀಚಿನ ಮಾಧ್ಯಮಗಳು ಎಷ್ಟು ಶಕ್ತಿಯುತವಾಗಿವೆಯೆಂದರೆ ಅವು ಪ್ರಪಂಚವನ್ನು ಹತ್ತಿರವಾಗಿಸಿವೆ ಎನ್ನುತ್ತಾರೆ. ಇದು ವ್ಯವಹಾರದ ಮಾತಾಯ್ತು. ಆದರೆ ಮಾನವನ ಮನಸ್ಸು? ಮನಸ್ಸುಗಳುಹತ್ತಿರವಾಗಿವೆಯೆ ? ಕವಿ ಜಿ. ಎಸ್. ಶಿವರುದ್ರಪ್ಪನವರು ವಿಷಾದದಿಂದ ಹೀಗೆ ಹೇಳುತ್ತಾರೆ.
ಎದೆ ಎದೆಗಳ
ನಡುವೆ ಇರುವ
ಸೇತುವೆಗಳು ಮುರಿದಿವೆ
ಭಯ, ಸಂಶಯ, ತಲ್ಲಣಗಳ
ಕಂದರಗಳು ತೆರೆದಿವೆ!

ಹೌದಲ್ಲವೇ ಸಖೀ ಇತ್ತೀಚೆಗೆ ಎಲ್ಲಾ ಸಂಬಂಧಗಳಲ್ಲೂ ಎಂತದೋ ಒಂದು ನಾಟಕೀಯತೆಯನ್ನು ಕಾಣುತ್ತಿದ್ದೇವೆ. ಇದು ಭಾವಪೂರ್ಣ, ಹೃದಯದಾಳದಿಂದ
ಬಂದ ಸಂವೇದನೆ ಎನ್ನಿಸುವುದೇ ಇಲ್ಲ. ಎಲ್ಲದರಲ್ಲಿಯೂ ಕೃತ್ರಿಮತೆ, ತೋರಿಕೆಯ ಆತ್ಮೀಯತೆ ಎದ್ದುಕಾಣುತ್ತದೆ. ಮನಸ್ಸು ಗೊಂದಲದಲ್ಲಿ ಸಿಲುಕಿ ಎಷ್ಟು
ಭಯಭೀತಗೊಂಡಿದೆಯೆಂದರೆ ಅದರಲ್ಲಿ ಸದಾ ಸಂಶಯ, ತಲ್ಲಣಗಳು ಧವಧವಿಸುತ್ತಿರುತ್ತವೆ. ಯಾರಮೇಲೆಯೂ ನಂಬಿಕೆ ಇಲ್ಲ. ಸ್ವತಹ ತನ್ನ ಮೇಲೂ ನ೦ಬಿಕೆ ಇಲ್ಲ. ಕವನವನ್ನು ಮು೦ದುವರೆಸುತ್ತಾ ಕವಿ
ಮುಖ ಮುಖವೂ
ಮುಖವಾಡವ
ತೊಟ್ಟುನಿಂತ ಹಾಗಿವೆ
ಆಡುತಿರುವ ಮಾತಿನೊಳಗೆ
ಹೃದಯ ಕಾಣದಾಗಿದೆ !

ಎನ್ನುತ್ತಾರೆ, ಇದೆಲ್ಲಾ ಪ್ರಾರಂಭವಾದದ್ದಾದರೂ ಎಲ್ಲಿಂದಾ ? ಮನಸ್ಸುಗಳ ಮಧ್ಯೆ ಮುರಿದು ಬಿದ್ದಿರುವ ಸೇತುವೆಗಳನ್ನು ಇನ್ನಾದರೂ ಸರಿಪಡಿಸಬೇಕಲ್ಲವೇ ಸಖಿ ? ವ್ಯಕ್ತಿ – ವ್ಯಕ್ತಿಯ ನಡುವಿನ ನಂಬಿಕೆಗಳು ಉಳಿಯಬೇಕಾದರೆ, ಉಳಿದು ಬೆಳೆಯಬೇಕಾದರೆ ವ್ಯಕ್ತಿ ಮೊದಲು ಪ್ರಾಮಾಣಿಕನಾಗಬೇಕು. ಅವನು ತೊಟ್ಟ ಎಲ್ಲ ಮುಖವಾಡಗಳನ್ನೂ ಕಿತ್ತೂಗೆದು, ನಿಜದ ಮುಖದೊಂದಿಗೆ ಮುಖಾಮುಖಿ ನಿಲ್ಲಬೇಕು. ಗೆಲ್ಲಬೇಕು. ಆಗಲೇ ಇತರರ ಮೇಲೆಯೂ ನಂಬಿಕೆ ಮೂಡೀತು! ಸೇತುವೆಗಳು ಎದ್ದೀತು! ಅಲ್ಲವೇ ಸಖಿ?
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...